Categories: ಕೋಲಾರ

ಹಾಸ್ಟೆಲ್ ವ್ಯವಸ್ಥೆ ಸರಿಪಡಿಸಿ ಗುಣಮಟ್ಟದ ಆಹಾರ ನೀಡದ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ದ ಕ್ರಮಕ್ಕೆ ರೈತ ಸಂಘ ಅಗ್ರಹ

ಕೋಲಾರ: ಜಿಲ್ಲೆಯಾದ್ಯಂತ ಹದಗೆಟ್ಟಿರುವ ಹಾಸ್ಟೆಲ್ ವ್ಯವಸ್ಥೆಯನ್ನು ಸರಿಪಡಿಸಿ ಮಕ್ಕಳ ಊಟದ ವಿಚಾರದಲ್ಲಿ ತಾರತಮ್ಯ ಮಾಡುತ್ತಿರುವ ಅಧಿಕಾರಿಗಳು ಹಾಗೂ ಕಳಪೆ ಆಹಾರ ಪದಾರ್ಥಗಳನ್ನು ಸರಬರಾಜು ಮಾಡುವ ಗುತ್ತಿಗೆದಾರರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದರು.

ನಗರದ ಹೊರವಲಯದ ಸಮಾಜ ಕಲ್ಯಾಣ ಇಲಾಖೆ ಆವರಣದಲ್ಲಿ ಒತ್ತಾಯಿಸಿದ ಅವರು, ಜಿಲ್ಲೆಯಲ್ಲಿ ಬಡ ಮಕ್ಕಳ ವಿದ್ಯಾಭ್ಯಾಸ ಮಾಡುವ ಹಾಸ್ಟೆಲ್‌ಗಳಲ್ಲಿ ಒಂದಲ್ಲ ಒಂದು ರೀತಿ ಅವ್ಯವಸ್ಥೆ ನಡೆಯುತ್ತಿದೆ. ಇತ್ತೀಚೆಗೆ ಮಲದಗುಂಡಿಯಲ್ಲಿ ಮಕ್ಕಳಿಂದ ಸ್ವಚ್ಚತೆ ಹಾಗೂ ಹೆಣ್ಣು ಮಕ್ಕಳ ಆಶ್ಲೀಲ ಚಿತ್ರೀಕರಣ ಜೀವಂತವಾಗಿರುವಾಗ ಮತ್ತೆ ಹಾಸ್ಟೆಲ್‌ಗಳಲ್ಲಿನ ಸಿಬ್ಬಂದಿಯ ಬೇಜವಬ್ದಾರಿ ಮನಸ್ಥಾಪಗಳು ಒಳ ಜಗಳಗಳಿಂದ ಬಡ ಮಕ್ಕಳ ಊಟಕ್ಕೆ ವಿಷ ಹಾಕುವ ಪ್ರಕರಣ ಮಾನವೀಯತೆಯುಳ್ಳ ಸಮಾಜ ತಲೆ ತಗ್ಗಿಸುವಂತ ವಿಚಾರವಾಗಿದ್ದರೂ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದ ಅಧಿಕಾರಿಗಳ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು.

