ಬೆಳಕಿಗಾಗಿ ಹಚ್ಚಿದ್ದ ದೀಪ ಆಕಸ್ಮಿಕವಾಗಿ ಗೋಡೆ ಮೇಲಿಂದ ಹಾಸಿಗೆ ಹಿಡಿದಿದ್ದ ವೃದ್ಧನ ಮೇಲೆ ಬಿದ್ದಿದ್ದು, ಬೆಂಕಿ ಕೋಣೆ ತುಂಬಾ ಆವರಿಸಿ ವೃದ್ಧನನ್ನು ಬಲಿ ಪಡೆದಿದೆ. ಈ ದುರ್ಘಟನೆ ನಗರದ ಕಚೇರಿಪಾಳ್ಯದಲ್ಲಿ ಮಂಗಳವಾರ ರಾತ್ರಿ ಸುಮಾರು 11ಕ್ಕೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ರಾಮಾಂಜಿನಪ್ಪ (70), ಮೃತ ದುರ್ದೈವಿ, ಮನೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದ ಕಾರಣ ಬೆಳಕಿಗೆಂದು ದೀಪ ಹಚ್ಚಲಾಗಿತ್ತು, ಈ ವೇಳೆ ದೀಪ ಕೆಳಗೆ ಬಿದ್ದು ಮನೆಯಲ್ಲಿದ್ದ ಬಟ್ಟೆಗಳ ಗಂಟಿಗೆ ಅಂಟಿಕೊಂಡಿದೆ, ವಯಸ್ಸಾಗಿದ್ದ ರಾಮಾಂಜಿನಪ್ಪ ಕುಳಿತರೆ ಎದ್ದೇಳಲಾಗದ ಪರಿಸ್ಥಿತಿಯಲ್ಲಿ ಬೆಂಕಿ ನಂದಿಸಲು ಆಗದೆ ಮಲಗಿದ್ದಲ್ಲೆ ನರಳಾಡಿ ಸಾಗಿವೀಡಾಗಿದ್ದಾರೆ. ಬೆಂಕಿಯ ಕೆನ್ನಾಲಗೆ ನೋಡ ನೋಡುತ್ತಿದ್ದಂತೆ ಮನೆಯನ್ನೆಲ್ಲಾ ಆವರಿಸಿ ಮನೆಯಲಿದ್ದ ವಸ್ತುಗಳೆಲ್ಲ ಸುಟ್ಟು ಕರಕಲಾಗಿದೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ.
ಸ್ಥಳಕ್ಕೆ ನಗರ ಠಾಣಾ ಪೊಲೀಸರು ಆಗಮಿಸಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…