ಹಾಸನ : ಮದ್ದೂರಿನಲ್ಲಿ (Madduru) ಗಣೇಶ (ganesha ) ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ ಹಸಿಯಾಗಿರುವಾಗಲೇ ಹಾಸನದಲ್ಲಿ (Hassan) ಮತ್ತೊಂದು ವಿವಾದಾತ್ಮಕ ಘಟನೆ ನಡೆದಿದೆ.
ಹಾಸನದಲ್ಲಿ ಗಣೇಶನಿಗೆ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆಯಲಾಗಿದೆ. ಬೇಲೂರು ಪಟ್ಟಣದಲ್ಲಿ ಕಿಡಿಗೇಡಿಗಳಿಂದ ನೀಚತನ ನಡೆದಿದ್ದು, ಎರಡು ಚಪ್ಪಲಿಗಳಿಗೆ ದಾರ ಕಟ್ಟಿ ಗಣೇಶನ ಮೂರ್ತಿಗೆ ಹಾರ ಹಾಕಿದ್ದಾರೆ.
ಪುರಸಭೆ ಆವರಣದಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ಗಣಪತಿಗೆ ಚಪ್ಪಲಿ ಹಾರ ಹಾಕಿದ್ದಾರೆ. ಮುಂಜಾನೆ ದೇವರ ದರ್ಶನಕ್ಕೆ ಹೋದ ಭಕ್ತರಿಗೆ ಶಾಕ್ ಎದುರಾಗಿದ್ದು, ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಿಡಿಗೇಡಿಗಳನ್ನು ಬಂಧಿಸುವಂತೆ ಇದೀಗ ಸಾರ್ವಜನಿಕರಿಂದ ಆಗ್ರಹ ಕೇಳಿಬಂದಿದೆ.
ಘಟನೆಗೆ ಹಿಂದೂಪರ ಸಂಘಟನೆಗಳು ಖಂಡನೆ ವ್ಯಕ್ತಪಡಿಸಿವೆ. ಕಿಡಿಗೇಡಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿವೆ. ಸದ್ಯ ಗಣೇಶನಿಗೆ ಚಪ್ಪಲಿ ಹಾರ ಹಾಕಿರುವ ಫೋಟೋ ಎಲ್ಲೆಡೆ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…