ಹೃದಯಾಘಾತ ಸೇರಿದಂತೆ ಹಾವು ಹಾಗೂ ನಾಯಿ ಕಡಿತಕ್ಕೆ ಅಗತ್ಯ ಔಷಧಿ ಲಭ್ಯವಿರುವುದಾಗಿ ವೖದ್ಯರು ಮಾಹಿತಿ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಹೇಳಿದರು.
ದೇವನಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಶನಿವಾರ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರ ಒತ್ತಾಯದ ಮೇರೆಗೆ ಶೀಘ್ರದಲ್ಲಿಯೇ ಕಿದ್ವಾಯಿ ಆಸ್ಪತ್ರೆ ಸಹಯೋಗದೊಂದಿಗೆ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಆಯೋಜಿಸಲು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖಾ ಸಚಿವರೊಂದಿಗೆ ಸಮಾಲೋಚಿಸಲಾಗುವುದು ಎಂದರು.
ಆಸ್ಪತ್ರೆಗೆ ಬರುವ ಹೊರ ರೋಗಿಗಳ ತಪಾಸಣಾ ಶುಲ್ಕ 5 ರೂ. ಇದ್ದು ಬೇರೆ ಸಾರ್ವಜನಿಕ ಆಸ್ಪತ್ರೆಗಳಲ್ಲಿರುವಂತೆ 10 ರೂ.ಗಳಿಗೆ ಹೆಚ್ಚಿಸಲು ಸಮಿತಿಯಲ್ಲಿ ತೀರ್ಮಾನಿಸಲಾಯಿತು.
ಪ್ರತಿನಿತ್ಯ ಆಸ್ಪತ್ರೆಗೆ 400 ಕ್ಕೂ ಹೆಚ್ಚು ರೋಗಿಗಳು ತಪಾಸಣೆಗೆ ಆಗಮಿಸುತಿದ್ದು, ವೖದ್ಯರ ಮೇಲೆ ಒತ್ತಡ ಇದ್ದರೂ ಅಗತ್ಯದಷ್ಟು ಸಿಬ್ಬಂದಿಯಿರುವುದರಿಂದ ಒಳ್ಳೆಯ ಸೇವೆ ದೊರೆಯುತ್ತಿದೆ. ನೂರು ಹಾಸಿಗೆ ಸಾಮರ್ಥ್ಯದ ವ್ಯವಸ್ಥೆಯೊಂದಿಗೆ ತಾಯಿ ಮಕ್ಕಳ ಆಸ್ಪತ್ರೆಯೂ ಕಾರ್ಯನಿರ್ವಹಿಸುತಿದ್ದು, ಮೂಲ ಸೌಕರ್ಯಗಳನ್ನು ಹೆಚ್ಚಿಸಲಾಗುವುದು.
ಕುಡಿಯುವ ನೀರಿಗೆ ತಕ್ಷಣ ಬೋರ್ವೆಲ್ ಕೊರೆಯುವುಸದರೊಂದಿಗೆ, ಆಸ್ಪತ್ರೆ ತ್ಯಾಜ್ಯ ಹೊರ ಹೋಗುವ ಚರಂಡಿ ಸರಿಪಡಿಸಲು ಸೂಚಿಸಲಾಗಿದೆ.
ಅವೈಜ್ಞಾನಿಕವಾಗಿರುವ ಶವಾಗಾರದ ರ್ಯಾಂಪ್ ಸರಿಪಡಿಸಲು ಹಾಗೂ ಆಸ್ಪತ್ರೆ ಆವರಣಕ್ಕೆ ಬರುವ ನಾಯಿಗಳ ನಿಯಂತ್ರಣಕ್ಕೂ ಸೂಚಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಆಸ್ಪತ್ರೆಗೆ ತರಿಸಲಾಗಿರುವ ಹೊಸ ಡಿಜಿಟಲ್ ಎಕ್ಸರೇ ಯಂತ್ರವನ್ನು ಸಚಿವರು ವೀಕ್ಷಿಸಿ ದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ರಾಜಣ್ಣ, ತಾಲೂಕು ಅಧ್ಯಕ್ಷರಾದ ಜಗನ್ನಾಥ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರುಗಳು, ವೖದ್ಯರು ಹಾಗೂ ಸಿಬ್ಬಂದಿ ಇದ್ದರು.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…