ಹಾಸನ ಪೆನ್ ಡ್ರೈವ್ ಪ್ರಕರಣ: ನಾಳೆ (ಮೇ.13) ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ವತಿಯಿಂದ ಹಾಸನ ಚಲೋ

ಮೇ 13 ರ ಸೋಮವಾರ ಪೆನ್ ಡ್ರೈವ್ ಪ್ರಕರಣ ಕುರಿತಂತೆ ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ವತಿಯಿಂದ ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬಲು ಹಾಗೂ ಲೈಂಗಿಕ ಹಗರಣ ಪ್ರಕರಣವನ್ನು ಪಾರದರ್ಶಕವಾಗಿ ತನಿಖೆ ನಡೆಸಲು ಒತ್ತಾಯಿಸಿ ಹಾಸನ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ಪಕ್ಷದ ಜಿಲ್ಲಾ ಉಪಾಧ್ಯಕ್ಷ ಶಿವಶಂಕರ್ ಹೇಳಿದರು.

ನಗರದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವಾರು ದಿನಗಳಿಂದ ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಕುರಿತಾದ ಪೆನ್ ಡ್ರೈವ್ ಪ್ರಕರಣ ಬಾರಿ ಚರ್ಚೆಗೆ ಗುರಿಯಾಗಿದ್ದು, ಈ ಕುರಿತು ರಾಜಕೀಯ ಪಕ್ಷಗಳು ಒಬ್ಬರ ಮೇಲೆ ಒಬ್ಬರು ಕೆಸರು ಎರಚಿಕೊಳ್ಳುತ್ತಿದ್ದಾರೆ. ಪ್ರಕರಣ ಸಾವಿರಾರು ಹೆಣ್ಣು ಮಕ್ಕಳ ಜೀವ, ಜೀವನ ಹಾಗೂ ಘನತೆಯ ವಿಷಯವಾಗಿದೆ. ಈ ಪ್ರಕರಣವನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ನೇಮಿಸಿರುವ ಎಸ್ ಐ ಟಿ ತನಿಖಾತಂಡ ಈಗಾಗಲೇ ವಿಚಾರಣೆ ಕೈಗೆತ್ತಿಕೊಂಡಿದ್ದು. ಸತ್ಯಾಸತ್ಯತೆ ಹೊರ ಬರಬೇಕಿದೆ ಎಂದರು.

ತಪ್ಪು ಮಾಡಿ ತಲೆ ಮರೆಸಿಕೊಂಡಿರುವ ರಾಜಕಾರಣಿಯನ್ನು ಕೂಡಲೇ ಕಾನೂನು ಕ್ರಮಕ್ಕೆ ಒಳಪಡಿಸಬೇಕಿದೆ. ಈ ಮೂಲಕ ದೇಶದ ಜನಸಾಮಾನ್ಯರಿಗೆ ಕಾನೂನಿನ ಬಗ್ಗೆ ಉತ್ತಮ ಭಾವನೆ ಹಾಗೂ ಅಚಲ ನಂಬಿಕೆ ಮೂಡಿಸಬೇಕಾದ ಅವಶ್ಯಕತೆ ಇದೆ ಎಂದರು.

ನಮ್ಮ ರಾಜ್ಯದಲ್ಲಿ ಸಾಕಷ್ಟು ತನಿಖೆಗಳು ನಡೆದಿವೆ. ಇಲ್ಲಿಯವರೆಗೂ ಯಾರಿಗೂ ಶಿಕ್ಷೆ ಆಗಿದ್ದನ್ನು ನಾವು ಕಂಡಿಲ್ಲ, ಅದೇ ಜನಸಾಮಾನ್ಯ ಒಬ್ಬ ತಪ್ಪು ಮಾಡಿದ್ದರೆ ಪೊಲೀಸರು ಹೇಗೆ ವರ್ತಿಸುತ್ತಾರೆ ಎಂಬುದು ನಾವು ಕಂಡಿದ್ದೇವೆ. ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ ಎಂಬ ಭಾವನೆ ಇರಬಾರದು. ನಮಗೆ ಸಾಮಾಜಿಕ ಹೊಣೆಗಾರಿಕೆ ಇರಬೇಕು ಇಂತಹ ವಿಚಾರಗಳಿಗೆ ಪ್ರತಿಕ್ರಿಯೆ ನೀಡುವುದು ನಮ್ಮ ಜವಾಬ್ದಾರಿ ಎಂದು ಕಿವಿ ಮಾತು ಹೇಳಿದರು.

ಪ್ರಜ್ವಲ್ ರೇವಣ್ಣ ಕುರಿತಾದ ಪೆನ್ ಡ್ರೈವ್ ಪ್ರಕರಣವನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಎಸ್ಐಟಿ ತನಿಖಾತಂಡದಿಂದ ಬಿಡುಗಡೆಗೊಳಿಸಿ ಕೇಂದ್ರದ ಸಿಬಿಐಗೆ ಒಪ್ಪಿಸಿದರೆ ಉತ್ತಮ ಎಂದ ಅವರು, ತನಿಖಾ ಸಂಸ್ಥೆಗಳು ನಿಷ್ಠೆಯಿಂದ ಶ್ರಮಿಸುತ್ತವೆ ಆದರೆ ಅಧಿಕಾರದಲ್ಲಿರುವ ಪಕ್ಷಗಳು ಹಾಗೂ ರಾಜಕಾರಣಿಗಳು ತನಿಖಾ ಸಂಸ್ಥೆಗಳು ನೀಡಿರುವ ಮಾಹಿತಿ ಮರೆಮಾಚುತ್ತವೆ ಎಂದು ಆರೋಪಿಸಿದರು.

ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಎಲ್.ಎನ್‌.ಆನಂದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದರಾಜು, ಸಂಘಟನಾ ಕಾರ್ಯದರ್ಶಿ ಮಾರುತಿ, ತಾಲ್ಲೂಕು ರೈತ ಘಟಕದ ಅಧ್ಯಕ್ಷ ವಿಜಯಕುಮಾರ್ ತಾ. ಚಾಲಕರ ಘಟಕದ ಅಧ್ಯಕ್ಷ ವಿಜಯಕುಮಾರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

2 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

5 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

9 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

24 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

24 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

1 day ago