ಹಿಂದಿನ ಸರ್ಕಾರದಲ್ಲಿ ಬಜೆಟ್ ಗಾತ್ರ ಹೆಚ್ಚಾದರೂ ಎಸ್.ಸಿ, ಎಸ್.ಪಿ/ಟಿ.ಎಸ್.ಪಿ ಅನುದಾನ ಹೆಚ್ಚಾಗಿರಲಿಲ್ಲ- ಸಿಎಂ‌ ಸಿದ್ದರಾಮಯ್ಯ

ಕರ್ನಾಟಕದಲ್ಲಿ ಎಸ್.ಸಿ.ಎಸ್.ಪಿ/ ಟಿ. ಎಸ್.ಪಿ ಕಾಯ್ದೆಯನ್ನು ಜಾರಿಗೆ ತರಲಾಗಿದೆ. 2008 ರಿಂದ 2013 ರವರೆಗೆ 22,000 ಕೋಟಿರೂ.ಗಳು ವೆಚ್ಚವಾಗಿದೆ. 2013 ರಿಂದ 2018 ರವರೆ 88 ಸಾವಿರ ಕೋಟಿ ರೂ.ಗಳು ವೆಚ್ಚವಾಗಿದೆ. ಹೆಚ್ಚು ದುರುಪಯೋಗವಾಗುತ್ತದೆ ಎಂಬ ಕಾರಣದಿಂದ 7ಡಿ ಯನ್ನು ತೆಗೆದುಹಾಕಿ ಆದೇಶವನ್ನು ಹೊರಡಿಸಿದೆ. ಯಾವುದೇ ಆರ್ಥಿಕ ವರ್ಷದಲ್ಲಿ ಹಣ ಖರ್ಚಾಗದಿದ್ದರೆ ಮುಂದಿನ ವರ್ಷಕ್ಕೆ ಮುಂದುವರೆಯುತ್ತದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ದುರುಪಯೋಗವಾದರೆ ಕ್ರಿಮಿನಲ್ ಮೊಕದ್ದಮೆ ಹೂಡಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ದಲಿತ ಸಂಘಟನೆಗಳ ಮುಖಂಡರೊಂದಿಗೆ 2024-25ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಜನಸಂಖ್ಯೆಗೆ ಅನುಗುಣವಾಗಿ ಹಣವನ್ನು ಖರ್ಚು ಮಾಡಬೇಕು ಎಂದು ಆಂಧ್ರಪ್ರದೇಶ ಹಾಗೂ ಕರ್ನಾಟಕದಲ್ಲಿ ಕಾಯ್ದೆ ತರಲಾಗಿದೆ. ಇದು ಇಡೀ ದೇಶದಲ್ಲಿ ಆಗಬೇಕು. ನಮ್ಮ ಪ್ರಣಾಳಿಕೆಯಲ್ಲಿ ಪ್ರಮುಖ ಯೋಜನೆಯಾಗಬೇಕೆಂದು ಸೂಚಿಸಿದೆ ಎಂದರು.

ಬಡ್ತಿಯಲ್ಲಿ ಮೀಸಲಾತಿ ಕಾಯ್ದೆ ಮಾಡಿದ್ದು ಇಡೀ ದೇಶದಲ್ಲಿ ಕರ್ನಾಟಕ ಮಾತ್ರ. ಪಿ.ಟಿ. ಸಿ.ಎಲ್ ಕಾಯ್ದೆ ತಿದ್ದುಪಡಿ ಮಾಡಿದೆ. ಎಸ್.ಸಿ.ಎಸ್.ಟಿ ಜನಾಂಗದವರಿಗೆ ಗುತ್ತಿಗೆಯಲ್ಲಿ 1 ಕೋಟಿ ವರೆಗೆ ಮೀಸಲಾತಿ ನೀಡಲಾಗಿದೆ. ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಲು ಈ ಕ್ರಮಗಳನ್ನು ಕೈಗೊಂಡಿದೆ. 7% ಪರಿಶಿಷ್ಟ ವರ್ಗದವರಿದ್ದಾರೆ, 17.15% ಪರಿಶಿಷ್ಟ ಜಾತಿಯವರಿದ್ದಾರೆ. 21.1 % ಜನಸಂಖ್ಯೆಗೆ ಅನುಗುಣವಾಗಿ ಅಭಿವೃದ್ಧಿ ಕೆಲಸದಲ್ಲಿ ಅನುದಾನ ನೀಡಿದೆ ಎಂದು ಮಾಹಿತಿ ನೀಡಿದರು.

ಹಿಂದಿನ ಸರ್ಕಾರದಲ್ಲಿ ಬಜೆಟ್ ಗಾತ್ರ ಹೆಚ್ಚಾದರೂ ಎಸ್.ಸಿ, ಎಸ್ ಪಿ / ಟಿಎಸ್ ಪಿ ಅನುದಾನ ಹೆಚ್ಚಾಗಿರಲಿಲ್ಲ. ಇದನ್ನು ಗುರುತಿಸಬೇಕು. ನಮ್ಮ ಸರ್ಕಾರ ಸಾಮಾಜಿಕ ಬದ್ಧತೆಯುಳ್ಳ ಸರ್ಕಾರ ಎಂದು ಹೇಳಿದರು.

ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್,  ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ರಾಜೀವ್ ಗೌಡ ಹಾಗೂ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

7 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

8 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

9 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

9 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

13 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

15 hours ago