Categories: ಕೋಲಾರ

ಹಾಸ್ಟೆಲ್ ವ್ಯವಸ್ಥೆ ಸರಿಪಡಿಸಿ ಗುಣಮಟ್ಟದ ಆಹಾರ ನೀಡದ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ದ ಕ್ರಮಕ್ಕೆ ರೈತ ಸಂಘ ಅಗ್ರಹ

ಕೋಲಾರ: ಜಿಲ್ಲೆಯಾದ್ಯಂತ ಹದಗೆಟ್ಟಿರುವ ಹಾಸ್ಟೆಲ್ ವ್ಯವಸ್ಥೆಯನ್ನು ಸರಿಪಡಿಸಿ ಮಕ್ಕಳ ಊಟದ ವಿಚಾರದಲ್ಲಿ ತಾರತಮ್ಯ ಮಾಡುತ್ತಿರುವ ಅಧಿಕಾರಿಗಳು ಹಾಗೂ ಕಳಪೆ ಆಹಾರ ಪದಾರ್ಥಗಳನ್ನು ಸರಬರಾಜು ಮಾಡುವ ಗುತ್ತಿಗೆದಾರರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದರು.

ನಗರದ ಹೊರವಲಯದ ಸಮಾಜ ಕಲ್ಯಾಣ ಇಲಾಖೆ ಆವರಣದಲ್ಲಿ ಒತ್ತಾಯಿಸಿದ ಅವರು, ಜಿಲ್ಲೆಯಲ್ಲಿ ಬಡ ಮಕ್ಕಳ ವಿದ್ಯಾಭ್ಯಾಸ ಮಾಡುವ ಹಾಸ್ಟೆಲ್‌ಗಳಲ್ಲಿ ಒಂದಲ್ಲ ಒಂದು ರೀತಿ ಅವ್ಯವಸ್ಥೆ ನಡೆಯುತ್ತಿದೆ. ಇತ್ತೀಚೆಗೆ ಮಲದಗುಂಡಿಯಲ್ಲಿ ಮಕ್ಕಳಿಂದ ಸ್ವಚ್ಚತೆ ಹಾಗೂ ಹೆಣ್ಣು ಮಕ್ಕಳ ಆಶ್ಲೀಲ ಚಿತ್ರೀಕರಣ ಜೀವಂತವಾಗಿರುವಾಗ ಮತ್ತೆ ಹಾಸ್ಟೆಲ್‌ಗಳಲ್ಲಿನ ಸಿಬ್ಬಂದಿಯ ಬೇಜವಬ್ದಾರಿ ಮನಸ್ಥಾಪಗಳು ಒಳ ಜಗಳಗಳಿಂದ ಬಡ ಮಕ್ಕಳ ಊಟಕ್ಕೆ ವಿಷ ಹಾಕುವ ಪ್ರಕರಣ ಮಾನವೀಯತೆಯುಳ್ಳ ಸಮಾಜ ತಲೆ ತಗ್ಗಿಸುವಂತ ವಿಚಾರವಾಗಿದ್ದರೂ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದ ಅಧಿಕಾರಿಗಳ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು.

