ಹಿಂದುಳಿದವರ ಅಭಿವೃದ್ಧಿಗೆ ದೇವರಾಜ ಅರಸು ಅವರ ಕೊಡುಗೆ ಅಪಾರ-ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಶೋಷಿತರ, ಬಡವರ, ದೀನ ದಲಿತರ ಅಭಿವೃದ್ಧಿಗೆ ಶ್ರಮಿಸಿದ ಧೀಮಂತ ನಾಯಕರು, ರಾಜ್ಯದ ಅಭಿವೃದ್ಧಿಗೆ ಅವರ ಕೊಡುಗೆ ಅಪಾರ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿ ಟೌನ್ ನಲ್ಲಿರುವ ಡಿ‌.ದೇವರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ರವರ 109ನೇ ಜನ್ಮದಿನಾಚರಣೆ ಅಂಗವಾಗಿ ಡಿ.ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇವರಾಜ ಅರಸು ಅವರು ಭೂ ಸುಧಾರಣೆ ಮತ್ತು ಉಳುವವನೇ ಭೂ ಒಡೆಯ ಎಂಬ ಕಾನೂನು ಜಾರಿಗೆ ತಂದು, ಶ್ರೀಮಂತರು ಹಾಗೂ ಬಡವರ ನಡುವಿನ ಅಂತರವನ್ನು ಕಡಿಮೆ ಮಾಡಿದರು. ಬಡವರಿಗೆ ಲಕ್ಷಾಂತರ ಎಕರೆ ಉಳುಮೆ ಭೂಮಿ ನೀಡುವ ಮೂಲಕ ಬಡವರ ಧ್ವನಿಯಾಗಿ ಹಿಂದುಳಿದವರ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳು, ಕಾರ್ಯಕ್ರಮಗಳು ಜಾರಿಗೆ ತಂದು ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸಿದರು ಎಂದರು.

ಜಿಲ್ಲೆಯಲ್ಲಿ ಹಿಂದುಳಿದ ವರ್ಗ ಹಾಗೂ ಪರಿಶಿಷ್ಟ ವರ್ಗಗಳ ವಸತಿ ಶಾಲೆಗಳಲ್ಲಿ ಮತ್ತು ಪಂಚಾಯಿತಿ ಮಟ್ಟದಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ಮಾಜಿ ಮುಖ್ಯಮಂತ್ರಿ ಅರಸು ಅವರ ಹೆಸರಿನಲ್ಲಿರುವ ಶಿಕ್ಷಣ ಸಂಸ್ಥೆಗಳು, ನಿರ್ಮಾಣ ಹಂತದ ಕಟ್ಟಡಗಳ ಕೆಲಸವನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು. ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳಿಗೆ ಸಮುದಾಯ ಭವನಗಳ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು‌.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಅವರು ಮಾತನಾಡಿ ದೇವರಾಜ ಅರಸು ಅವರು ಕರ್ನಾಟಕ ರಾಜ್ಯ ಎಂದು ಮರು ನಾಮಕರಣ ವಾದನಂತರ ಮೊದಲ ಮುಖ್ಯಮಂತ್ರಿ ಆಗಿ, ರಾಜ್ಯದಲ್ಲಿ ಕ್ರಾಂತಿಕಾರಕ ಸಾಮಾಜಿಕ ಸುಧಾರಣೆ ತಂದವರು. ಹಿಂದುಳಿದ ವರ್ಗಗಳ ಜನರ ಕಲ್ಯಾಣಕ್ಕಾಗಿ ಶ್ರಮಿಸಿದ ಮಹನೀಯರು. ಜೀತ ಪದ್ಧತಿ, ಜಮೀನ್ದಾರಿ ಪದ್ಧತಿಯನ್ನು ಹೋಗಲಾಡಿಸಲು ಒತ್ತು ನೀಡಿದರು. ವಿಶೇಷ ಮೀಸಲಾತಿ, ವಿಶ್ವವಿದ್ಯಾನಿಲಯಗಳ ನಿರ್ಮಾಣ ಸೇರಿದಂತೆ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿ, ಹಲವು ಯೋಜನೆಗಳನ್ನು ಜಾರಿಗೆ ತಂದರು. ಇಂದಿನ ಪೀಳಿಗೆಯು ಅರಸು ಅವರ ಆದರ್ಶ ಜೀವನವನ್ನು ರೂಡಿಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಮುನ್ನಡೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡಿ, ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಗಳಿಸಿದ ಹಾಗೂ ವಿವಿಧ ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನಾ ಅನುಷ್ಠಾನದ ಜಿಲ್ಲಾ ಅಧ್ಯಕ್ಷ ರಾಜಣ್ಣ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ.ಎನ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ನಿರುಪಮಾ, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು,ಸ್ಥಳೀಯ ಜನಪ್ರತಿನಿಧಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

13 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

22 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

23 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago