ಹಾಸನ ಪೆನ್ ಡ್ರೈವ್ ಪ್ರಕರಣ: ನಾಳೆ (ಮೇ.13) ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ವತಿಯಿಂದ ಹಾಸನ ಚಲೋ

ಮೇ 13 ರ ಸೋಮವಾರ ಪೆನ್ ಡ್ರೈವ್ ಪ್ರಕರಣ ಕುರಿತಂತೆ ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ವತಿಯಿಂದ ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬಲು ಹಾಗೂ ಲೈಂಗಿಕ ಹಗರಣ ಪ್ರಕರಣವನ್ನು ಪಾರದರ್ಶಕವಾಗಿ ತನಿಖೆ ನಡೆಸಲು ಒತ್ತಾಯಿಸಿ ಹಾಸನ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ಪಕ್ಷದ ಜಿಲ್ಲಾ ಉಪಾಧ್ಯಕ್ಷ ಶಿವಶಂಕರ್ ಹೇಳಿದರು.

ನಗರದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವಾರು ದಿನಗಳಿಂದ ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಕುರಿತಾದ ಪೆನ್ ಡ್ರೈವ್ ಪ್ರಕರಣ ಬಾರಿ ಚರ್ಚೆಗೆ ಗುರಿಯಾಗಿದ್ದು, ಈ ಕುರಿತು ರಾಜಕೀಯ ಪಕ್ಷಗಳು ಒಬ್ಬರ ಮೇಲೆ ಒಬ್ಬರು ಕೆಸರು ಎರಚಿಕೊಳ್ಳುತ್ತಿದ್ದಾರೆ. ಪ್ರಕರಣ ಸಾವಿರಾರು ಹೆಣ್ಣು ಮಕ್ಕಳ ಜೀವ, ಜೀವನ ಹಾಗೂ ಘನತೆಯ ವಿಷಯವಾಗಿದೆ. ಈ ಪ್ರಕರಣವನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ನೇಮಿಸಿರುವ ಎಸ್ ಐ ಟಿ ತನಿಖಾತಂಡ ಈಗಾಗಲೇ ವಿಚಾರಣೆ ಕೈಗೆತ್ತಿಕೊಂಡಿದ್ದು. ಸತ್ಯಾಸತ್ಯತೆ ಹೊರ ಬರಬೇಕಿದೆ ಎಂದರು.

ತಪ್ಪು ಮಾಡಿ ತಲೆ ಮರೆಸಿಕೊಂಡಿರುವ ರಾಜಕಾರಣಿಯನ್ನು ಕೂಡಲೇ ಕಾನೂನು ಕ್ರಮಕ್ಕೆ ಒಳಪಡಿಸಬೇಕಿದೆ. ಈ ಮೂಲಕ ದೇಶದ ಜನಸಾಮಾನ್ಯರಿಗೆ ಕಾನೂನಿನ ಬಗ್ಗೆ ಉತ್ತಮ ಭಾವನೆ ಹಾಗೂ ಅಚಲ ನಂಬಿಕೆ ಮೂಡಿಸಬೇಕಾದ ಅವಶ್ಯಕತೆ ಇದೆ ಎಂದರು.

ನಮ್ಮ ರಾಜ್ಯದಲ್ಲಿ ಸಾಕಷ್ಟು ತನಿಖೆಗಳು ನಡೆದಿವೆ. ಇಲ್ಲಿಯವರೆಗೂ ಯಾರಿಗೂ ಶಿಕ್ಷೆ ಆಗಿದ್ದನ್ನು ನಾವು ಕಂಡಿಲ್ಲ, ಅದೇ ಜನಸಾಮಾನ್ಯ ಒಬ್ಬ ತಪ್ಪು ಮಾಡಿದ್ದರೆ ಪೊಲೀಸರು ಹೇಗೆ ವರ್ತಿಸುತ್ತಾರೆ ಎಂಬುದು ನಾವು ಕಂಡಿದ್ದೇವೆ. ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ ಎಂಬ ಭಾವನೆ ಇರಬಾರದು. ನಮಗೆ ಸಾಮಾಜಿಕ ಹೊಣೆಗಾರಿಕೆ ಇರಬೇಕು ಇಂತಹ ವಿಚಾರಗಳಿಗೆ ಪ್ರತಿಕ್ರಿಯೆ ನೀಡುವುದು ನಮ್ಮ ಜವಾಬ್ದಾರಿ ಎಂದು ಕಿವಿ ಮಾತು ಹೇಳಿದರು.

ಪ್ರಜ್ವಲ್ ರೇವಣ್ಣ ಕುರಿತಾದ ಪೆನ್ ಡ್ರೈವ್ ಪ್ರಕರಣವನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಎಸ್ಐಟಿ ತನಿಖಾತಂಡದಿಂದ ಬಿಡುಗಡೆಗೊಳಿಸಿ ಕೇಂದ್ರದ ಸಿಬಿಐಗೆ ಒಪ್ಪಿಸಿದರೆ ಉತ್ತಮ ಎಂದ ಅವರು, ತನಿಖಾ ಸಂಸ್ಥೆಗಳು ನಿಷ್ಠೆಯಿಂದ ಶ್ರಮಿಸುತ್ತವೆ ಆದರೆ ಅಧಿಕಾರದಲ್ಲಿರುವ ಪಕ್ಷಗಳು ಹಾಗೂ ರಾಜಕಾರಣಿಗಳು ತನಿಖಾ ಸಂಸ್ಥೆಗಳು ನೀಡಿರುವ ಮಾಹಿತಿ ಮರೆಮಾಚುತ್ತವೆ ಎಂದು ಆರೋಪಿಸಿದರು.

ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಎಲ್.ಎನ್‌.ಆನಂದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದರಾಜು, ಸಂಘಟನಾ ಕಾರ್ಯದರ್ಶಿ ಮಾರುತಿ, ತಾಲ್ಲೂಕು ರೈತ ಘಟಕದ ಅಧ್ಯಕ್ಷ ವಿಜಯಕುಮಾರ್ ತಾ. ಚಾಲಕರ ಘಟಕದ ಅಧ್ಯಕ್ಷ ವಿಜಯಕುಮಾರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

23 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago