Categories: ಹಾಸನ

ಹಾಸನದಲ್ಲಿ ಗಣೇಶನಿಗೆ ಚಪ್ಪಲಿ ಹಾರ ಹಾಕಿ ವಿಕೃತಿ

ಹಾಸನ : ಮದ್ದೂರಿನಲ್ಲಿ (Madduru) ಗಣೇಶ (ganesha ) ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ ಹಸಿಯಾಗಿರುವಾಗಲೇ ಹಾಸನದಲ್ಲಿ (Hassan) ಮತ್ತೊಂದು ವಿವಾದಾತ್ಮಕ ಘಟನೆ ನಡೆದಿದೆ.

ಹಾಸನದಲ್ಲಿ ಗಣೇಶನಿಗೆ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆಯಲಾಗಿದೆ. ಬೇಲೂರು ಪಟ್ಟಣದಲ್ಲಿ ಕಿಡಿಗೇಡಿಗಳಿಂದ ನೀಚತನ ನಡೆದಿದ್ದು, ಎರಡು ಚಪ್ಪಲಿಗಳಿಗೆ ದಾರ ಕಟ್ಟಿ ಗಣೇಶನ ಮೂರ್ತಿಗೆ ಹಾರ ಹಾಕಿದ್ದಾರೆ.

ಪುರಸಭೆ ಆವರಣದಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ಗಣಪತಿಗೆ ಚಪ್ಪಲಿ ಹಾರ ಹಾಕಿದ್ದಾರೆ. ಮುಂಜಾನೆ ದೇವರ ದರ್ಶನಕ್ಕೆ ಹೋದ ಭಕ್ತರಿಗೆ ಶಾಕ್ ಎದುರಾಗಿದ್ದು, ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಿಡಿಗೇಡಿಗಳನ್ನು ಬಂಧಿಸುವಂತೆ ಇದೀಗ ಸಾರ್ವಜನಿಕರಿಂದ ಆಗ್ರಹ ಕೇಳಿಬಂದಿದೆ.

ಘಟನೆಗೆ ಹಿಂದೂಪರ ಸಂಘಟನೆಗಳು ಖಂಡನೆ ವ್ಯಕ್ತಪಡಿಸಿವೆ. ಕಿಡಿಗೇಡಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿವೆ. ಸದ್ಯ ಗಣೇಶನಿಗೆ ಚಪ್ಪಲಿ ಹಾರ ಹಾಕಿರುವ ಫೋಟೋ ಎಲ್ಲೆಡೆ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.

Ramesh Babu

Journalist

Recent Posts

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

43 minutes ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

1 hour ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

7 hours ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

11 hours ago

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

13 hours ago

ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…

14 hours ago