ಹಾಸನ ಪೆನ್ ಡ್ರೈವ್ ಪ್ರಕರಣ: ನಾಳೆ (ಮೇ.13) ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ವತಿಯಿಂದ ಹಾಸನ ಚಲೋ

ಮೇ 13 ರ ಸೋಮವಾರ ಪೆನ್ ಡ್ರೈವ್ ಪ್ರಕರಣ ಕುರಿತಂತೆ ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ವತಿಯಿಂದ ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬಲು ಹಾಗೂ ಲೈಂಗಿಕ ಹಗರಣ ಪ್ರಕರಣವನ್ನು ಪಾರದರ್ಶಕವಾಗಿ ತನಿಖೆ ನಡೆಸಲು ಒತ್ತಾಯಿಸಿ ಹಾಸನ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ಪಕ್ಷದ ಜಿಲ್ಲಾ ಉಪಾಧ್ಯಕ್ಷ ಶಿವಶಂಕರ್ ಹೇಳಿದರು.

ನಗರದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವಾರು ದಿನಗಳಿಂದ ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಕುರಿತಾದ ಪೆನ್ ಡ್ರೈವ್ ಪ್ರಕರಣ ಬಾರಿ ಚರ್ಚೆಗೆ ಗುರಿಯಾಗಿದ್ದು, ಈ ಕುರಿತು ರಾಜಕೀಯ ಪಕ್ಷಗಳು ಒಬ್ಬರ ಮೇಲೆ ಒಬ್ಬರು ಕೆಸರು ಎರಚಿಕೊಳ್ಳುತ್ತಿದ್ದಾರೆ. ಪ್ರಕರಣ ಸಾವಿರಾರು ಹೆಣ್ಣು ಮಕ್ಕಳ ಜೀವ, ಜೀವನ ಹಾಗೂ ಘನತೆಯ ವಿಷಯವಾಗಿದೆ. ಈ ಪ್ರಕರಣವನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ನೇಮಿಸಿರುವ ಎಸ್ ಐ ಟಿ ತನಿಖಾತಂಡ ಈಗಾಗಲೇ ವಿಚಾರಣೆ ಕೈಗೆತ್ತಿಕೊಂಡಿದ್ದು. ಸತ್ಯಾಸತ್ಯತೆ ಹೊರ ಬರಬೇಕಿದೆ ಎಂದರು.

ತಪ್ಪು ಮಾಡಿ ತಲೆ ಮರೆಸಿಕೊಂಡಿರುವ ರಾಜಕಾರಣಿಯನ್ನು ಕೂಡಲೇ ಕಾನೂನು ಕ್ರಮಕ್ಕೆ ಒಳಪಡಿಸಬೇಕಿದೆ. ಈ ಮೂಲಕ ದೇಶದ ಜನಸಾಮಾನ್ಯರಿಗೆ ಕಾನೂನಿನ ಬಗ್ಗೆ ಉತ್ತಮ ಭಾವನೆ ಹಾಗೂ ಅಚಲ ನಂಬಿಕೆ ಮೂಡಿಸಬೇಕಾದ ಅವಶ್ಯಕತೆ ಇದೆ ಎಂದರು.

ನಮ್ಮ ರಾಜ್ಯದಲ್ಲಿ ಸಾಕಷ್ಟು ತನಿಖೆಗಳು ನಡೆದಿವೆ. ಇಲ್ಲಿಯವರೆಗೂ ಯಾರಿಗೂ ಶಿಕ್ಷೆ ಆಗಿದ್ದನ್ನು ನಾವು ಕಂಡಿಲ್ಲ, ಅದೇ ಜನಸಾಮಾನ್ಯ ಒಬ್ಬ ತಪ್ಪು ಮಾಡಿದ್ದರೆ ಪೊಲೀಸರು ಹೇಗೆ ವರ್ತಿಸುತ್ತಾರೆ ಎಂಬುದು ನಾವು ಕಂಡಿದ್ದೇವೆ. ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ ಎಂಬ ಭಾವನೆ ಇರಬಾರದು. ನಮಗೆ ಸಾಮಾಜಿಕ ಹೊಣೆಗಾರಿಕೆ ಇರಬೇಕು ಇಂತಹ ವಿಚಾರಗಳಿಗೆ ಪ್ರತಿಕ್ರಿಯೆ ನೀಡುವುದು ನಮ್ಮ ಜವಾಬ್ದಾರಿ ಎಂದು ಕಿವಿ ಮಾತು ಹೇಳಿದರು.

ಪ್ರಜ್ವಲ್ ರೇವಣ್ಣ ಕುರಿತಾದ ಪೆನ್ ಡ್ರೈವ್ ಪ್ರಕರಣವನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಎಸ್ಐಟಿ ತನಿಖಾತಂಡದಿಂದ ಬಿಡುಗಡೆಗೊಳಿಸಿ ಕೇಂದ್ರದ ಸಿಬಿಐಗೆ ಒಪ್ಪಿಸಿದರೆ ಉತ್ತಮ ಎಂದ ಅವರು, ತನಿಖಾ ಸಂಸ್ಥೆಗಳು ನಿಷ್ಠೆಯಿಂದ ಶ್ರಮಿಸುತ್ತವೆ ಆದರೆ ಅಧಿಕಾರದಲ್ಲಿರುವ ಪಕ್ಷಗಳು ಹಾಗೂ ರಾಜಕಾರಣಿಗಳು ತನಿಖಾ ಸಂಸ್ಥೆಗಳು ನೀಡಿರುವ ಮಾಹಿತಿ ಮರೆಮಾಚುತ್ತವೆ ಎಂದು ಆರೋಪಿಸಿದರು.

ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಎಲ್.ಎನ್‌.ಆನಂದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದರಾಜು, ಸಂಘಟನಾ ಕಾರ್ಯದರ್ಶಿ ಮಾರುತಿ, ತಾಲ್ಲೂಕು ರೈತ ಘಟಕದ ಅಧ್ಯಕ್ಷ ವಿಜಯಕುಮಾರ್ ತಾ. ಚಾಲಕರ ಘಟಕದ ಅಧ್ಯಕ್ಷ ವಿಜಯಕುಮಾರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

6 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

6 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

9 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

12 hours ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

1 day ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

1 day ago