ಬೆಳಕಿಗಾಗಿ ಹಚ್ಚಿದ್ದ ದೀಪ ಆಕಸ್ಮಿಕವಾಗಿ ಗೋಡೆ ಮೇಲಿಂದ ಹಾಸಿಗೆ ಹಿಡಿದಿದ್ದ ವೃದ್ಧನ ಮೇಲೆ ಬಿದ್ದಿದ್ದು, ಬೆಂಕಿ ಕೋಣೆ ತುಂಬಾ ಆವರಿಸಿ ವೃದ್ಧನನ್ನು ಬಲಿ ಪಡೆದಿದೆ. ಈ ದುರ್ಘಟನೆ ನಗರದ ಕಚೇರಿಪಾಳ್ಯದಲ್ಲಿ ಮಂಗಳವಾರ ರಾತ್ರಿ ಸುಮಾರು 11ಕ್ಕೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ರಾಮಾಂಜಿನಪ್ಪ (70), ಮೃತ ದುರ್ದೈವಿ, ಮನೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದ ಕಾರಣ ಬೆಳಕಿಗೆಂದು ದೀಪ ಹಚ್ಚಲಾಗಿತ್ತು, ಈ ವೇಳೆ ದೀಪ ಕೆಳಗೆ ಬಿದ್ದು ಮನೆಯಲ್ಲಿದ್ದ ಬಟ್ಟೆಗಳ ಗಂಟಿಗೆ ಅಂಟಿಕೊಂಡಿದೆ, ವಯಸ್ಸಾಗಿದ್ದ ರಾಮಾಂಜಿನಪ್ಪ ಕುಳಿತರೆ ಎದ್ದೇಳಲಾಗದ ಪರಿಸ್ಥಿತಿಯಲ್ಲಿ ಬೆಂಕಿ ನಂದಿಸಲು ಆಗದೆ ಮಲಗಿದ್ದಲ್ಲೆ ನರಳಾಡಿ ಸಾಗಿವೀಡಾಗಿದ್ದಾರೆ. ಬೆಂಕಿಯ ಕೆನ್ನಾಲಗೆ ನೋಡ ನೋಡುತ್ತಿದ್ದಂತೆ ಮನೆಯನ್ನೆಲ್ಲಾ ಆವರಿಸಿ ಮನೆಯಲಿದ್ದ ವಸ್ತುಗಳೆಲ್ಲ ಸುಟ್ಟು ಕರಕಲಾಗಿದೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ.
ಸ್ಥಳಕ್ಕೆ ನಗರ ಠಾಣಾ ಪೊಲೀಸರು ಆಗಮಿಸಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…
ಕನ್ನಡದ ಕಣ್ಮಣಿ ಡಾ.ರಾಜ್ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.…
ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ…
ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…
ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…