ಹಿಂದಿನ ಸರ್ಕಾರ ಹಣವಿಲ್ಲದಿದ್ದರೂ ಕೆಲಸ ಮಂಜೂರು ಮಾಡಿ, ಟೆಂಡರ್ ಕರೆದು ಬಿಲ್ಲುಗಳನ್ನು ಬಾಕಿ ಇಟ್ಟು ಹೋಗಿದೆ. 30,000 ಕೋಟಿ ರೂ.ಗಳಷ್ಟು ಬಾಕಿ ಬಿಲ್ಲುಗಳಿವೆ. ಇದಕ್ಕೆ ಯಾರು ಹೊಣೆ? ನಮ್ಮ ಕಾಲದ ಹಾಗೂ ಹಿಂದಿನ ಸರ್ಕಾರದ ಕಾಲದ ಆರ್ಥಿಕ ಸ್ಥಿತಿ ಕುರಿತು ಶ್ವೇತಪತ್ರವನ್ನು ವಿಧಾನಮಂಡಲದಲ್ಲಿ ಮಂಡಿಸುತ್ತೇನೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕುಮಾರಸ್ವಾಮಿ ಅವರು ವಿಶ್ವಾಸ ಮತಯಾಚನೆ ಸಂದರ್ಭದಲ್ಲಿ ಮಾತನಾಡುವಾಗ ಮೈತ್ರಿ ಸರ್ಕಾರವನ್ನು ಬೀಳಿಸಿದ್ದು ಬಿಜೆಪಿಯವರು ಎಂದಿರುವುದು ವಿಧಾನಮಂಡಲದ ದಾಖಲೆಯಲ್ಲಿದೆ. ಅದನ್ನು ಬಿಡುಗಡೆ ಮಾಡುತ್ತೇನೆ. ತಮ್ಮ ಹೇಳಿಕೆ ಬದಲಿಸುವ ಮೂಲಕ ಅವರು ವಿಧಾನಮಂಡಲವನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ ಎಂದು ಗುಡುಗಿದರು.
ವಿದ್ಯುತ್ ಕ್ಷಾಮ ನೀಗಿಸಲು ಹೊರಗಿನಿಂದ ವಿದ್ಯುತ್ ಕೊಳ್ಳುತ್ತಿದ್ದೇವೆ. ಎಲ್ಲಾ ಸಕ್ಕರೆ ಕಾರ್ಖಾನೆಗಳು ಪ್ರಾರಂಭವಾಗುತ್ತಿದ್ದು, ಅಲ್ಲಿ ಕೋಜನರೇಷನ್ ನಿಂದ ಉತ್ಪಾದನೆ ಆಗುವ ವಿದ್ಯುತನ್ನು ಕೊಂಡುಕೊಳ್ಳುತ್ತೇವೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಮಾಡುವ ಖಾಸಗಿ ಸಂಸ್ಥೆಗಳು ರಾಜ್ಯಕ್ಕೆ ನೀಡಬೇಕೆಂದು ಆದೇಶ ಹೊರಡಿಸಿದ್ದೇವೆ. ವಿದ್ಯುತ್ ಕೊರತೆ ನೀಗಿಸಲು ಎಲ್ಲಾ ರೀತಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
2019-23ರ ಅವಧಿಯಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲು ಹಿಂದಿನ ಸರ್ಕಾರ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈಗ ಬರ ಬಂದಿರುವುದರಿಂದ ವಿದ್ಯುತ್ ತೊಂದರೆಯಾಗಿರುವುದಕ್ಕೆ ಅವರೇ ಕಾರಣ. 16,000 ಮೆಗಾ ವ್ಯಾಟ್ ಸೌರ ವಿದ್ಯುತ್ ಉತ್ಪಾದನೆಯನ್ನು ನಾವು ಮಾಡಿದ್ದೆವು. ನವೀಕರಿಸಬಹುದಾದ ಇಂಧನ ಮೂಲಗಳ ಸದ್ಬಳಕೆಗೆ ಹಿಂದಿನ ಸರ್ಕಾರ ಒತ್ತು ನೀಡಿದ್ದರೆ ಪರಿಸ್ಥಿತಿ ಬೇರೆಯದೆ ಇರುತ್ತಿತ್ತು ಎಂದು ಹೇಳಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…