ಹಾಸನದಲ್ಲಿ ಹಠಾತ್ ಹೃದಯಾಘಾತ ಸಾವುಗಳ ಕುರಿತು ತಜ್ಞರ ಸಮಿತಿಯಿಂದ ವರದಿ ಪಡೆದಿದ್ದೇನೆ. ಮೇ ಮತ್ತು ಜೂನ್ ತಿಂಗಳಲ್ಲಿ ಒಟ್ಟು 24 ಸಾವುಗಳ ಬಗ್ಗೆ ತನಿಖೆ ನಡೆಸಲಾಗಿದ್ದು, 20 ಪ್ರಕರಣಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಂದ ಸಾವು ಸಂಭವಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಕಳೆದ ವರ್ಷ ಇದೇ ಸಮಯದಲ್ಲಿ 19 ಹೃದಯಾಘಾತಗಳು ಹಾಸನದಲ್ಲಿ ಸಂಭವಿಸಿದ್ದವು. ಈ ವರ್ಷ 20 ಹೃದಯಾಘಾತ ಸಾವುಗಳಾಗಿದ್ದು, ಕಳೆದ ವರ್ಷಕ್ಕೆ ಹೊಲಿಸಿದಾಗ 1 ಸಾವು ಹೆಚ್ಚಳವಾಗಿದೆ. ಹೃದಯಾಘಾತಕ್ಕೆ ಈಡಾದವರಲ್ಲಿ14 ಜನರು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಎಂಬುದು ಕಳವಳಕಾರಿ ಅಂಶ. ಇವರಲ್ಲಿ 6 ಜನರು ವಾಹನ ಚಾಲಕ ವರ್ಗಕ್ಕೆ ಸೇರಿದವರು. 20 ಸಾವುಗಳಲ್ಲಿ ಶೇ 30 ರಷ್ಟು ಹೃದಯಾಘಾತಗಳಿಗೆ ವಾಹನ ಚಾಲಕರು ಈಡಾಗಿದ್ದಾರೆ ಎಂಬುದನ್ನು ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ ಎಂದರು.
ಹೃದಯ ತಪಾಸಣೆಗೆ ಸರ್ಕಾರ ಹೆಚ್ಚಿನ ಒತ್ತು ನೀಡಲಿದ್ದು, ವಾಹನ ಚಾಲಕರ ಕುರಿತು ಹೆಚ್ಚಿನ ಗಮನ ಹರಿಸಿ ಹೃದಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗುವುದು. ಸಮುದಾಯ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿ ಇಸಿಜಿ ವ್ಯವಸ್ಥೆ ಕಲ್ಲಿಸುವ ನಿಟ್ಟಿನಲ್ಲಿ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…