ಹಾಸನ ಪೆನ್ ಡ್ರೈವ್ ಪ್ರಕರಣ: ಜರ್ಮನಿಯ ಮ್ಯೂನಿಕ್ ನಿಂದ ಬೆಂಗಳೂರಿಗೆ ಎಂಟ್ರಿ‌ ಕೊಟ್ಟ ಪ್ರಜ್ವಲ್ ರೇವಣ್ಣ: ಕೂಡಲೇ ವಶಕ್ಕೆ ಪಡೆದ ಎಸ್ಐಟಿ ಅಧಿಕಾರಿಗಳು

ಹಾಸನ ಪೆನ್ ಡ್ರೈವ್ ಪ್ರಕರಣ ಹೊರ ಬಂದ ಬೆನ್ನೆಲ್ಲೆ ವಿದೇಶಕ್ಕೆ ಪರಾರಿಯಾಗಿದ್ದ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಇಂದು ಜರ್ಮನಿಯ ಮ್ಯೂನಿಕ್ ನಿಂದ ಬೆಂಗಳೂರಿಗೆ ಎಂಟ್ರಿ‌ ಕೊಟ್ಟಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ಐಟಿ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದಾರೆ.

ದೇಶ ಬಿಟ್ಟು ಪರಾರಿಯಾದ ಒಂದು ತಿಂಗಳ ಬಳಿಕ ಮೇ.27ರಂದು ವಿಡಿಯೋ ಮೂಲಕ ಪ್ರತ್ಯಕ್ಷವಾಗಿದ್ದ ಪ್ರಜ್ವಲ್ ರೇವಣ್ಣ ತಾನು ಮೇ 31ರಂದು ಬೆಂಗಳೂರಿಗೆ ಆಗಮಿಸುವುದಾಗಿ ಹೇಳಿದ್ದರು.

ಅದರಂತೆ ಇದೀಗ ಭಾರತೀಯ ಕಾಲಮಾನದ ಪ್ರಕಾರ ಸಂಜೆ 4.05ಕ್ಕೆ ಮ್ಯೂನಿಚ್‌ನಿಂದ ಹೊರಟ ಲುಫ್ತಾನ್ಸ ಎಲ್ಎಚ್ 764 ವಿಮಾನ ತಡರಾತ್ರಿ 12:50 ಕ್ಕೆ ಬೆಂಗಳೂರಿನ ಕೆಐಎಎಲ್‌ಗೆ ಬಂದಿತು.

ಪ್ರಜ್ವಲ್‌ರ ಬಂಧನಕ್ಕಾಗಿ ವಿಮಾನ ನಿಲ್ದಾಣ ಬಳಿ ಎಸ್‌ಐಟಿ ಅಧಿಕಾರಿಗಳು ಠಿಕಾಣಿ ಹೂಡಿದ್ದರು, ಪ್ರಜ್ವಲ್‌ ವಿಮಾನದಿಂದ ಕೆಳಗಿಳಿದು ಬರುತ್ತಿದ್ದಂತೆ ಇಮಿಗ್ರೇಷನ್‌ ಅಧಿಕಾರಿಗಳು ಅವರ ಪಾಸ್‌ಪೋರ್ಟ್‌ ಸೇರಿದಂತೆ ಕೆಲ ದಾಖಲಾತಿಗಳನ್ನು ಪರಿಶೀಲಿಸಿ ವಶಕ್ಕೆ ತೆಗೆದುಕೊಂಡರು. ಬಳಿಕ ರಾತ್ರಿ 1.20 ಕ್ಕೆ ಎಸ್‌ಐಟಿ ಅಧಿಕಾರಿಗಳ ವಶಕ್ಕೆ ಒಪ್ಪಿಸಿದರು.

Ramesh Babu

Journalist

Recent Posts

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

1 hour ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

4 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

6 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

17 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

22 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

23 hours ago