Categories: ಕೋಲಾರ

ಹಾಸ್ಟೆಲ್ ವ್ಯವಸ್ಥೆ ಸರಿಪಡಿಸಿ ಗುಣಮಟ್ಟದ ಆಹಾರ ನೀಡದ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ದ ಕ್ರಮಕ್ಕೆ ರೈತ ಸಂಘ ಅಗ್ರಹ

ಕೋಲಾರ: ಜಿಲ್ಲೆಯಾದ್ಯಂತ ಹದಗೆಟ್ಟಿರುವ ಹಾಸ್ಟೆಲ್ ವ್ಯವಸ್ಥೆಯನ್ನು ಸರಿಪಡಿಸಿ ಮಕ್ಕಳ ಊಟದ ವಿಚಾರದಲ್ಲಿ ತಾರತಮ್ಯ ಮಾಡುತ್ತಿರುವ ಅಧಿಕಾರಿಗಳು ಹಾಗೂ ಕಳಪೆ ಆಹಾರ ಪದಾರ್ಥಗಳನ್ನು ಸರಬರಾಜು ಮಾಡುವ ಗುತ್ತಿಗೆದಾರರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದರು.

ನಗರದ ಹೊರವಲಯದ ಸಮಾಜ ಕಲ್ಯಾಣ ಇಲಾಖೆ ಆವರಣದಲ್ಲಿ ಒತ್ತಾಯಿಸಿದ ಅವರು, ಜಿಲ್ಲೆಯಲ್ಲಿ ಬಡ ಮಕ್ಕಳ ವಿದ್ಯಾಭ್ಯಾಸ ಮಾಡುವ ಹಾಸ್ಟೆಲ್‌ಗಳಲ್ಲಿ ಒಂದಲ್ಲ ಒಂದು ರೀತಿ ಅವ್ಯವಸ್ಥೆ ನಡೆಯುತ್ತಿದೆ. ಇತ್ತೀಚೆಗೆ ಮಲದಗುಂಡಿಯಲ್ಲಿ ಮಕ್ಕಳಿಂದ ಸ್ವಚ್ಚತೆ ಹಾಗೂ ಹೆಣ್ಣು ಮಕ್ಕಳ ಆಶ್ಲೀಲ ಚಿತ್ರೀಕರಣ ಜೀವಂತವಾಗಿರುವಾಗ ಮತ್ತೆ ಹಾಸ್ಟೆಲ್‌ಗಳಲ್ಲಿನ ಸಿಬ್ಬಂದಿಯ ಬೇಜವಬ್ದಾರಿ ಮನಸ್ಥಾಪಗಳು ಒಳ ಜಗಳಗಳಿಂದ ಬಡ ಮಕ್ಕಳ ಊಟಕ್ಕೆ ವಿಷ ಹಾಕುವ ಪ್ರಕರಣ ಮಾನವೀಯತೆಯುಳ್ಳ ಸಮಾಜ ತಲೆ ತಗ್ಗಿಸುವಂತ ವಿಚಾರವಾಗಿದ್ದರೂ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದ ಅಧಿಕಾರಿಗಳ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು.

