ಹೃದಯಾಘಾತ ಸೇರಿದಂತೆ ಹಾವು ಹಾಗೂ ನಾಯಿ ಕಡಿತಕ್ಕೆ ಅಗತ್ಯ ಔಷಧಿ ಲಭ್ಯವಿರುವುದಾಗಿ ವೖದ್ಯರು ಮಾಹಿತಿ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಹೇಳಿದರು.
ದೇವನಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಶನಿವಾರ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರ ಒತ್ತಾಯದ ಮೇರೆಗೆ ಶೀಘ್ರದಲ್ಲಿಯೇ ಕಿದ್ವಾಯಿ ಆಸ್ಪತ್ರೆ ಸಹಯೋಗದೊಂದಿಗೆ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಆಯೋಜಿಸಲು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖಾ ಸಚಿವರೊಂದಿಗೆ ಸಮಾಲೋಚಿಸಲಾಗುವುದು ಎಂದರು.
ಆಸ್ಪತ್ರೆಗೆ ಬರುವ ಹೊರ ರೋಗಿಗಳ ತಪಾಸಣಾ ಶುಲ್ಕ 5 ರೂ. ಇದ್ದು ಬೇರೆ ಸಾರ್ವಜನಿಕ ಆಸ್ಪತ್ರೆಗಳಲ್ಲಿರುವಂತೆ 10 ರೂ.ಗಳಿಗೆ ಹೆಚ್ಚಿಸಲು ಸಮಿತಿಯಲ್ಲಿ ತೀರ್ಮಾನಿಸಲಾಯಿತು.
ಪ್ರತಿನಿತ್ಯ ಆಸ್ಪತ್ರೆಗೆ 400 ಕ್ಕೂ ಹೆಚ್ಚು ರೋಗಿಗಳು ತಪಾಸಣೆಗೆ ಆಗಮಿಸುತಿದ್ದು, ವೖದ್ಯರ ಮೇಲೆ ಒತ್ತಡ ಇದ್ದರೂ ಅಗತ್ಯದಷ್ಟು ಸಿಬ್ಬಂದಿಯಿರುವುದರಿಂದ ಒಳ್ಳೆಯ ಸೇವೆ ದೊರೆಯುತ್ತಿದೆ. ನೂರು ಹಾಸಿಗೆ ಸಾಮರ್ಥ್ಯದ ವ್ಯವಸ್ಥೆಯೊಂದಿಗೆ ತಾಯಿ ಮಕ್ಕಳ ಆಸ್ಪತ್ರೆಯೂ ಕಾರ್ಯನಿರ್ವಹಿಸುತಿದ್ದು, ಮೂಲ ಸೌಕರ್ಯಗಳನ್ನು ಹೆಚ್ಚಿಸಲಾಗುವುದು.
ಕುಡಿಯುವ ನೀರಿಗೆ ತಕ್ಷಣ ಬೋರ್ವೆಲ್ ಕೊರೆಯುವುಸದರೊಂದಿಗೆ, ಆಸ್ಪತ್ರೆ ತ್ಯಾಜ್ಯ ಹೊರ ಹೋಗುವ ಚರಂಡಿ ಸರಿಪಡಿಸಲು ಸೂಚಿಸಲಾಗಿದೆ.
ಅವೈಜ್ಞಾನಿಕವಾಗಿರುವ ಶವಾಗಾರದ ರ್ಯಾಂಪ್ ಸರಿಪಡಿಸಲು ಹಾಗೂ ಆಸ್ಪತ್ರೆ ಆವರಣಕ್ಕೆ ಬರುವ ನಾಯಿಗಳ ನಿಯಂತ್ರಣಕ್ಕೂ ಸೂಚಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಆಸ್ಪತ್ರೆಗೆ ತರಿಸಲಾಗಿರುವ ಹೊಸ ಡಿಜಿಟಲ್ ಎಕ್ಸರೇ ಯಂತ್ರವನ್ನು ಸಚಿವರು ವೀಕ್ಷಿಸಿ ದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ರಾಜಣ್ಣ, ತಾಲೂಕು ಅಧ್ಯಕ್ಷರಾದ ಜಗನ್ನಾಥ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರುಗಳು, ವೖದ್ಯರು ಹಾಗೂ ಸಿಬ್ಬಂದಿ ಇದ್ದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…