ಹಾಸನದಲ್ಲಿ ಹಠಾತ್ ಹೃದಯಾಘಾತ ಸಾವುಗಳ ಪ್ರಕರಣ: ತಜ್ಞರ ಸಮಿತಿ ವರದಿ ಏನು ಹೇಳುತ್ತದೆ…?

ಹಾಸನದಲ್ಲಿ ಹಠಾತ್ ಹೃದಯಾಘಾತ ಸಾವುಗಳ ಕುರಿತು ತಜ್ಞರ ಸಮಿತಿಯಿಂದ ವರದಿ ಪಡೆದಿದ್ದೇನೆ.‌ ಮೇ ಮತ್ತು ಜೂನ್ ತಿಂಗಳಲ್ಲಿ ಒಟ್ಟು 24 ಸಾವುಗಳ ಬಗ್ಗೆ ತನಿಖೆ ನಡೆಸಲಾಗಿದ್ದು, 20 ಪ್ರಕರಣಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಂದ ಸಾವು ಸಂಭವಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಕಳೆದ ವರ್ಷ ಇದೇ ಸಮಯದಲ್ಲಿ 19 ಹೃದಯಾಘಾತಗಳು ಹಾಸನದಲ್ಲಿ ಸಂಭವಿಸಿದ್ದವು. ಈ ವರ್ಷ 20 ಹೃದಯಾಘಾತ ಸಾವುಗಳಾಗಿದ್ದು, ಕಳೆದ ವರ್ಷಕ್ಕೆ ಹೊಲಿಸಿದಾಗ 1 ಸಾವು ಹೆಚ್ಚಳವಾಗಿದೆ.‌ ಹೃದಯಾಘಾತಕ್ಕೆ ಈಡಾದವರಲ್ಲಿ14 ಜನರು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಎಂಬುದು ಕಳವಳಕಾರಿ ಅಂಶ. ಇವರಲ್ಲಿ 6 ಜನರು ವಾಹನ ಚಾಲಕ ವರ್ಗಕ್ಕೆ ಸೇರಿದವರು. 20 ಸಾವುಗಳಲ್ಲಿ ಶೇ 30 ರಷ್ಟು ಹೃದಯಾಘಾತಗಳಿಗೆ ವಾಹನ ಚಾಲಕರು ಈಡಾಗಿದ್ದಾರೆ ಎಂಬುದನ್ನು ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ ಎಂದರು.

ಹೃದಯ ತಪಾಸಣೆಗೆ ಸರ್ಕಾರ ಹೆಚ್ಚಿನ ಒತ್ತು ನೀಡಲಿದ್ದು, ವಾಹನ ಚಾಲಕರ ಕುರಿತು ಹೆಚ್ಚಿನ ಗಮನ ಹರಿಸಿ ಹೃದಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗುವುದು. ಸಮುದಾಯ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿ ಇಸಿಜಿ ವ್ಯವಸ್ಥೆ ಕಲ್ಲಿಸುವ ನಿಟ್ಟಿನಲ್ಲಿ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 hour ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

2 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

15 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

15 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

15 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

16 hours ago