Categories: ಕೊಡಗು

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಪೊನ್ನಂಪೇಟೆ ಹಳ್ಳಿಗಟ್ಟು ಸಿಇ.ಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ(19) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಪೊನ್ನಂಪೇಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈಕೆ ರಾಯಚೂರಿನ ಮಹಾಂತಪ್ಪ ಎಂಬುವರ ಏಕೈಕ ಪುತ್ರಿಯಾಗಿದ್ದಾಳೆ. ಮೂರು ದಿನಗಳ ಹಿಂದೆ ತನ್ನ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಆಕೆ, ಅಂದಿನ ಕಾರ್ಯಕ್ರಮಕ್ಕೆ ಬಾರದವರಿಗೆ ಇಂದು ಕೂಡ ಹುಟ್ಟು ಹಬ್ಬದ ನಿಮಿತ, ಸ್ನೇಹಿತರಿಗೆ ಸಿಹಿ ಹಂಚಿದಳು. ತರಗತಿಗೆ ಆಗಮಿಸಿದ ನಂತರ ಸಂಜೆ 4 ಗಂಟೆಗೆ ಹಾಸ್ಟೆಲ್ ಸೇರಿಕೊಂಡಿದ್ದಾಳೆ ಎಂದು ಹೇಳಲಾಗಿದೆ.

4.30 ಗಂಟೆಗೆ ಆಕೆಯ ಸಹಪಾಠಿ ಕೊಠಡಿಗೆ ಹೋದಾಗ ಬಾಗಿಲು ಒಳಗಿನಿಂದ ಹಾಕಿಕೊಂಡಿದ್ದಳು ಎಷ್ಟೇ ಕೂಗಿದರು ಬಾರದಿದ್ದಾಗ ಹಾಸ್ಟೆಲ್ ಮೇಲ್ವಿಚಾರಕರಿಗೆ ವಿಷಯ ತಿಳಿಸಿ ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೋಚರಿಸಿತು. ನಂತರ ಪರಿಶೀಲಿಸಿದಾಗ ಡೆತ್ ನೋಟ್ ಪತ್ತೆಯಾಗಿ ಆರು ಬ್ಯಾಕ್ ಲಾಗ್ ಇರುವ ಕಾರಣ, ತನಗೆ ಮುಂದೆ ಓದಲು ಇಷ್ಟವಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಳು.

Ramesh Babu

Journalist

Recent Posts

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

3 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

3 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

14 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

14 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

17 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

20 hours ago