ಒಂದು ಕಡೆ ಮಕ್ಕಳ ಹಾಜರಾತಿಯಲ್ಲಿ ಹಾಗೂ ಆಹಾರ ಸರಬರಾಜು ಮಾಡುವ ಗುತ್ತಿಗೆದಾರರ ಕಡಿಮೆ ಬೆಲೆಯ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಿ ದುಬಾರಿ ಬೆಲೆಯ ಬಿಲ್‌ಗಳನ್ನು ನೀಡಿ ಅಧಿಕಾರಿಗಳ ಜೊತೆ ಶಾಮೀಲಾಗಿ ನಕಲಿ ದಾಖಲೆಗಳನ್ನು ಸೃಷ್ಠಿ ಮಾಡಿ ಕೋಟಿ ಕೋಟಿ ಹಣ ಲೂಟಿ ಮಾಡುವ ದಂದೆ ಒಂದು ಕಡೆಯಾದರೆ ಹಾಸ್ಟೆಲ್‌ನಲ್ಲಿ ಇರುವ ಮಕ್ಕಳಿಗೆ ಮೂಲಭೂತ ಸೌಕರ್ಯಗಳಿಲ್ಲದೆ ಅವ್ಯವಸ್ಥೆಯ ಹಗರಣಗಳಾಗಿ ಮಾರ್ಪಟ್ಟಿದ್ದರೂ ಕನಿಷ್ಠ ಸೌಜನ್ಯಕ್ಕಾದರೂ ಹಾಸ್ಟೆಲ್ ಭೇಟಿ ನೀಡದೆ ಸಭೆಗಳಲ್ಲಿ ಅಬ್ಬರಿಸಿ ಬಿಬ್ಬರಿಸುವ ಜನಪ್ರತಿನಿಧಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ ಜಿಲ್ಲೆಯಲ್ಲಿ ಜಲ್ವಂತ ಸಮಸ್ಯೆಗಳಿದ್ದರೂ ಉಸ್ತುವಾರಿ ಸಚಿವರು ನಾಪತ್ತೆ ಆಗಿರುವ ಜೊತೆಗೆ ಅಧಿಕಾರಿಗಳಿಗೆ ಭಯವಿಲ್ಲದೆ ಎಲ್ಲಾ ಕಚೇರಿಗಳು ದಲ್ಲಾಳಿಗಳ ಕಚೇರಿಗಳಾಗಿ ಮಾರ್ಪಟ್ಟಿವೆ ಖಾಸಗಿ ಶಾಲೆಗಳ ದುಬಾರಿ ಶುಲ್ಕ ಪಾವತಿಸಲಾಗದೆ ಸರ್ಕಾರದಿಂದ ಕೋಟ್ಯಾಂತರ ರೂಪಾಯಿ ಅನುದಾನದಲ್ಲಿ ನಿರ್ಮಿಸಿರುವ ವಿವಿಧ ವಸತಿ ಶಾಲೆಗಳಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಬರುವ ಮಕ್ಕಳ ಜೀವನದ ಜೊತೆ ಹಾಸ್ಟೆಲ್ ಸಿಬ್ಬಂದಿ ಮೂಲ ಭೂತ ಸೌಕರ್ಯಗಳು ಗುಣಮಟ್ಟದ ಊಟವಿಲ್ಲದೆ ಅಧಿಕಾರಿಗಳ ಮುಸುಕಿನ ಗುದ್ದಾಟಕ್ಕೆ ಬಲಿ ಆಗಬೇಕಾದ ಪರಿಸ್ಥಿತಿ ಇದೆ ಎಂದು ಆರೋಪಿಸಿದರು.

ಹಾಸ್ಟೆಲ್ ವ್ಯವಸ್ಥೆಗಳನ್ನು ಸರಿಪಡಿಸಲು ವಿಶೇಷ ತಂಡ ರಚನೆ ಮಾಡಿ ಮಕ್ಕಳ ಊಟದ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಸಿಬ್ಬಂದಿ ಹಾಗೂ ಕಳಪೆ ಗುಣಮಟ್ಟದ ಆಹಾರವನ್ನು ಸರಬರಾಜು ಮಾಡಿ ದುಬಾರಿ ಲೆಕ್ಕ ತೊರಿಸುವ ಗುತ್ತಿಗೆದಾರರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿ ಬಡಮಕ್ಕಳ ಶಿಕ್ಷಣ ಭವಿಷ್ಯವನ್ನು ರಕ್ಷಣೆ ಮಾಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾದ ಮಂಗಸಂದ್ರ ತಿಮ್ಮಣ್ಣ, ಯಲ್ಲಪ್ಪ, ಹರೀಶ್, ವಿಜಯ್‌ಪಾಲ್, ಪಾರುಕ್‌ಪಾಷ, ಗೀರೀಶ್, ಮುಂತಾದವರಿದ್ದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

1 hour ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

2 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

3 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

4 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

6 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

12 hours ago