Categories: ತುಮಕೂರು

ಹಾಸನ ಜಿಲ್ಲೆಯ ಕುವರಿಯರು ತುಮಕೂರು ವಿವಿಗೆ ಟಾಪರ್ಸ್

ಹಾಸನ: ಜಿಲ್ಲೆಯಿಂದ ಕಲ್ಪತರು ನಾಡಿನತ್ತ ಸ್ನಾತಕೋತ್ತರ ವ್ಯಾಸಂಗಕ್ಕಾಗಿ ಪಯಣ ಬೆಳೆಸಿ ಎರಡು ವರ್ಷದ ಸ್ನಾತಕೋತ್ತರ ಪದವಿ ವಿದ್ಯಾಭ್ಯಾಸ ಮಾಡಿದ ಕುವರಿಯರು, ಅತ್ಯುತ್ತಮ ಅಂಕ ಗಳಿಸಿ ಟಾಪರ್ಸ್ ಆಗುವ ಮೂಲಕ ಒಂದೇ ಜಿಲ್ಲೆಯ ನಾಲ್ವರು ಈಗ ವಿಶ್ವವಿದ್ಯಾಲಯ ಸಾಧಕಿಯರಾಗಿರುವುದು ವಿಶೇಷವಾಗಿದೆ.

ಹೌದು ತುಮಕೂರು ನಗರದ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಎಲೆಕ್ಟ್ರಾನಿಕ್ ಮೀಡಿಯಾ ಪದವಿಯಲ್ಲಿ ವ್ಯಾಸಂಗ ಮಾಡಿದ 4 ವಿದ್ಯಾರ್ಥಿನೀಯರು ವಿಶ್ವವಿದ್ಯಾಲಯದ ಅಗ್ರಶ್ರೇಣಿಯ ಅಂಕ ಪಡೆದು ರ್ಯಾಂಕ್ ಗೆ ಭಾಜನರಾದ ಹಿನ್ನೆಲೆ ತುಮಕೂರು ವಿಶ್ವವಿದ್ಯಾಲಯದಲ್ಲಿ ನಡೆದ 18ನೇ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲರು ಹಾಗೂ ಕುಲಪತಿಗಳು ರ್ಯಾಂಕ್ ಪ್ರಮಾಣಪತ್ರ ಪ್ರದಾನ ಮಾಡಲಾಯಿತು.

ಎಲೆಕ್ಟ್ರಾನಿಕ್ ಮೀಡಿಯಾ ಸ್ನಾತಕೋತ್ತರ ಪದವಿಯಲ್ಲಿ ಹಾಸನ ನಗರದ ಕೃಷ್ಣಾ ಹಾಗೂ ಪುಷ್ಪಲತಾ ದಂಪತಿಯ ಪುತ್ರಿ ರಂಜಿತಾ ಎಚ್.ಕೆ (ಗೋಲ್ಡ್ ಮೆಡಲ್)ಮೊದಲ ಸ್ಥಾನ, ಬೇಲೂರು ಪಟ್ಟಣದ ಉಮೇಶ ಹಾಗೂ ಶೋಭಾ ದಂಪತಿಯ ಪುತ್ರಿ ಸಿಂಧು ತೃತೀಯ ಸ್ಥಾನ, ಚನ್ನರಾಯಪಟ್ಟಣ ತಾಲ್ಲೂಕಿನ ಕಸರನಹಳ್ಳಿ ಗ್ರಾಮದ ಮಂಜುಳಾ ಅವರ ಪುತ್ರಿ ದೀಪಿಕಾ ನಾಲ್ಕನೇ ಸ್ಥಾನ ಪಡೆದರೆ, ಇನ್ನೂ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ಸ್ನಾತಕೋತ್ತರ ಪದವಿಯಲ್ಲಿ ಹಾಸನ ತಾಲ್ಲೂಕಿನ ಬಲ್ಲೆನಹಳ್ಳಿ ಗ್ರಾಮದ ತಿಮಯ್ಯ ಹಾಗೂ ಪುಟ್ಟಲಕ್ಷ್ಮಿ ದಂಪತಿಯ ಪುತ್ರಿ ಅಂಬಿಕಾ ಬಿ.ಟಿ ತೃತೀಯ ಸ್ಥಾನ ಪಡೆದುಕೊಂಡು ಜಿಲ್ಲೆಯ ಹಿರಿಮೆಯನ್ನು ಇಮ್ಮಡಿಗೊಳಿಸಿದ್ದಾರೆ.

ಈ ನಾಲ್ವರು ಸಾಧಕಿಯರು ಬಡತನದಲ್ಲಿ ಬೆಳೆದು ವಿದ್ಯಾಭ್ಯಾಸ ಮುಗಿಸಿ, ವಿವಿಗೆ ಟಾಪರ್ಸ ಆಗುವ ಮೂಲಕ ಸಾಧಿಸುವ ಛಲವೊಂದಿದ್ದರೆ ಸಾಧನೆಗೆ ಬಡತನ ಅಡ್ಡಿಯಾಗದು ಎಂದು ತೋರಿಸಿಕೊಟ್ಟು, ಉನ್ನತ ವ್ಯಾಸಂಗದ ಕನಸು ಹೊತ್ತ ಬಡಕುಟುಂಬದ ಯುವಕ-ಯುವತಿಯರಿಗೆ ಮಾದರಿಯಾಗಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

8 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

8 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

16 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago