ಹಾಸನ ಪೆನ್ ಡ್ರೈವ್ ಪ್ರಕರಣ: ಮೇ.30ರಂದು ‘ಹೋರಾಟದ ನಡಿಗೆ ಹಾಸನದ ಕಡೆಗೆ’

ದೊಡ್ಡಬಳ್ಳಾಪುರ: ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣನಿಂದ ನಡೆದಿರುವ ವಿಕೃತ ಲೈಂಗಿಕ ಪ್ರಕರಣವನ್ನು ವಿರೋಧಿಸಿ ಮೇ.30 ರಂದು ನಡೆಯಲಿರುವ ‘ಹೋರಾಟದ ನಡಿಗೆ ಹಾಸನದ ಕಡೆಗೆ’ ಬೃಹತ್ ಪ್ರತಿಭಟನೆ ಹಾಗೂ ಬಹಿರಂಗ ಸಭೆಗೆ ತಾಲ್ಲೂಕಿನ ಜನಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಸಂವಿಧಾನ ರಕ್ಷಣೆಗಾಗಿ ನಾಗರೀಕರ ವೇದಿಕೆ ಸಂಚಾಲಕ ಆರ್.ಚಂದ್ರತೇಜಸ್ವಿ ತಿಳಿಸಿದರು.

ನಗರದ ರೈತ ಕಾರ್ಮಿಕರ ಸಂಘದ ಕಚೇರಿಯಲ್ಲಿ ಸಂವಿಧಾನ ರಕ್ಷಣೆಗಾಗಿ ನಾಗರೀಕರ ವೇದಿಕೆ ವತಿಯಿಂದ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಂಸದ ಪ್ರಜ್ವಲ್ ರೇವಣ್ಣ ತನ್ನ ರಾಜಕೀಯ ಅಧಿಕಾರ, ಕುಟುಂಬದ ಹಿನ್ನೆಲೆ ಮತ್ತು ಪ್ರಬಲ ಜಾತಿಯ ಅಹಮಿಕೆಯನ್ನು ಬಳಸಿಕೊಂಡು ನೂರಾರು ಜನ ಮಹಿಳೆಯರ ಮೇಲೆ ಪ್ರಭಾವ ಬೀರಿ, ಒತ್ತಡ ಹಾಕಿ ಬಳಸಿಕೊಂಡಿರುವುದು ಹೀನ ಕೃತ್ಯವಾಗಿದೆ. ಪ್ರಜ್ವಲ್ ರೇವಣ್ಣ ಇಂತಹ ನೀಚ ಕೃತ್ಯದಲ್ಲಿ ಭಾಗಿಯಾಗಿರುವ ಕುರಿತು ಅರಿವಿದ್ದರೂ ಲೋಕಸಭಾ ಚುನಾವಣೆಯಲ್ಲಿ ಆತನನ್ನೇ ಮತ್ತೆ ಹಾಸನ ಕ್ಷೇತ್ರದ ಅಭ್ಯರ್ಥಿಯನ್ನಾಗಿಸಿದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ನಡೆ ತೀವ್ರ ಖಂಡನೀಯ ಎಂದರು.

ಮತದಾರರ ಮೇಲೆ ಪ್ರಭಾವ ಬೀರುವ ದುರುದ್ದೇಶದಿಂದ ಅಭ್ಯರ್ಥಿ ಪ್ರಜ್ವಲ್ ರೇವಣ್ಣನ ಲೈಂಗಿಕ ದೌರ್ಜನ್ಯದ ವಿಡಿಯೋಗಳು ಮತ್ತು ಚಿತ್ರಗಳನ್ನು ಪೆನ್ ಡ್ರೈವ್ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ಹಂಚಿರುವುದು ಮತ್ತು ದೌರ್ಜನ್ಯಕ್ಕೊಳಗಾದ ಮಹಿಳೆಯರ ಗೌಪ್ಯತೆ ಮತ್ತು ಘನತೆಯನ್ನು ಸಾರ್ವಜನಿಕವಾಗಿ ಹಾಳು ಮಾಡಿರುವುದು ಸಹ ಅತ್ಯಂತ ಖಂಡನೀಯ ಕೃತ್ಯವಾಗಿದೆ ಎಂದರು.

ಹಾಸನದ ಬಿಜೆಪಿ ಮುಖಂಡ ಜಿ.ದೇವರಾಜೇಗೌಡ ಹಲವು ತಿಂಗಳ ಹಿಂದೆಯೇ ಮಾಧ್ಯಮಗಳ ಮುಖಾಂತರ ಮತ್ತೆ ಮತ್ತೆ ಪ್ರಸ್ತಾಪ ಮಾಡಿದ್ದರು. ಆ ತಕ್ಷಣವೇ ಅವರನ್ನು ಮತ್ತು ಪ್ರಜ್ವಲ್ ರೇವಣ್ಣ ಕಾರಿನ ಮಾಜಿ ಚಾಲಕ ಕಾರ್ತಿಕ್ ಇಬ್ಬರನ್ನು ಬಂಧಿಸಿ ಹೆಚ್ಚಿನ ವಿಡಿಯೋಗಳು ಹಂಚಿಕೆಯಾಗದಂತೆ ತಡೆಯುವುದರಲ್ಲಿ ಚುನಾವಣಾ ಆಯೋಗ ಮತ್ತು ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿರುವು ಈ ಸಾಮಾಜಿಕ ತಲ್ಲಣಕ್ಕೆ ಕಾರಣವಾಗಿದೆ ಎಂದು ದೂರಿದರು.

