ಹಿಂದಿನ ಸರ್ಕಾರ ಹಣವಿಲ್ಲದಿದ್ದರೂ ಕೆಲಸ ಮಂಜೂರು ಮಾಡಿ, ಟೆಂಡರ್ ಕರೆದು ಬಿಲ್ಲುಗಳನ್ನು ಬಾಕಿ ಇಟ್ಟು ಹೋಗಿದೆ. 30,000 ಕೋಟಿ ರೂ.ಗಳಷ್ಟು ಬಾಕಿ ಬಿಲ್ಲುಗಳಿವೆ. ಇದಕ್ಕೆ ಯಾರು ಹೊಣೆ? ನಮ್ಮ ಕಾಲದ ಹಾಗೂ ಹಿಂದಿನ ಸರ್ಕಾರದ ಕಾಲದ ಆರ್ಥಿಕ ಸ್ಥಿತಿ ಕುರಿತು ಶ್ವೇತಪತ್ರವನ್ನು ವಿಧಾನಮಂಡಲದಲ್ಲಿ ಮಂಡಿಸುತ್ತೇನೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕುಮಾರಸ್ವಾಮಿ ಅವರು ವಿಶ್ವಾಸ ಮತಯಾಚನೆ ಸಂದರ್ಭದಲ್ಲಿ ಮಾತನಾಡುವಾಗ ಮೈತ್ರಿ ಸರ್ಕಾರವನ್ನು ಬೀಳಿಸಿದ್ದು ಬಿಜೆಪಿಯವರು ಎಂದಿರುವುದು ವಿಧಾನಮಂಡಲದ ದಾಖಲೆಯಲ್ಲಿದೆ. ಅದನ್ನು ಬಿಡುಗಡೆ ಮಾಡುತ್ತೇನೆ. ತಮ್ಮ ಹೇಳಿಕೆ ಬದಲಿಸುವ ಮೂಲಕ ಅವರು ವಿಧಾನಮಂಡಲವನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ ಎಂದು ಗುಡುಗಿದರು.
ವಿದ್ಯುತ್ ಕ್ಷಾಮ ನೀಗಿಸಲು ಹೊರಗಿನಿಂದ ವಿದ್ಯುತ್ ಕೊಳ್ಳುತ್ತಿದ್ದೇವೆ. ಎಲ್ಲಾ ಸಕ್ಕರೆ ಕಾರ್ಖಾನೆಗಳು ಪ್ರಾರಂಭವಾಗುತ್ತಿದ್ದು, ಅಲ್ಲಿ ಕೋಜನರೇಷನ್ ನಿಂದ ಉತ್ಪಾದನೆ ಆಗುವ ವಿದ್ಯುತನ್ನು ಕೊಂಡುಕೊಳ್ಳುತ್ತೇವೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಮಾಡುವ ಖಾಸಗಿ ಸಂಸ್ಥೆಗಳು ರಾಜ್ಯಕ್ಕೆ ನೀಡಬೇಕೆಂದು ಆದೇಶ ಹೊರಡಿಸಿದ್ದೇವೆ. ವಿದ್ಯುತ್ ಕೊರತೆ ನೀಗಿಸಲು ಎಲ್ಲಾ ರೀತಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
2019-23ರ ಅವಧಿಯಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲು ಹಿಂದಿನ ಸರ್ಕಾರ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈಗ ಬರ ಬಂದಿರುವುದರಿಂದ ವಿದ್ಯುತ್ ತೊಂದರೆಯಾಗಿರುವುದಕ್ಕೆ ಅವರೇ ಕಾರಣ. 16,000 ಮೆಗಾ ವ್ಯಾಟ್ ಸೌರ ವಿದ್ಯುತ್ ಉತ್ಪಾದನೆಯನ್ನು ನಾವು ಮಾಡಿದ್ದೆವು. ನವೀಕರಿಸಬಹುದಾದ ಇಂಧನ ಮೂಲಗಳ ಸದ್ಬಳಕೆಗೆ ಹಿಂದಿನ ಸರ್ಕಾರ ಒತ್ತು ನೀಡಿದ್ದರೆ ಪರಿಸ್ಥಿತಿ ಬೇರೆಯದೆ ಇರುತ್ತಿತ್ತು ಎಂದು ಹೇಳಿದರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…