ಕೋಲಾರ: ಜಿಲ್ಲೆಯಾದ್ಯಂತ ಹದಗೆಟ್ಟಿರುವ ಹಾಸ್ಟೆಲ್ ವ್ಯವಸ್ಥೆಯನ್ನು ಸರಿಪಡಿಸಿ ಮಕ್ಕಳ ಊಟದ ವಿಚಾರದಲ್ಲಿ ತಾರತಮ್ಯ ಮಾಡುತ್ತಿರುವ ಅಧಿಕಾರಿಗಳು ಹಾಗೂ ಕಳಪೆ ಆಹಾರ ಪದಾರ್ಥಗಳನ್ನು ಸರಬರಾಜು ಮಾಡುವ ಗುತ್ತಿಗೆದಾರರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದರು.
ನಗರದ ಹೊರವಲಯದ ಸಮಾಜ ಕಲ್ಯಾಣ ಇಲಾಖೆ ಆವರಣದಲ್ಲಿ ಒತ್ತಾಯಿಸಿದ ಅವರು, ಜಿಲ್ಲೆಯಲ್ಲಿ ಬಡ ಮಕ್ಕಳ ವಿದ್ಯಾಭ್ಯಾಸ ಮಾಡುವ ಹಾಸ್ಟೆಲ್ಗಳಲ್ಲಿ ಒಂದಲ್ಲ ಒಂದು ರೀತಿ ಅವ್ಯವಸ್ಥೆ ನಡೆಯುತ್ತಿದೆ. ಇತ್ತೀಚೆಗೆ ಮಲದಗುಂಡಿಯಲ್ಲಿ ಮಕ್ಕಳಿಂದ ಸ್ವಚ್ಚತೆ ಹಾಗೂ ಹೆಣ್ಣು ಮಕ್ಕಳ ಆಶ್ಲೀಲ ಚಿತ್ರೀಕರಣ ಜೀವಂತವಾಗಿರುವಾಗ ಮತ್ತೆ ಹಾಸ್ಟೆಲ್ಗಳಲ್ಲಿನ ಸಿಬ್ಬಂದಿಯ ಬೇಜವಬ್ದಾರಿ ಮನಸ್ಥಾಪಗಳು ಒಳ ಜಗಳಗಳಿಂದ ಬಡ ಮಕ್ಕಳ ಊಟಕ್ಕೆ ವಿಷ ಹಾಕುವ ಪ್ರಕರಣ ಮಾನವೀಯತೆಯುಳ್ಳ ಸಮಾಜ ತಲೆ ತಗ್ಗಿಸುವಂತ ವಿಚಾರವಾಗಿದ್ದರೂ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದ ಅಧಿಕಾರಿಗಳ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು.
ಒಂದು ಕಡೆ ಮಕ್ಕಳ ಹಾಜರಾತಿಯಲ್ಲಿ ಹಾಗೂ ಆಹಾರ ಸರಬರಾಜು ಮಾಡುವ ಗುತ್ತಿಗೆದಾರರ ಕಡಿಮೆ ಬೆಲೆಯ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಿ ದುಬಾರಿ ಬೆಲೆಯ ಬಿಲ್ಗಳನ್ನು ನೀಡಿ ಅಧಿಕಾರಿಗಳ ಜೊತೆ ಶಾಮೀಲಾಗಿ ನಕಲಿ ದಾಖಲೆಗಳನ್ನು ಸೃಷ್ಠಿ ಮಾಡಿ ಕೋಟಿ ಕೋಟಿ ಹಣ ಲೂಟಿ ಮಾಡುವ ದಂದೆ ಒಂದು ಕಡೆಯಾದರೆ ಹಾಸ್ಟೆಲ್ನಲ್ಲಿ ಇರುವ ಮಕ್ಕಳಿಗೆ ಮೂಲಭೂತ ಸೌಕರ್ಯಗಳಿಲ್ಲದೆ ಅವ್ಯವಸ್ಥೆಯ ಹಗರಣಗಳಾಗಿ ಮಾರ್ಪಟ್ಟಿದ್ದರೂ ಕನಿಷ್ಠ ಸೌಜನ್ಯಕ್ಕಾದರೂ ಹಾಸ್ಟೆಲ್ ಭೇಟಿ ನೀಡದೆ ಸಭೆಗಳಲ್ಲಿ ಅಬ್ಬರಿಸಿ ಬಿಬ್ಬರಿಸುವ ಜನಪ್ರತಿನಿಧಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ ಜಿಲ್ಲೆಯಲ್ಲಿ ಜಲ್ವಂತ ಸಮಸ್ಯೆಗಳಿದ್ದರೂ ಉಸ್ತುವಾರಿ ಸಚಿವರು ನಾಪತ್ತೆ ಆಗಿರುವ ಜೊತೆಗೆ ಅಧಿಕಾರಿಗಳಿಗೆ ಭಯವಿಲ್ಲದೆ ಎಲ್ಲಾ ಕಚೇರಿಗಳು ದಲ್ಲಾಳಿಗಳ ಕಚೇರಿಗಳಾಗಿ ಮಾರ್ಪಟ್ಟಿವೆ ಖಾಸಗಿ ಶಾಲೆಗಳ ದುಬಾರಿ ಶುಲ್ಕ ಪಾವತಿಸಲಾಗದೆ ಸರ್ಕಾರದಿಂದ ಕೋಟ್ಯಾಂತರ ರೂಪಾಯಿ ಅನುದಾನದಲ್ಲಿ ನಿರ್ಮಿಸಿರುವ ವಿವಿಧ ವಸತಿ ಶಾಲೆಗಳಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಬರುವ ಮಕ್ಕಳ ಜೀವನದ ಜೊತೆ ಹಾಸ್ಟೆಲ್ ಸಿಬ್ಬಂದಿ ಮೂಲ ಭೂತ ಸೌಕರ್ಯಗಳು ಗುಣಮಟ್ಟದ ಊಟವಿಲ್ಲದೆ ಅಧಿಕಾರಿಗಳ ಮುಸುಕಿನ ಗುದ್ದಾಟಕ್ಕೆ ಬಲಿ ಆಗಬೇಕಾದ ಪರಿಸ್ಥಿತಿ ಇದೆ ಎಂದು ಆರೋಪಿಸಿದರು.
ಹಾಸ್ಟೆಲ್ ವ್ಯವಸ್ಥೆಗಳನ್ನು ಸರಿಪಡಿಸಲು ವಿಶೇಷ ತಂಡ ರಚನೆ ಮಾಡಿ ಮಕ್ಕಳ ಊಟದ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಸಿಬ್ಬಂದಿ ಹಾಗೂ ಕಳಪೆ ಗುಣಮಟ್ಟದ ಆಹಾರವನ್ನು ಸರಬರಾಜು ಮಾಡಿ ದುಬಾರಿ ಲೆಕ್ಕ ತೊರಿಸುವ ಗುತ್ತಿಗೆದಾರರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿ ಬಡಮಕ್ಕಳ ಶಿಕ್ಷಣ ಭವಿಷ್ಯವನ್ನು ರಕ್ಷಣೆ ಮಾಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾದ ಮಂಗಸಂದ್ರ ತಿಮ್ಮಣ್ಣ, ಯಲ್ಲಪ್ಪ, ಹರೀಶ್, ವಿಜಯ್ಪಾಲ್, ಪಾರುಕ್ಪಾಷ, ಗೀರೀಶ್, ಮುಂತಾದವರಿದ್ದರು.
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…