ಬೆಳಕಿಗಾಗಿ ಹಚ್ಚಿದ್ದ ದೀಪ ಆಕಸ್ಮಿಕವಾಗಿ ಗೋಡೆ ಮೇಲಿಂದ ಹಾಸಿಗೆ ಹಿಡಿದಿದ್ದ ವೃದ್ಧನ ಮೇಲೆ ಬಿದ್ದಿದ್ದು, ಬೆಂಕಿ ಕೋಣೆ ತುಂಬಾ ಆವರಿಸಿ ವೃದ್ಧನನ್ನು ಬಲಿ ಪಡೆದಿದೆ. ಈ ದುರ್ಘಟನೆ ನಗರದ ಕಚೇರಿಪಾಳ್ಯದಲ್ಲಿ ಮಂಗಳವಾರ ರಾತ್ರಿ ಸುಮಾರು 11ಕ್ಕೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ರಾಮಾಂಜಿನಪ್ಪ (70), ಮೃತ ದುರ್ದೈವಿ, ಮನೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದ ಕಾರಣ ಬೆಳಕಿಗೆಂದು ದೀಪ ಹಚ್ಚಲಾಗಿತ್ತು, ಈ ವೇಳೆ ದೀಪ ಕೆಳಗೆ ಬಿದ್ದು ಮನೆಯಲ್ಲಿದ್ದ ಬಟ್ಟೆಗಳ ಗಂಟಿಗೆ ಅಂಟಿಕೊಂಡಿದೆ, ವಯಸ್ಸಾಗಿದ್ದ ರಾಮಾಂಜಿನಪ್ಪ ಕುಳಿತರೆ ಎದ್ದೇಳಲಾಗದ ಪರಿಸ್ಥಿತಿಯಲ್ಲಿ ಬೆಂಕಿ ನಂದಿಸಲು ಆಗದೆ ಮಲಗಿದ್ದಲ್ಲೆ ನರಳಾಡಿ ಸಾಗಿವೀಡಾಗಿದ್ದಾರೆ. ಬೆಂಕಿಯ ಕೆನ್ನಾಲಗೆ ನೋಡ ನೋಡುತ್ತಿದ್ದಂತೆ ಮನೆಯನ್ನೆಲ್ಲಾ ಆವರಿಸಿ ಮನೆಯಲಿದ್ದ ವಸ್ತುಗಳೆಲ್ಲ ಸುಟ್ಟು ಕರಕಲಾಗಿದೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ.
ಸ್ಥಳಕ್ಕೆ ನಗರ ಠಾಣಾ ಪೊಲೀಸರು ಆಗಮಿಸಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…