ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ತಿಳಿಸಿದ್ದಾರೆ.
ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು ಎಂಟು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದ ಮೊಸಳೆಹೊಸಳ್ಳಿ ರಾಷ್ಟ್ರೀಯ ಹೆದ್ದಾರಿ 373ರ ಚತುಷ್ಪಥ ರಸ್ತೆಯ ಒಂದು ಬದಿಯಲ್ಲಿ ನಡೆದಿದೆ. ಅಪಘಾತದಲ್ಲಿ 17ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು ಅವರ ಪೈಕಿ 10 ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಇನ್ನು ಟ್ರಕ್ ಚಾಲಕ ಭುವನೇಶ್ ಎಂದು ಗುರುತಿಸಲಾಗಿದೆ. ಅಪಘಾತದ ನಂತರ ಸ್ಥಳೀಯರು ಚಾಲಕನಿಗೂ ಹಿಗ್ಗಾಮುಗ್ಗ ಥಳಿಸಿದ್ದು ಭುವನೇಶ್ ಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ದೊಡ್ಡಬಳ್ಳಾಪುರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವತಿಯಿಂದ ದೊಡ್ಡಬಳ್ಳಾಪುರದಲ್ಲಿ…
ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಅವರು ಇಂದು ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಬ್ಯಾಂಕ್ ಸರ್ಕಲ್ನಲ್ಲಿ ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪನೆಗೆ ನಡೆದ ಭೂಮಿಪೂಜೆ ಕುರಿತು ಉಂಟಾಗಿದ್ದ…
ದೊಡ್ಡಬಳ್ಳಾಪುರ: ಬ್ಯಾಟರಿಯಲ್ಲಿ ಸ್ಪಾರ್ಕ್ ಕಾಣಿಸಿಕೊಂಡ ಪರಿಣಾಮ ಟಾಟಾ ಸುಮೋ ವಾಹನಕ್ಕೆ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಬೆಂಗಳೂರು ಗ್ರಾಮಾಂತರ…
ದೊಡ್ಡಬಳ್ಳಾಪುರ: ಬೆಲೆ ಏರಿಕೆ ಹಾಗೂ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಿದರು. ನಗರದ…
ದೇವನಹಳ್ಳಿ: ಗುರು ರಾಯರ ದರ್ಶನ ಮುಗಿಸಿಕೊಂಡು ಬೆಂಗಳೂರಿನತ್ತ ಮರಳುತ್ತಿದ್ದ ಪ್ರಯಾಣಿಕರಿದ್ದ ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದು, ಬಳಿಕ ಮತ್ತೊಂದು ಕಾರಿಗೆ…