ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ತಿಳಿಸಿದ್ದಾರೆ.
ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು ಎಂಟು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದ ಮೊಸಳೆಹೊಸಳ್ಳಿ ರಾಷ್ಟ್ರೀಯ ಹೆದ್ದಾರಿ 373ರ ಚತುಷ್ಪಥ ರಸ್ತೆಯ ಒಂದು ಬದಿಯಲ್ಲಿ ನಡೆದಿದೆ. ಅಪಘಾತದಲ್ಲಿ 17ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು ಅವರ ಪೈಕಿ 10 ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಇನ್ನು ಟ್ರಕ್ ಚಾಲಕ ಭುವನೇಶ್ ಎಂದು ಗುರುತಿಸಲಾಗಿದೆ. ಅಪಘಾತದ ನಂತರ ಸ್ಥಳೀಯರು ಚಾಲಕನಿಗೂ ಹಿಗ್ಗಾಮುಗ್ಗ ಥಳಿಸಿದ್ದು ಭುವನೇಶ್ ಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…
ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್…
ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ…