ಬೆಳಕಿಗಾಗಿ ಹಚ್ಚಿದ್ದ ದೀಪ ಆಕಸ್ಮಿಕವಾಗಿ ಗೋಡೆ ಮೇಲಿಂದ ಹಾಸಿಗೆ ಹಿಡಿದಿದ್ದ ವೃದ್ಧನ ಮೇಲೆ ಬಿದ್ದಿದ್ದು, ಬೆಂಕಿ ಕೋಣೆ ತುಂಬಾ ಆವರಿಸಿ ವೃದ್ಧನನ್ನು ಬಲಿ ಪಡೆದಿದೆ. ಈ ದುರ್ಘಟನೆ ನಗರದ ಕಚೇರಿಪಾಳ್ಯದಲ್ಲಿ ಮಂಗಳವಾರ ರಾತ್ರಿ ಸುಮಾರು 11ಕ್ಕೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ರಾಮಾಂಜಿನಪ್ಪ (70), ಮೃತ ದುರ್ದೈವಿ, ಮನೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದ ಕಾರಣ ಬೆಳಕಿಗೆಂದು ದೀಪ ಹಚ್ಚಲಾಗಿತ್ತು, ಈ ವೇಳೆ ದೀಪ ಕೆಳಗೆ ಬಿದ್ದು ಮನೆಯಲ್ಲಿದ್ದ ಬಟ್ಟೆಗಳ ಗಂಟಿಗೆ ಅಂಟಿಕೊಂಡಿದೆ, ವಯಸ್ಸಾಗಿದ್ದ ರಾಮಾಂಜಿನಪ್ಪ ಕುಳಿತರೆ ಎದ್ದೇಳಲಾಗದ ಪರಿಸ್ಥಿತಿಯಲ್ಲಿ ಬೆಂಕಿ ನಂದಿಸಲು ಆಗದೆ ಮಲಗಿದ್ದಲ್ಲೆ ನರಳಾಡಿ ಸಾಗಿವೀಡಾಗಿದ್ದಾರೆ. ಬೆಂಕಿಯ ಕೆನ್ನಾಲಗೆ ನೋಡ ನೋಡುತ್ತಿದ್ದಂತೆ ಮನೆಯನ್ನೆಲ್ಲಾ ಆವರಿಸಿ ಮನೆಯಲಿದ್ದ ವಸ್ತುಗಳೆಲ್ಲ ಸುಟ್ಟು ಕರಕಲಾಗಿದೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ.
ಸ್ಥಳಕ್ಕೆ ನಗರ ಠಾಣಾ ಪೊಲೀಸರು ಆಗಮಿಸಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…