Categories: ಮೈಸೂರು

ಹಿಂದಿನ ಸರ್ಕಾರ ಹಣವಿಲ್ಲದಿದ್ದರೂ ಕೆಲಸ ಮಂಜೂರು: ಟೆಂಡರ್ ಕರೆದು 30,000 ಕೋಟಿ ರೂ.ಗಳಷ್ಟು ಬಾಕಿ ಬಿಲ್ಲುಗಳಿವೆ-ಇದಕ್ಕೆ ಯಾರು ಹೊಣೆ?- ಸಿಎಂ‌ ಸಿದ್ದರಾಮಯ್ಯ ಪ್ರಶ್ನೆ

ಹಿಂದಿನ ಸರ್ಕಾರ ಹಣವಿಲ್ಲದಿದ್ದರೂ ಕೆಲಸ ಮಂಜೂರು ಮಾಡಿ, ಟೆಂಡರ್ ಕರೆದು ಬಿಲ್ಲುಗಳನ್ನು ಬಾಕಿ ಇಟ್ಟು ಹೋಗಿದೆ. 30,000 ಕೋಟಿ ರೂ.ಗಳಷ್ಟು ಬಾಕಿ ಬಿಲ್ಲುಗಳಿವೆ. ಇದಕ್ಕೆ ಯಾರು ಹೊಣೆ? ನಮ್ಮ ಕಾಲದ ಹಾಗೂ ಹಿಂದಿನ ಸರ್ಕಾರದ ಕಾಲದ ಆರ್ಥಿಕ ಸ್ಥಿತಿ ಕುರಿತು ಶ್ವೇತಪತ್ರವನ್ನು ವಿಧಾನಮಂಡಲದಲ್ಲಿ ಮಂಡಿಸುತ್ತೇನೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕುಮಾರಸ್ವಾಮಿ ಅವರು ವಿಶ್ವಾಸ ಮತಯಾಚನೆ ಸಂದರ್ಭದಲ್ಲಿ ಮಾತನಾಡುವಾಗ ಮೈತ್ರಿ ಸರ್ಕಾರವನ್ನು ಬೀಳಿಸಿದ್ದು ಬಿಜೆಪಿಯವರು ಎಂದಿರುವುದು ವಿಧಾನಮಂಡಲದ ದಾಖಲೆಯಲ್ಲಿದೆ. ಅದನ್ನು ಬಿಡುಗಡೆ ಮಾಡುತ್ತೇನೆ. ತಮ್ಮ ಹೇಳಿಕೆ ಬದಲಿಸುವ ಮೂಲಕ ಅವರು ವಿಧಾನಮಂಡಲವನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ ಎಂದು ಗುಡುಗಿದರು.

ವಿದ್ಯುತ್ ಕ್ಷಾಮ ನೀಗಿಸಲು ಹೊರಗಿನಿಂದ ವಿದ್ಯುತ್ ಕೊಳ್ಳುತ್ತಿದ್ದೇವೆ. ಎಲ್ಲಾ ಸಕ್ಕರೆ ಕಾರ್ಖಾನೆಗಳು ಪ್ರಾರಂಭವಾಗುತ್ತಿದ್ದು, ಅಲ್ಲಿ ಕೋಜನರೇಷನ್ ನಿಂದ ಉತ್ಪಾದನೆ ಆಗುವ ವಿದ್ಯುತನ್ನು ಕೊಂಡುಕೊಳ್ಳುತ್ತೇವೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಮಾಡುವ ಖಾಸಗಿ ಸಂಸ್ಥೆಗಳು ರಾಜ್ಯಕ್ಕೆ ನೀಡಬೇಕೆಂದು ಆದೇಶ ಹೊರಡಿಸಿದ್ದೇವೆ. ವಿದ್ಯುತ್ ಕೊರತೆ ನೀಗಿಸಲು ಎಲ್ಲಾ ರೀತಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

2019-23ರ ಅವಧಿಯಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲು ಹಿಂದಿನ ಸರ್ಕಾರ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈಗ ಬರ ಬಂದಿರುವುದರಿಂದ ವಿದ್ಯುತ್ ತೊಂದರೆಯಾಗಿರುವುದಕ್ಕೆ ಅವರೇ ಕಾರಣ. 16,000 ಮೆಗಾ ವ್ಯಾಟ್ ಸೌರ ವಿದ್ಯುತ್ ಉತ್ಪಾದನೆಯನ್ನು ನಾವು ಮಾಡಿದ್ದೆವು. ನವೀಕರಿಸಬಹುದಾದ ಇಂಧನ ಮೂಲಗಳ ಸದ್ಬಳಕೆಗೆ ಹಿಂದಿನ ಸರ್ಕಾರ ಒತ್ತು ನೀಡಿದ್ದರೆ ಪರಿಸ್ಥಿತಿ ಬೇರೆಯದೆ ಇರುತ್ತಿತ್ತು ಎಂದು ಹೇಳಿದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

4 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

7 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

15 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

16 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago