Categories: ತುಮಕೂರು

ಹಾಸನ ಜಿಲ್ಲೆಯ ಕುವರಿಯರು ತುಮಕೂರು ವಿವಿಗೆ ಟಾಪರ್ಸ್

ಹಾಸನ: ಜಿಲ್ಲೆಯಿಂದ ಕಲ್ಪತರು ನಾಡಿನತ್ತ ಸ್ನಾತಕೋತ್ತರ ವ್ಯಾಸಂಗಕ್ಕಾಗಿ ಪಯಣ ಬೆಳೆಸಿ ಎರಡು ವರ್ಷದ ಸ್ನಾತಕೋತ್ತರ ಪದವಿ ವಿದ್ಯಾಭ್ಯಾಸ ಮಾಡಿದ ಕುವರಿಯರು, ಅತ್ಯುತ್ತಮ ಅಂಕ ಗಳಿಸಿ ಟಾಪರ್ಸ್ ಆಗುವ ಮೂಲಕ ಒಂದೇ ಜಿಲ್ಲೆಯ ನಾಲ್ವರು ಈಗ ವಿಶ್ವವಿದ್ಯಾಲಯ ಸಾಧಕಿಯರಾಗಿರುವುದು ವಿಶೇಷವಾಗಿದೆ.

ಹೌದು ತುಮಕೂರು ನಗರದ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಎಲೆಕ್ಟ್ರಾನಿಕ್ ಮೀಡಿಯಾ ಪದವಿಯಲ್ಲಿ ವ್ಯಾಸಂಗ ಮಾಡಿದ 4 ವಿದ್ಯಾರ್ಥಿನೀಯರು ವಿಶ್ವವಿದ್ಯಾಲಯದ ಅಗ್ರಶ್ರೇಣಿಯ ಅಂಕ ಪಡೆದು ರ್ಯಾಂಕ್ ಗೆ ಭಾಜನರಾದ ಹಿನ್ನೆಲೆ ತುಮಕೂರು ವಿಶ್ವವಿದ್ಯಾಲಯದಲ್ಲಿ ನಡೆದ 18ನೇ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲರು ಹಾಗೂ ಕುಲಪತಿಗಳು ರ್ಯಾಂಕ್ ಪ್ರಮಾಣಪತ್ರ ಪ್ರದಾನ ಮಾಡಲಾಯಿತು.

ಎಲೆಕ್ಟ್ರಾನಿಕ್ ಮೀಡಿಯಾ ಸ್ನಾತಕೋತ್ತರ ಪದವಿಯಲ್ಲಿ ಹಾಸನ ನಗರದ ಕೃಷ್ಣಾ ಹಾಗೂ ಪುಷ್ಪಲತಾ ದಂಪತಿಯ ಪುತ್ರಿ ರಂಜಿತಾ ಎಚ್.ಕೆ (ಗೋಲ್ಡ್ ಮೆಡಲ್)ಮೊದಲ ಸ್ಥಾನ, ಬೇಲೂರು ಪಟ್ಟಣದ ಉಮೇಶ ಹಾಗೂ ಶೋಭಾ ದಂಪತಿಯ ಪುತ್ರಿ ಸಿಂಧು ತೃತೀಯ ಸ್ಥಾನ, ಚನ್ನರಾಯಪಟ್ಟಣ ತಾಲ್ಲೂಕಿನ ಕಸರನಹಳ್ಳಿ ಗ್ರಾಮದ ಮಂಜುಳಾ ಅವರ ಪುತ್ರಿ ದೀಪಿಕಾ ನಾಲ್ಕನೇ ಸ್ಥಾನ ಪಡೆದರೆ, ಇನ್ನೂ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ಸ್ನಾತಕೋತ್ತರ ಪದವಿಯಲ್ಲಿ ಹಾಸನ ತಾಲ್ಲೂಕಿನ ಬಲ್ಲೆನಹಳ್ಳಿ ಗ್ರಾಮದ ತಿಮಯ್ಯ ಹಾಗೂ ಪುಟ್ಟಲಕ್ಷ್ಮಿ ದಂಪತಿಯ ಪುತ್ರಿ ಅಂಬಿಕಾ ಬಿ.ಟಿ ತೃತೀಯ ಸ್ಥಾನ ಪಡೆದುಕೊಂಡು ಜಿಲ್ಲೆಯ ಹಿರಿಮೆಯನ್ನು ಇಮ್ಮಡಿಗೊಳಿಸಿದ್ದಾರೆ.

ಈ ನಾಲ್ವರು ಸಾಧಕಿಯರು ಬಡತನದಲ್ಲಿ ಬೆಳೆದು ವಿದ್ಯಾಭ್ಯಾಸ ಮುಗಿಸಿ, ವಿವಿಗೆ ಟಾಪರ್ಸ ಆಗುವ ಮೂಲಕ ಸಾಧಿಸುವ ಛಲವೊಂದಿದ್ದರೆ ಸಾಧನೆಗೆ ಬಡತನ ಅಡ್ಡಿಯಾಗದು ಎಂದು ತೋರಿಸಿಕೊಟ್ಟು, ಉನ್ನತ ವ್ಯಾಸಂಗದ ಕನಸು ಹೊತ್ತ ಬಡಕುಟುಂಬದ ಯುವಕ-ಯುವತಿಯರಿಗೆ ಮಾದರಿಯಾಗಿದ್ದಾರೆ.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

11 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

16 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

16 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

24 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

2 days ago