Categories: ಮೈಸೂರು

ಹಿಂದಿನ ಸರ್ಕಾರ ಹಣವಿಲ್ಲದಿದ್ದರೂ ಕೆಲಸ ಮಂಜೂರು: ಟೆಂಡರ್ ಕರೆದು 30,000 ಕೋಟಿ ರೂ.ಗಳಷ್ಟು ಬಾಕಿ ಬಿಲ್ಲುಗಳಿವೆ-ಇದಕ್ಕೆ ಯಾರು ಹೊಣೆ?- ಸಿಎಂ‌ ಸಿದ್ದರಾಮಯ್ಯ ಪ್ರಶ್ನೆ

ಹಿಂದಿನ ಸರ್ಕಾರ ಹಣವಿಲ್ಲದಿದ್ದರೂ ಕೆಲಸ ಮಂಜೂರು ಮಾಡಿ, ಟೆಂಡರ್ ಕರೆದು ಬಿಲ್ಲುಗಳನ್ನು ಬಾಕಿ ಇಟ್ಟು ಹೋಗಿದೆ. 30,000 ಕೋಟಿ ರೂ.ಗಳಷ್ಟು ಬಾಕಿ ಬಿಲ್ಲುಗಳಿವೆ. ಇದಕ್ಕೆ ಯಾರು ಹೊಣೆ? ನಮ್ಮ ಕಾಲದ ಹಾಗೂ ಹಿಂದಿನ ಸರ್ಕಾರದ ಕಾಲದ ಆರ್ಥಿಕ ಸ್ಥಿತಿ ಕುರಿತು ಶ್ವೇತಪತ್ರವನ್ನು ವಿಧಾನಮಂಡಲದಲ್ಲಿ ಮಂಡಿಸುತ್ತೇನೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕುಮಾರಸ್ವಾಮಿ ಅವರು ವಿಶ್ವಾಸ ಮತಯಾಚನೆ ಸಂದರ್ಭದಲ್ಲಿ ಮಾತನಾಡುವಾಗ ಮೈತ್ರಿ ಸರ್ಕಾರವನ್ನು ಬೀಳಿಸಿದ್ದು ಬಿಜೆಪಿಯವರು ಎಂದಿರುವುದು ವಿಧಾನಮಂಡಲದ ದಾಖಲೆಯಲ್ಲಿದೆ. ಅದನ್ನು ಬಿಡುಗಡೆ ಮಾಡುತ್ತೇನೆ. ತಮ್ಮ ಹೇಳಿಕೆ ಬದಲಿಸುವ ಮೂಲಕ ಅವರು ವಿಧಾನಮಂಡಲವನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ ಎಂದು ಗುಡುಗಿದರು.

ವಿದ್ಯುತ್ ಕ್ಷಾಮ ನೀಗಿಸಲು ಹೊರಗಿನಿಂದ ವಿದ್ಯುತ್ ಕೊಳ್ಳುತ್ತಿದ್ದೇವೆ. ಎಲ್ಲಾ ಸಕ್ಕರೆ ಕಾರ್ಖಾನೆಗಳು ಪ್ರಾರಂಭವಾಗುತ್ತಿದ್ದು, ಅಲ್ಲಿ ಕೋಜನರೇಷನ್ ನಿಂದ ಉತ್ಪಾದನೆ ಆಗುವ ವಿದ್ಯುತನ್ನು ಕೊಂಡುಕೊಳ್ಳುತ್ತೇವೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಮಾಡುವ ಖಾಸಗಿ ಸಂಸ್ಥೆಗಳು ರಾಜ್ಯಕ್ಕೆ ನೀಡಬೇಕೆಂದು ಆದೇಶ ಹೊರಡಿಸಿದ್ದೇವೆ. ವಿದ್ಯುತ್ ಕೊರತೆ ನೀಗಿಸಲು ಎಲ್ಲಾ ರೀತಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

2019-23ರ ಅವಧಿಯಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲು ಹಿಂದಿನ ಸರ್ಕಾರ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈಗ ಬರ ಬಂದಿರುವುದರಿಂದ ವಿದ್ಯುತ್ ತೊಂದರೆಯಾಗಿರುವುದಕ್ಕೆ ಅವರೇ ಕಾರಣ. 16,000 ಮೆಗಾ ವ್ಯಾಟ್ ಸೌರ ವಿದ್ಯುತ್ ಉತ್ಪಾದನೆಯನ್ನು ನಾವು ಮಾಡಿದ್ದೆವು. ನವೀಕರಿಸಬಹುದಾದ ಇಂಧನ ಮೂಲಗಳ ಸದ್ಬಳಕೆಗೆ ಹಿಂದಿನ ಸರ್ಕಾರ ಒತ್ತು ನೀಡಿದ್ದರೆ ಪರಿಸ್ಥಿತಿ ಬೇರೆಯದೆ ಇರುತ್ತಿತ್ತು ಎಂದು ಹೇಳಿದರು.

Ramesh Babu

Journalist

Recent Posts

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

5 hours ago

Effektives Schreiben einer Facharbeit_ Ein Leitfaden

Das Schreiben einer Facharbeit stellt für viele Schüler und Studenten eine große Herausforderung dar. Der…

6 hours ago

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

10 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

22 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

1 day ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

1 day ago