ಒಂದು ಕಡೆ ಮಕ್ಕಳ ಹಾಜರಾತಿಯಲ್ಲಿ ಹಾಗೂ ಆಹಾರ ಸರಬರಾಜು ಮಾಡುವ ಗುತ್ತಿಗೆದಾರರ ಕಡಿಮೆ ಬೆಲೆಯ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಿ ದುಬಾರಿ ಬೆಲೆಯ ಬಿಲ್‌ಗಳನ್ನು ನೀಡಿ ಅಧಿಕಾರಿಗಳ ಜೊತೆ ಶಾಮೀಲಾಗಿ ನಕಲಿ ದಾಖಲೆಗಳನ್ನು ಸೃಷ್ಠಿ ಮಾಡಿ ಕೋಟಿ ಕೋಟಿ ಹಣ ಲೂಟಿ ಮಾಡುವ ದಂದೆ ಒಂದು ಕಡೆಯಾದರೆ ಹಾಸ್ಟೆಲ್‌ನಲ್ಲಿ ಇರುವ ಮಕ್ಕಳಿಗೆ ಮೂಲಭೂತ ಸೌಕರ್ಯಗಳಿಲ್ಲದೆ ಅವ್ಯವಸ್ಥೆಯ ಹಗರಣಗಳಾಗಿ ಮಾರ್ಪಟ್ಟಿದ್ದರೂ ಕನಿಷ್ಠ ಸೌಜನ್ಯಕ್ಕಾದರೂ ಹಾಸ್ಟೆಲ್ ಭೇಟಿ ನೀಡದೆ ಸಭೆಗಳಲ್ಲಿ ಅಬ್ಬರಿಸಿ ಬಿಬ್ಬರಿಸುವ ಜನಪ್ರತಿನಿಧಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ ಜಿಲ್ಲೆಯಲ್ಲಿ ಜಲ್ವಂತ ಸಮಸ್ಯೆಗಳಿದ್ದರೂ ಉಸ್ತುವಾರಿ ಸಚಿವರು ನಾಪತ್ತೆ ಆಗಿರುವ ಜೊತೆಗೆ ಅಧಿಕಾರಿಗಳಿಗೆ ಭಯವಿಲ್ಲದೆ ಎಲ್ಲಾ ಕಚೇರಿಗಳು ದಲ್ಲಾಳಿಗಳ ಕಚೇರಿಗಳಾಗಿ ಮಾರ್ಪಟ್ಟಿವೆ ಖಾಸಗಿ ಶಾಲೆಗಳ ದುಬಾರಿ ಶುಲ್ಕ ಪಾವತಿಸಲಾಗದೆ ಸರ್ಕಾರದಿಂದ ಕೋಟ್ಯಾಂತರ ರೂಪಾಯಿ ಅನುದಾನದಲ್ಲಿ ನಿರ್ಮಿಸಿರುವ ವಿವಿಧ ವಸತಿ ಶಾಲೆಗಳಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಬರುವ ಮಕ್ಕಳ ಜೀವನದ ಜೊತೆ ಹಾಸ್ಟೆಲ್ ಸಿಬ್ಬಂದಿ ಮೂಲ ಭೂತ ಸೌಕರ್ಯಗಳು ಗುಣಮಟ್ಟದ ಊಟವಿಲ್ಲದೆ ಅಧಿಕಾರಿಗಳ ಮುಸುಕಿನ ಗುದ್ದಾಟಕ್ಕೆ ಬಲಿ ಆಗಬೇಕಾದ ಪರಿಸ್ಥಿತಿ ಇದೆ ಎಂದು ಆರೋಪಿಸಿದರು.

ಹಾಸ್ಟೆಲ್ ವ್ಯವಸ್ಥೆಗಳನ್ನು ಸರಿಪಡಿಸಲು ವಿಶೇಷ ತಂಡ ರಚನೆ ಮಾಡಿ ಮಕ್ಕಳ ಊಟದ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಸಿಬ್ಬಂದಿ ಹಾಗೂ ಕಳಪೆ ಗುಣಮಟ್ಟದ ಆಹಾರವನ್ನು ಸರಬರಾಜು ಮಾಡಿ ದುಬಾರಿ ಲೆಕ್ಕ ತೊರಿಸುವ ಗುತ್ತಿಗೆದಾರರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿ ಬಡಮಕ್ಕಳ ಶಿಕ್ಷಣ ಭವಿಷ್ಯವನ್ನು ರಕ್ಷಣೆ ಮಾಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾದ ಮಂಗಸಂದ್ರ ತಿಮ್ಮಣ್ಣ, ಯಲ್ಲಪ್ಪ, ಹರೀಶ್, ವಿಜಯ್‌ಪಾಲ್, ಪಾರುಕ್‌ಪಾಷ, ಗೀರೀಶ್, ಮುಂತಾದವರಿದ್ದರು.

Ramesh Babu

Journalist

Recent Posts

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

16 hours ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

16 hours ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

22 hours ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

3 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

4 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

4 days ago