ಒಂದು ಕಡೆ ಮಕ್ಕಳ ಹಾಜರಾತಿಯಲ್ಲಿ ಹಾಗೂ ಆಹಾರ ಸರಬರಾಜು ಮಾಡುವ ಗುತ್ತಿಗೆದಾರರ ಕಡಿಮೆ ಬೆಲೆಯ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಿ ದುಬಾರಿ ಬೆಲೆಯ ಬಿಲ್‌ಗಳನ್ನು ನೀಡಿ ಅಧಿಕಾರಿಗಳ ಜೊತೆ ಶಾಮೀಲಾಗಿ ನಕಲಿ ದಾಖಲೆಗಳನ್ನು ಸೃಷ್ಠಿ ಮಾಡಿ ಕೋಟಿ ಕೋಟಿ ಹಣ ಲೂಟಿ ಮಾಡುವ ದಂದೆ ಒಂದು ಕಡೆಯಾದರೆ ಹಾಸ್ಟೆಲ್‌ನಲ್ಲಿ ಇರುವ ಮಕ್ಕಳಿಗೆ ಮೂಲಭೂತ ಸೌಕರ್ಯಗಳಿಲ್ಲದೆ ಅವ್ಯವಸ್ಥೆಯ ಹಗರಣಗಳಾಗಿ ಮಾರ್ಪಟ್ಟಿದ್ದರೂ ಕನಿಷ್ಠ ಸೌಜನ್ಯಕ್ಕಾದರೂ ಹಾಸ್ಟೆಲ್ ಭೇಟಿ ನೀಡದೆ ಸಭೆಗಳಲ್ಲಿ ಅಬ್ಬರಿಸಿ ಬಿಬ್ಬರಿಸುವ ಜನಪ್ರತಿನಿಧಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ ಜಿಲ್ಲೆಯಲ್ಲಿ ಜಲ್ವಂತ ಸಮಸ್ಯೆಗಳಿದ್ದರೂ ಉಸ್ತುವಾರಿ ಸಚಿವರು ನಾಪತ್ತೆ ಆಗಿರುವ ಜೊತೆಗೆ ಅಧಿಕಾರಿಗಳಿಗೆ ಭಯವಿಲ್ಲದೆ ಎಲ್ಲಾ ಕಚೇರಿಗಳು ದಲ್ಲಾಳಿಗಳ ಕಚೇರಿಗಳಾಗಿ ಮಾರ್ಪಟ್ಟಿವೆ ಖಾಸಗಿ ಶಾಲೆಗಳ ದುಬಾರಿ ಶುಲ್ಕ ಪಾವತಿಸಲಾಗದೆ ಸರ್ಕಾರದಿಂದ ಕೋಟ್ಯಾಂತರ ರೂಪಾಯಿ ಅನುದಾನದಲ್ಲಿ ನಿರ್ಮಿಸಿರುವ ವಿವಿಧ ವಸತಿ ಶಾಲೆಗಳಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಬರುವ ಮಕ್ಕಳ ಜೀವನದ ಜೊತೆ ಹಾಸ್ಟೆಲ್ ಸಿಬ್ಬಂದಿ ಮೂಲ ಭೂತ ಸೌಕರ್ಯಗಳು ಗುಣಮಟ್ಟದ ಊಟವಿಲ್ಲದೆ ಅಧಿಕಾರಿಗಳ ಮುಸುಕಿನ ಗುದ್ದಾಟಕ್ಕೆ ಬಲಿ ಆಗಬೇಕಾದ ಪರಿಸ್ಥಿತಿ ಇದೆ ಎಂದು ಆರೋಪಿಸಿದರು.

ಹಾಸ್ಟೆಲ್ ವ್ಯವಸ್ಥೆಗಳನ್ನು ಸರಿಪಡಿಸಲು ವಿಶೇಷ ತಂಡ ರಚನೆ ಮಾಡಿ ಮಕ್ಕಳ ಊಟದ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಸಿಬ್ಬಂದಿ ಹಾಗೂ ಕಳಪೆ ಗುಣಮಟ್ಟದ ಆಹಾರವನ್ನು ಸರಬರಾಜು ಮಾಡಿ ದುಬಾರಿ ಲೆಕ್ಕ ತೊರಿಸುವ ಗುತ್ತಿಗೆದಾರರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿ ಬಡಮಕ್ಕಳ ಶಿಕ್ಷಣ ಭವಿಷ್ಯವನ್ನು ರಕ್ಷಣೆ ಮಾಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾದ ಮಂಗಸಂದ್ರ ತಿಮ್ಮಣ್ಣ, ಯಲ್ಲಪ್ಪ, ಹರೀಶ್, ವಿಜಯ್‌ಪಾಲ್, ಪಾರುಕ್‌ಪಾಷ, ಗೀರೀಶ್, ಮುಂತಾದವರಿದ್ದರು.

Ramesh Babu

Journalist

Recent Posts

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

11 hours ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

13 hours ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

16 hours ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

17 hours ago

ಬಾಗಲಕೋಟೆಯಲ್ಲಿ ಕಲ್ಲುತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…

18 hours ago

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

1 day ago