ಇದು ಸಂಕೀರ್ಣ ಹಾಗೂ ಅಸಾಮಾನ್ಯ ಲೈಂಗಿಕ ದೌರ್ಜನ್ಯ ಹಗರಣ ಆಗಿರುವುದರಿಂದ ಈ ಪ್ರಕರಣದಲ್ಲಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಹಾಗೂ ಸಂತ್ರಸ್ತರು ನೇರವಾಗಿ ಎಸ್ಐಟಿ ಮುಂದೆ ಹಾಜರಾಗಲು ಹಿಂಜರಿಯುತ್ತಿದ್ದಾರೆ. ಅದ್ದರಿಂದ ಎಸ್ಐಟಿ ಯೇ ನೇರವಾಗಿ ಇವರನ್ನು ಸಂಪರ್ಕಿಸಿ ಅವರಲ್ಲಿ ಧೈರ್ಯ ತುಂಬಬೇಕು. ಸಂತ್ರಸ್ತರಿಗೆ ಸೂಕ್ತ ರಕ್ಷಣೆ ಒದಗಿಸಿ ಅವರ ಗೌಪ್ಯತೆ ಕಾಪಾಡುವ ಹಾಗೂ ಅಗತ್ಯ ನೆರವು ನೀಡುವ ಭರವಸೆಯನ್ನು ಸರ್ಕಾರ ಪ್ರಕಟಿಸಬೇಕು ಎಂದು ಒತ್ತಾಯಿಸಿದರು.

ಈ ಕೃತ್ಯದ ಬಗ್ಗೆ ಅಧಿಕೃತ ಮಾಹಿತಿ ಇದ್ದರೂ ಮೌನವಾಗಿರುವ ಬಿಜೆಪಿಗೆ ಮಹಿಳೆಯರ ಮೇಲೆ ನಡೆದಿರುವ ದೌರ್ಜನ್ಯಕ್ಕಿಂತ ಜೆಡಿಎಸ್ ಮೈತ್ರಿಯಿಂದ ಆಗಬಹುದಾದ ರಾಜಕೀಯ ಲಾಭವಷ್ಟೇ ಮುಖ್ಯವಾಗಿದೆ. ಪ್ರಜ್ವಲ್ ರೇವಣ್ಣನನ್ನು ಬಂಧಿಸಲು ಕೇಂದ್ರ ಸರ್ಕಾರ ಅನುಸರಿಸಬೇಕಾದ ರಾಜತಾಂತ್ರಿಕ ಕ್ರಮಗಳನ್ನು ಅನುಸರಿಸದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ, ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಈ ಹಗರಣದ ದಿಕ್ಕುತಪ್ಪಿಸುವ ಉದ್ದೇಶದಿಂದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಡ ಹೇರುತ್ತಿವೆ. ಕಾಂಗ್ರೆಸ್ ಕೂಡ ಈ ಕೆಸರೆರಚಾಟದಲ್ಲಿ ತೊಡಗಿರುವುದು ಹಗರಣದ ಗಂಭೀರತೆಗೆ ಧಕ್ಕೆ ತರುತ್ತಿದೆ ಎಂದು ಆರೋಪಿಸಿದರು.

ಸಭೆಯಲ್ಲಿ ಸಂವಿಧಾನ ರಕ್ಷಣೆಗಾಗಿ ನಾಗರೀಕ ವೇದಿಕೆ ಸಂಚಾಲಕ ರಾಜುಸಣ್ಣಕ್ಕಿ, ಸಿಪಿಐಎಂ ತಾಲ್ಲೂಕು ಕಾರ್ಯದರ್ಶಿ ರುದ್ರಾರಾಧ್ಯ,ಕನ್ನಡ ಪಕ್ಷದ ಮುಖಂಡ ಸಂಜೀವನಾಯಕ, ಮುನಿಪಾಪಯ್ಯ, ಕಾರ್ಮಿಕ ಮುಖಂಡರಾದ ಪಿ.ಎ.ವೆಂಕಟೇಶ್, ಮಾನವ ಬಂಧುತ್ವ ವೇದಿಕೆಯ ವೆಂಕಟೇಶ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷ ಶಿವಶಂಕರ್ ಎಸ್‌ಎಫ್‌ಐ ತಾಲ್ಲೂಕು ಅಧ್ಯಕ್ಷ ನಟರಾಜ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

22 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago