ಕೋಲಾರ: ಜಿಲ್ಲೆಯಾದ್ಯಂತ ಹದಗೆಟ್ಟಿರುವ ಹಾಸ್ಟೆಲ್ ವ್ಯವಸ್ಥೆಯನ್ನು ಸರಿಪಡಿಸಿ ಮಕ್ಕಳ ಊಟದ ವಿಚಾರದಲ್ಲಿ ತಾರತಮ್ಯ ಮಾಡುತ್ತಿರುವ ಅಧಿಕಾರಿಗಳು ಹಾಗೂ ಕಳಪೆ ಆಹಾರ ಪದಾರ್ಥಗಳನ್ನು ಸರಬರಾಜು ಮಾಡುವ ಗುತ್ತಿಗೆದಾರರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದರು.
ನಗರದ ಹೊರವಲಯದ ಸಮಾಜ ಕಲ್ಯಾಣ ಇಲಾಖೆ ಆವರಣದಲ್ಲಿ ಒತ್ತಾಯಿಸಿದ ಅವರು, ಜಿಲ್ಲೆಯಲ್ಲಿ ಬಡ ಮಕ್ಕಳ ವಿದ್ಯಾಭ್ಯಾಸ ಮಾಡುವ ಹಾಸ್ಟೆಲ್ಗಳಲ್ಲಿ ಒಂದಲ್ಲ ಒಂದು ರೀತಿ ಅವ್ಯವಸ್ಥೆ ನಡೆಯುತ್ತಿದೆ. ಇತ್ತೀಚೆಗೆ ಮಲದಗುಂಡಿಯಲ್ಲಿ ಮಕ್ಕಳಿಂದ ಸ್ವಚ್ಚತೆ ಹಾಗೂ ಹೆಣ್ಣು ಮಕ್ಕಳ ಆಶ್ಲೀಲ ಚಿತ್ರೀಕರಣ ಜೀವಂತವಾಗಿರುವಾಗ ಮತ್ತೆ ಹಾಸ್ಟೆಲ್ಗಳಲ್ಲಿನ ಸಿಬ್ಬಂದಿಯ ಬೇಜವಬ್ದಾರಿ ಮನಸ್ಥಾಪಗಳು ಒಳ ಜಗಳಗಳಿಂದ ಬಡ ಮಕ್ಕಳ ಊಟಕ್ಕೆ ವಿಷ ಹಾಕುವ ಪ್ರಕರಣ ಮಾನವೀಯತೆಯುಳ್ಳ ಸಮಾಜ ತಲೆ ತಗ್ಗಿಸುವಂತ ವಿಚಾರವಾಗಿದ್ದರೂ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದ ಅಧಿಕಾರಿಗಳ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು.
ಒಂದು ಕಡೆ ಮಕ್ಕಳ ಹಾಜರಾತಿಯಲ್ಲಿ ಹಾಗೂ ಆಹಾರ ಸರಬರಾಜು ಮಾಡುವ ಗುತ್ತಿಗೆದಾರರ ಕಡಿಮೆ ಬೆಲೆಯ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಿ ದುಬಾರಿ ಬೆಲೆಯ ಬಿಲ್ಗಳನ್ನು ನೀಡಿ ಅಧಿಕಾರಿಗಳ ಜೊತೆ ಶಾಮೀಲಾಗಿ ನಕಲಿ ದಾಖಲೆಗಳನ್ನು ಸೃಷ್ಠಿ ಮಾಡಿ ಕೋಟಿ ಕೋಟಿ ಹಣ ಲೂಟಿ ಮಾಡುವ ದಂದೆ ಒಂದು ಕಡೆಯಾದರೆ ಹಾಸ್ಟೆಲ್ನಲ್ಲಿ ಇರುವ ಮಕ್ಕಳಿಗೆ ಮೂಲಭೂತ ಸೌಕರ್ಯಗಳಿಲ್ಲದೆ ಅವ್ಯವಸ್ಥೆಯ ಹಗರಣಗಳಾಗಿ ಮಾರ್ಪಟ್ಟಿದ್ದರೂ ಕನಿಷ್ಠ ಸೌಜನ್ಯಕ್ಕಾದರೂ ಹಾಸ್ಟೆಲ್ ಭೇಟಿ ನೀಡದೆ ಸಭೆಗಳಲ್ಲಿ ಅಬ್ಬರಿಸಿ ಬಿಬ್ಬರಿಸುವ ಜನಪ್ರತಿನಿಧಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ ಜಿಲ್ಲೆಯಲ್ಲಿ ಜಲ್ವಂತ ಸಮಸ್ಯೆಗಳಿದ್ದರೂ ಉಸ್ತುವಾರಿ ಸಚಿವರು ನಾಪತ್ತೆ ಆಗಿರುವ ಜೊತೆಗೆ ಅಧಿಕಾರಿಗಳಿಗೆ ಭಯವಿಲ್ಲದೆ ಎಲ್ಲಾ ಕಚೇರಿಗಳು ದಲ್ಲಾಳಿಗಳ ಕಚೇರಿಗಳಾಗಿ ಮಾರ್ಪಟ್ಟಿವೆ ಖಾಸಗಿ ಶಾಲೆಗಳ ದುಬಾರಿ ಶುಲ್ಕ ಪಾವತಿಸಲಾಗದೆ ಸರ್ಕಾರದಿಂದ ಕೋಟ್ಯಾಂತರ ರೂಪಾಯಿ ಅನುದಾನದಲ್ಲಿ ನಿರ್ಮಿಸಿರುವ ವಿವಿಧ ವಸತಿ ಶಾಲೆಗಳಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಬರುವ ಮಕ್ಕಳ ಜೀವನದ ಜೊತೆ ಹಾಸ್ಟೆಲ್ ಸಿಬ್ಬಂದಿ ಮೂಲ ಭೂತ ಸೌಕರ್ಯಗಳು ಗುಣಮಟ್ಟದ ಊಟವಿಲ್ಲದೆ ಅಧಿಕಾರಿಗಳ ಮುಸುಕಿನ ಗುದ್ದಾಟಕ್ಕೆ ಬಲಿ ಆಗಬೇಕಾದ ಪರಿಸ್ಥಿತಿ ಇದೆ ಎಂದು ಆರೋಪಿಸಿದರು.
ಹಾಸ್ಟೆಲ್ ವ್ಯವಸ್ಥೆಗಳನ್ನು ಸರಿಪಡಿಸಲು ವಿಶೇಷ ತಂಡ ರಚನೆ ಮಾಡಿ ಮಕ್ಕಳ ಊಟದ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಸಿಬ್ಬಂದಿ ಹಾಗೂ ಕಳಪೆ ಗುಣಮಟ್ಟದ ಆಹಾರವನ್ನು ಸರಬರಾಜು ಮಾಡಿ ದುಬಾರಿ ಲೆಕ್ಕ ತೊರಿಸುವ ಗುತ್ತಿಗೆದಾರರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿ ಬಡಮಕ್ಕಳ ಶಿಕ್ಷಣ ಭವಿಷ್ಯವನ್ನು ರಕ್ಷಣೆ ಮಾಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾದ ಮಂಗಸಂದ್ರ ತಿಮ್ಮಣ್ಣ, ಯಲ್ಲಪ್ಪ, ಹರೀಶ್, ವಿಜಯ್ಪಾಲ್, ಪಾರುಕ್ಪಾಷ, ಗೀರೀಶ್, ಮುಂತಾದವರಿದ್ದರು.
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…