Categories: ತುಮಕೂರು

ಹಾಸನ ಜಿಲ್ಲೆಯ ಕುವರಿಯರು ತುಮಕೂರು ವಿವಿಗೆ ಟಾಪರ್ಸ್

ಹಾಸನ: ಜಿಲ್ಲೆಯಿಂದ ಕಲ್ಪತರು ನಾಡಿನತ್ತ ಸ್ನಾತಕೋತ್ತರ ವ್ಯಾಸಂಗಕ್ಕಾಗಿ ಪಯಣ ಬೆಳೆಸಿ ಎರಡು ವರ್ಷದ ಸ್ನಾತಕೋತ್ತರ ಪದವಿ ವಿದ್ಯಾಭ್ಯಾಸ ಮಾಡಿದ ಕುವರಿಯರು, ಅತ್ಯುತ್ತಮ ಅಂಕ ಗಳಿಸಿ ಟಾಪರ್ಸ್ ಆಗುವ ಮೂಲಕ ಒಂದೇ ಜಿಲ್ಲೆಯ ನಾಲ್ವರು ಈಗ ವಿಶ್ವವಿದ್ಯಾಲಯ ಸಾಧಕಿಯರಾಗಿರುವುದು ವಿಶೇಷವಾಗಿದೆ.

ಹೌದು ತುಮಕೂರು ನಗರದ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಎಲೆಕ್ಟ್ರಾನಿಕ್ ಮೀಡಿಯಾ ಪದವಿಯಲ್ಲಿ ವ್ಯಾಸಂಗ ಮಾಡಿದ 4 ವಿದ್ಯಾರ್ಥಿನೀಯರು ವಿಶ್ವವಿದ್ಯಾಲಯದ ಅಗ್ರಶ್ರೇಣಿಯ ಅಂಕ ಪಡೆದು ರ್ಯಾಂಕ್ ಗೆ ಭಾಜನರಾದ ಹಿನ್ನೆಲೆ ತುಮಕೂರು ವಿಶ್ವವಿದ್ಯಾಲಯದಲ್ಲಿ ನಡೆದ 18ನೇ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲರು ಹಾಗೂ ಕುಲಪತಿಗಳು ರ್ಯಾಂಕ್ ಪ್ರಮಾಣಪತ್ರ ಪ್ರದಾನ ಮಾಡಲಾಯಿತು.

ಎಲೆಕ್ಟ್ರಾನಿಕ್ ಮೀಡಿಯಾ ಸ್ನಾತಕೋತ್ತರ ಪದವಿಯಲ್ಲಿ ಹಾಸನ ನಗರದ ಕೃಷ್ಣಾ ಹಾಗೂ ಪುಷ್ಪಲತಾ ದಂಪತಿಯ ಪುತ್ರಿ ರಂಜಿತಾ ಎಚ್.ಕೆ (ಗೋಲ್ಡ್ ಮೆಡಲ್)ಮೊದಲ ಸ್ಥಾನ, ಬೇಲೂರು ಪಟ್ಟಣದ ಉಮೇಶ ಹಾಗೂ ಶೋಭಾ ದಂಪತಿಯ ಪುತ್ರಿ ಸಿಂಧು ತೃತೀಯ ಸ್ಥಾನ, ಚನ್ನರಾಯಪಟ್ಟಣ ತಾಲ್ಲೂಕಿನ ಕಸರನಹಳ್ಳಿ ಗ್ರಾಮದ ಮಂಜುಳಾ ಅವರ ಪುತ್ರಿ ದೀಪಿಕಾ ನಾಲ್ಕನೇ ಸ್ಥಾನ ಪಡೆದರೆ, ಇನ್ನೂ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ಸ್ನಾತಕೋತ್ತರ ಪದವಿಯಲ್ಲಿ ಹಾಸನ ತಾಲ್ಲೂಕಿನ ಬಲ್ಲೆನಹಳ್ಳಿ ಗ್ರಾಮದ ತಿಮಯ್ಯ ಹಾಗೂ ಪುಟ್ಟಲಕ್ಷ್ಮಿ ದಂಪತಿಯ ಪುತ್ರಿ ಅಂಬಿಕಾ ಬಿ.ಟಿ ತೃತೀಯ ಸ್ಥಾನ ಪಡೆದುಕೊಂಡು ಜಿಲ್ಲೆಯ ಹಿರಿಮೆಯನ್ನು ಇಮ್ಮಡಿಗೊಳಿಸಿದ್ದಾರೆ.

ಈ ನಾಲ್ವರು ಸಾಧಕಿಯರು ಬಡತನದಲ್ಲಿ ಬೆಳೆದು ವಿದ್ಯಾಭ್ಯಾಸ ಮುಗಿಸಿ, ವಿವಿಗೆ ಟಾಪರ್ಸ ಆಗುವ ಮೂಲಕ ಸಾಧಿಸುವ ಛಲವೊಂದಿದ್ದರೆ ಸಾಧನೆಗೆ ಬಡತನ ಅಡ್ಡಿಯಾಗದು ಎಂದು ತೋರಿಸಿಕೊಟ್ಟು, ಉನ್ನತ ವ್ಯಾಸಂಗದ ಕನಸು ಹೊತ್ತ ಬಡಕುಟುಂಬದ ಯುವಕ-ಯುವತಿಯರಿಗೆ ಮಾದರಿಯಾಗಿದ್ದಾರೆ.

Ramesh Babu

Journalist

Recent Posts

ಕುಸುಮ್ (ಸೌರ ವಿದ್ಯುತ್) ಯೋಜನೆ ಹೆಸರಲ್ಲಿ ದೇಶ ಕಾಯೋ ಯೋಧರ ಭೂಮಿಗೆ ಬೇಲಿ: ತಬ್ಬಿಬ್ಬಾದ ಯೋಧರ ಕುಟುಂಬ

ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…

4 hours ago

ಟೋಲ್ ರಸ್ತೆಯಲ್ಲಿ ಮಿತಿಮೀರಿದ ಅಪಘಾತ: ರಸ್ತೆ ಸುರಕ್ಷತೆ ಕಾಪಾಡದ ಸುಂಕವಸೂಲಿ(ಟೋಲ್) ಗುತ್ತಿಗೆದಾರರು: ಹೆದ್ದಾರಿಯಲ್ಲಿ ಕುಳಿತು ಟೋಲ್ ವಿರುದ್ಧ ಧಿಕ್ಕಾರ ಕೂಗಿದ ರೈತರು, ಸಂಘಟನೆಗಾರರು…

ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…

4 hours ago

ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…

5 hours ago

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

8 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

10 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

13 hours ago