ಹಾಸನದಲ್ಲಿ ಹಠಾತ್ ಹೃದಯಾಘಾತ ಸಾವುಗಳ ಕುರಿತು ತಜ್ಞರ ಸಮಿತಿಯಿಂದ ವರದಿ ಪಡೆದಿದ್ದೇನೆ. ಮೇ ಮತ್ತು ಜೂನ್ ತಿಂಗಳಲ್ಲಿ ಒಟ್ಟು 24 ಸಾವುಗಳ ಬಗ್ಗೆ ತನಿಖೆ ನಡೆಸಲಾಗಿದ್ದು, 20 ಪ್ರಕರಣಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಂದ ಸಾವು ಸಂಭವಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಕಳೆದ ವರ್ಷ ಇದೇ ಸಮಯದಲ್ಲಿ 19 ಹೃದಯಾಘಾತಗಳು ಹಾಸನದಲ್ಲಿ ಸಂಭವಿಸಿದ್ದವು. ಈ ವರ್ಷ 20 ಹೃದಯಾಘಾತ ಸಾವುಗಳಾಗಿದ್ದು, ಕಳೆದ ವರ್ಷಕ್ಕೆ ಹೊಲಿಸಿದಾಗ 1 ಸಾವು ಹೆಚ್ಚಳವಾಗಿದೆ. ಹೃದಯಾಘಾತಕ್ಕೆ ಈಡಾದವರಲ್ಲಿ14 ಜನರು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಎಂಬುದು ಕಳವಳಕಾರಿ ಅಂಶ. ಇವರಲ್ಲಿ 6 ಜನರು ವಾಹನ ಚಾಲಕ ವರ್ಗಕ್ಕೆ ಸೇರಿದವರು. 20 ಸಾವುಗಳಲ್ಲಿ ಶೇ 30 ರಷ್ಟು ಹೃದಯಾಘಾತಗಳಿಗೆ ವಾಹನ ಚಾಲಕರು ಈಡಾಗಿದ್ದಾರೆ ಎಂಬುದನ್ನು ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ ಎಂದರು.
ಹೃದಯ ತಪಾಸಣೆಗೆ ಸರ್ಕಾರ ಹೆಚ್ಚಿನ ಒತ್ತು ನೀಡಲಿದ್ದು, ವಾಹನ ಚಾಲಕರ ಕುರಿತು ಹೆಚ್ಚಿನ ಗಮನ ಹರಿಸಿ ಹೃದಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗುವುದು. ಸಮುದಾಯ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿ ಇಸಿಜಿ ವ್ಯವಸ್ಥೆ ಕಲ್ಲಿಸುವ ನಿಟ್ಟಿನಲ್ಲಿ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.
" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…
ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…
ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…