ಹಾಸನ : ಮದ್ದೂರಿನಲ್ಲಿ (Madduru) ಗಣೇಶ (ganesha ) ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ ಹಸಿಯಾಗಿರುವಾಗಲೇ ಹಾಸನದಲ್ಲಿ (Hassan) ಮತ್ತೊಂದು ವಿವಾದಾತ್ಮಕ ಘಟನೆ ನಡೆದಿದೆ.
ಹಾಸನದಲ್ಲಿ ಗಣೇಶನಿಗೆ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆಯಲಾಗಿದೆ. ಬೇಲೂರು ಪಟ್ಟಣದಲ್ಲಿ ಕಿಡಿಗೇಡಿಗಳಿಂದ ನೀಚತನ ನಡೆದಿದ್ದು, ಎರಡು ಚಪ್ಪಲಿಗಳಿಗೆ ದಾರ ಕಟ್ಟಿ ಗಣೇಶನ ಮೂರ್ತಿಗೆ ಹಾರ ಹಾಕಿದ್ದಾರೆ.
ಪುರಸಭೆ ಆವರಣದಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ಗಣಪತಿಗೆ ಚಪ್ಪಲಿ ಹಾರ ಹಾಕಿದ್ದಾರೆ. ಮುಂಜಾನೆ ದೇವರ ದರ್ಶನಕ್ಕೆ ಹೋದ ಭಕ್ತರಿಗೆ ಶಾಕ್ ಎದುರಾಗಿದ್ದು, ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಿಡಿಗೇಡಿಗಳನ್ನು ಬಂಧಿಸುವಂತೆ ಇದೀಗ ಸಾರ್ವಜನಿಕರಿಂದ ಆಗ್ರಹ ಕೇಳಿಬಂದಿದೆ.
ಘಟನೆಗೆ ಹಿಂದೂಪರ ಸಂಘಟನೆಗಳು ಖಂಡನೆ ವ್ಯಕ್ತಪಡಿಸಿವೆ. ಕಿಡಿಗೇಡಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿವೆ. ಸದ್ಯ ಗಣೇಶನಿಗೆ ಚಪ್ಪಲಿ ಹಾರ ಹಾಕಿರುವ ಫೋಟೋ ಎಲ್ಲೆಡೆ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…