ಹಾಸನ ಪೆನ್ ಡ್ರೈವ್ ಪ್ರಕರಣ: ನಾಳೆ (ಮೇ.13) ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ವತಿಯಿಂದ ಹಾಸನ ಚಲೋ

ಮೇ 13 ರ ಸೋಮವಾರ ಪೆನ್ ಡ್ರೈವ್ ಪ್ರಕರಣ ಕುರಿತಂತೆ ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ವತಿಯಿಂದ ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬಲು ಹಾಗೂ ಲೈಂಗಿಕ ಹಗರಣ ಪ್ರಕರಣವನ್ನು ಪಾರದರ್ಶಕವಾಗಿ ತನಿಖೆ ನಡೆಸಲು ಒತ್ತಾಯಿಸಿ ಹಾಸನ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ಪಕ್ಷದ ಜಿಲ್ಲಾ ಉಪಾಧ್ಯಕ್ಷ ಶಿವಶಂಕರ್ ಹೇಳಿದರು.

ನಗರದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವಾರು ದಿನಗಳಿಂದ ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಕುರಿತಾದ ಪೆನ್ ಡ್ರೈವ್ ಪ್ರಕರಣ ಬಾರಿ ಚರ್ಚೆಗೆ ಗುರಿಯಾಗಿದ್ದು, ಈ ಕುರಿತು ರಾಜಕೀಯ ಪಕ್ಷಗಳು ಒಬ್ಬರ ಮೇಲೆ ಒಬ್ಬರು ಕೆಸರು ಎರಚಿಕೊಳ್ಳುತ್ತಿದ್ದಾರೆ. ಪ್ರಕರಣ ಸಾವಿರಾರು ಹೆಣ್ಣು ಮಕ್ಕಳ ಜೀವ, ಜೀವನ ಹಾಗೂ ಘನತೆಯ ವಿಷಯವಾಗಿದೆ. ಈ ಪ್ರಕರಣವನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ನೇಮಿಸಿರುವ ಎಸ್ ಐ ಟಿ ತನಿಖಾತಂಡ ಈಗಾಗಲೇ ವಿಚಾರಣೆ ಕೈಗೆತ್ತಿಕೊಂಡಿದ್ದು. ಸತ್ಯಾಸತ್ಯತೆ ಹೊರ ಬರಬೇಕಿದೆ ಎಂದರು.

ತಪ್ಪು ಮಾಡಿ ತಲೆ ಮರೆಸಿಕೊಂಡಿರುವ ರಾಜಕಾರಣಿಯನ್ನು ಕೂಡಲೇ ಕಾನೂನು ಕ್ರಮಕ್ಕೆ ಒಳಪಡಿಸಬೇಕಿದೆ. ಈ ಮೂಲಕ ದೇಶದ ಜನಸಾಮಾನ್ಯರಿಗೆ ಕಾನೂನಿನ ಬಗ್ಗೆ ಉತ್ತಮ ಭಾವನೆ ಹಾಗೂ ಅಚಲ ನಂಬಿಕೆ ಮೂಡಿಸಬೇಕಾದ ಅವಶ್ಯಕತೆ ಇದೆ ಎಂದರು.

ನಮ್ಮ ರಾಜ್ಯದಲ್ಲಿ ಸಾಕಷ್ಟು ತನಿಖೆಗಳು ನಡೆದಿವೆ. ಇಲ್ಲಿಯವರೆಗೂ ಯಾರಿಗೂ ಶಿಕ್ಷೆ ಆಗಿದ್ದನ್ನು ನಾವು ಕಂಡಿಲ್ಲ, ಅದೇ ಜನಸಾಮಾನ್ಯ ಒಬ್ಬ ತಪ್ಪು ಮಾಡಿದ್ದರೆ ಪೊಲೀಸರು ಹೇಗೆ ವರ್ತಿಸುತ್ತಾರೆ ಎಂಬುದು ನಾವು ಕಂಡಿದ್ದೇವೆ. ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ ಎಂಬ ಭಾವನೆ ಇರಬಾರದು. ನಮಗೆ ಸಾಮಾಜಿಕ ಹೊಣೆಗಾರಿಕೆ ಇರಬೇಕು ಇಂತಹ ವಿಚಾರಗಳಿಗೆ ಪ್ರತಿಕ್ರಿಯೆ ನೀಡುವುದು ನಮ್ಮ ಜವಾಬ್ದಾರಿ ಎಂದು ಕಿವಿ ಮಾತು ಹೇಳಿದರು.

ಪ್ರಜ್ವಲ್ ರೇವಣ್ಣ ಕುರಿತಾದ ಪೆನ್ ಡ್ರೈವ್ ಪ್ರಕರಣವನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಎಸ್ಐಟಿ ತನಿಖಾತಂಡದಿಂದ ಬಿಡುಗಡೆಗೊಳಿಸಿ ಕೇಂದ್ರದ ಸಿಬಿಐಗೆ ಒಪ್ಪಿಸಿದರೆ ಉತ್ತಮ ಎಂದ ಅವರು, ತನಿಖಾ ಸಂಸ್ಥೆಗಳು ನಿಷ್ಠೆಯಿಂದ ಶ್ರಮಿಸುತ್ತವೆ ಆದರೆ ಅಧಿಕಾರದಲ್ಲಿರುವ ಪಕ್ಷಗಳು ಹಾಗೂ ರಾಜಕಾರಣಿಗಳು ತನಿಖಾ ಸಂಸ್ಥೆಗಳು ನೀಡಿರುವ ಮಾಹಿತಿ ಮರೆಮಾಚುತ್ತವೆ ಎಂದು ಆರೋಪಿಸಿದರು.

ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಎಲ್.ಎನ್‌.ಆನಂದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದರಾಜು, ಸಂಘಟನಾ ಕಾರ್ಯದರ್ಶಿ ಮಾರುತಿ, ತಾಲ್ಲೂಕು ರೈತ ಘಟಕದ ಅಧ್ಯಕ್ಷ ವಿಜಯಕುಮಾರ್ ತಾ. ಚಾಲಕರ ಘಟಕದ ಅಧ್ಯಕ್ಷ ವಿಜಯಕುಮಾರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

7 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

18 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 days ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago