ಹಾಸನ ಪೆನ್ ಡ್ರೈವ್ ಪ್ರಕರಣ ಹೊರ ಬಂದ ಬೆನ್ನೆಲ್ಲೆ ವಿದೇಶಕ್ಕೆ ಪರಾರಿಯಾಗಿದ್ದ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಇಂದು ಜರ್ಮನಿಯ ಮ್ಯೂನಿಕ್ ನಿಂದ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ಐಟಿ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದಾರೆ.
ದೇಶ ಬಿಟ್ಟು ಪರಾರಿಯಾದ ಒಂದು ತಿಂಗಳ ಬಳಿಕ ಮೇ.27ರಂದು ವಿಡಿಯೋ ಮೂಲಕ ಪ್ರತ್ಯಕ್ಷವಾಗಿದ್ದ ಪ್ರಜ್ವಲ್ ರೇವಣ್ಣ ತಾನು ಮೇ 31ರಂದು ಬೆಂಗಳೂರಿಗೆ ಆಗಮಿಸುವುದಾಗಿ ಹೇಳಿದ್ದರು.
ಅದರಂತೆ ಇದೀಗ ಭಾರತೀಯ ಕಾಲಮಾನದ ಪ್ರಕಾರ ಸಂಜೆ 4.05ಕ್ಕೆ ಮ್ಯೂನಿಚ್ನಿಂದ ಹೊರಟ ಲುಫ್ತಾನ್ಸ ಎಲ್ಎಚ್ 764 ವಿಮಾನ ತಡರಾತ್ರಿ 12:50 ಕ್ಕೆ ಬೆಂಗಳೂರಿನ ಕೆಐಎಎಲ್ಗೆ ಬಂದಿತು.
ಪ್ರಜ್ವಲ್ರ ಬಂಧನಕ್ಕಾಗಿ ವಿಮಾನ ನಿಲ್ದಾಣ ಬಳಿ ಎಸ್ಐಟಿ ಅಧಿಕಾರಿಗಳು ಠಿಕಾಣಿ ಹೂಡಿದ್ದರು, ಪ್ರಜ್ವಲ್ ವಿಮಾನದಿಂದ ಕೆಳಗಿಳಿದು ಬರುತ್ತಿದ್ದಂತೆ ಇಮಿಗ್ರೇಷನ್ ಅಧಿಕಾರಿಗಳು ಅವರ ಪಾಸ್ಪೋರ್ಟ್ ಸೇರಿದಂತೆ ಕೆಲ ದಾಖಲಾತಿಗಳನ್ನು ಪರಿಶೀಲಿಸಿ ವಶಕ್ಕೆ ತೆಗೆದುಕೊಂಡರು. ಬಳಿಕ ರಾತ್ರಿ 1.20 ಕ್ಕೆ ಎಸ್ಐಟಿ ಅಧಿಕಾರಿಗಳ ವಶಕ್ಕೆ ಒಪ್ಪಿಸಿದರು.
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…