ಹಾಸನದಲ್ಲಿ ಹಠಾತ್ ಹೃದಯಾಘಾತ ಸಾವುಗಳ ಕುರಿತು ತಜ್ಞರ ಸಮಿತಿಯಿಂದ ವರದಿ ಪಡೆದಿದ್ದೇನೆ. ಮೇ ಮತ್ತು ಜೂನ್ ತಿಂಗಳಲ್ಲಿ ಒಟ್ಟು 24 ಸಾವುಗಳ ಬಗ್ಗೆ ತನಿಖೆ ನಡೆಸಲಾಗಿದ್ದು, 20 ಪ್ರಕರಣಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಂದ ಸಾವು ಸಂಭವಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಕಳೆದ ವರ್ಷ ಇದೇ ಸಮಯದಲ್ಲಿ 19 ಹೃದಯಾಘಾತಗಳು ಹಾಸನದಲ್ಲಿ ಸಂಭವಿಸಿದ್ದವು. ಈ ವರ್ಷ 20 ಹೃದಯಾಘಾತ ಸಾವುಗಳಾಗಿದ್ದು, ಕಳೆದ ವರ್ಷಕ್ಕೆ ಹೊಲಿಸಿದಾಗ 1 ಸಾವು ಹೆಚ್ಚಳವಾಗಿದೆ. ಹೃದಯಾಘಾತಕ್ಕೆ ಈಡಾದವರಲ್ಲಿ14 ಜನರು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಎಂಬುದು ಕಳವಳಕಾರಿ ಅಂಶ. ಇವರಲ್ಲಿ 6 ಜನರು ವಾಹನ ಚಾಲಕ ವರ್ಗಕ್ಕೆ ಸೇರಿದವರು. 20 ಸಾವುಗಳಲ್ಲಿ ಶೇ 30 ರಷ್ಟು ಹೃದಯಾಘಾತಗಳಿಗೆ ವಾಹನ ಚಾಲಕರು ಈಡಾಗಿದ್ದಾರೆ ಎಂಬುದನ್ನು ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ ಎಂದರು.
ಹೃದಯ ತಪಾಸಣೆಗೆ ಸರ್ಕಾರ ಹೆಚ್ಚಿನ ಒತ್ತು ನೀಡಲಿದ್ದು, ವಾಹನ ಚಾಲಕರ ಕುರಿತು ಹೆಚ್ಚಿನ ಗಮನ ಹರಿಸಿ ಹೃದಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗುವುದು. ಸಮುದಾಯ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿ ಇಸಿಜಿ ವ್ಯವಸ್ಥೆ ಕಲ್ಲಿಸುವ ನಿಟ್ಟಿನಲ್ಲಿ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…