ಹಿಂದುಳಿದವರ, ದಲಿತರ ಹಾಗೂ ಮಹಿಳೆಯರ ಮೀಸಲಾತಿಯನ್ನು ವಿರೋಧಿಸಿದ್ದು ಬಿಜೆಪಿ, ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಪಕ್ಷ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರ, ದಲಿತರ ಹಾಗೂ ಮಹಿಳೆಯರ ಮೀಸಲಾತಿಯನ್ನು ವಿರೋಧಿಸಿದ್ದು ಬಿಜೆಪಿ, ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಪಕ್ಷ. ಈಗಿರುವ ಶೇ.50 ರಷ್ಟು ಮಹಿಳಾ ಮೀಸಲಾತಿ ರಾಜೀವ್ ಗಾಂಧಿ ಮತ್ತು ಕಾಂಗ್ರೆಸ್ಸಿನ ಕೊಡುಗೆ. ಇದನ್ನು ವಿರೋಧ ಮಾಡಿದ್ದು ಬಿಜೆಪಿಯ ಉಪಾಧ್ಯಕ್ಷರಾಗಿದ್ದ ರಾಜ್ಯ ಸಭಾ ಸದಸ್ಯ ರಾಮಾಜೋಯಿಸ್. ಇದನ್ನು ಅರ್ಥ ಮಾಡಿಕೊಳ್ಳಬೇಕು. ಸುಮ್ಮನೆ ಬಿಜೆಪಿಗೆ ಚಪ್ಪಾಳೆ ತಟ್ಟಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಇ-ಸ್ವತ್ತು 2.0 ತಂತ್ರಾಂಶದ ಚಾಲನೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಗ್ರಾಮದಿಂದ ರಾಜಧಾನಿಗೆ ಹೀಗೆ ಅಧಿಕಾರ ವಿಕೇಂದ್ರೀಕರಣ ಆಗಬೇಕು ಎನ್ನುವುದು ಗಾಂಧಿ, ನೆಹರೂ, ಲೋಹಿಯಾ ಅವರ ಕನಸಾಗಿತ್ತು. ನಮ್ಮದು ಹಳ್ಳಿಗಳ ದೇಶ. ಗ್ರಾಮ ಭಾರತ ಅಭಿವೃದ್ಧಿ ಆಗದೆ ದೇಶ ಅಭಿವೃದ್ಧಿ ಸಾಧ್ಯವಿಲ್ಲ ಎಂದರು.

ಹಳ್ಳಿಗಳ ಅಭಿವೃದ್ಧಿಯಲ್ಲಿ ಗ್ರಾಮಸ್ಥರ ಪಾಲ್ಗೊಳ್ಳುವಿಕೆ ಬಹಳ ಮುಖ್ಯ. ರಾಜೀವ್ ಗಾಂಧಿಯವರು ಪ್ರಧಾನಿ ಆದಾಗ ಸಂವಿಧಾನ ಪರಿಚ್ಛೇದ 73, 74 ಕ್ಕೆ ತಿದ್ದುಪಡಿ ತಂದು ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ತಂದರು. ಈ ತಿದ್ದುಪಡಿ ಬರುವವರೆಗೂ ಮಹಿಳೆಯರಿಗೆ, ಹಿಂದುಳಿದವರಿಗೆ ಮೀಸಲಾತಿಯೇ ಇರಲಿಲ್ಲ ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ಬಿಜೆಪಿಯ ರಾಮಾಜೋಯಿಸ್ ಮೀಸಲಾತಿ ವಿರೋಧಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಹಾಕಿದ್ದರು. ಆದರೆ, ಸುಪ್ರೀಂಕೋರ್ಟ್ ಮೀಸಲಾತಿ ಪರವಾಗಿ ನಿಂತು ಬಿಜೆಪಿಯ ರಾಮಾ ಜೋಯಿಸ್ ಅರ್ಜಿಯನ್ನು ತಿರಸ್ಕರಿಸಿತು ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆ ನಾಮಕಾವಾಸ್ಥೆಗೆ ಪ್ರಧಾನಿ ಅವರ ಹೆಸರಿನಲ್ಲಿದೆ. ಇದರಲ್ಲಿ ರಾಜ್ಯದ ಪಾಲೇ ಹೆಚ್ಚು. ಕೇಂದ್ರದಿಂದ ಇನ್ನೂ 13 ಸಾವಿರ ಕೋಟಿ ಹಣ ರಾಜ್ಯಕ್ಕೆ ವಾಪಾಸ್ ಬರಬೇಕಿದೆ. ಕೇಂದ್ರ ಮಾಡುವ ಅನ್ಯಾಯವನ್ನು ರೈತರು ಮತ್ತು ರಾಜ್ಯದ ಜನತೆ ವಿರೋಧಿಸಬೇಕು. ಕಬ್ಬಿನ ದರ ನಿಗಧಿಯಲ್ಲೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರಿಂದ ರೈತರಿಗೆ ಅನ್ಯಾಯವಾಯಿತು. ಆದರೂ ರಾಜ್ಯ ಸರ್ಕಾರ ಸರಿದೂಗಿಸಿ ಕಬ್ಬು ಬೆಳೆಗಾರರ ಪ್ರತಿಭಟನೆಗೆ ಸ್ಪಂದಿಸಿ ಪರಿಹಾರ ನೀಡಿತು ಎಂದರು.

ಇ-ಸ್ವತ್ತು ತಂತ್ರಾಂಶದಿಂದ ಸದ್ಯ 1,778 ಕೋಟಿ ತೆರಿಗೆ ಆದಾಯ ಹೆಚ್ಚಾಗುವ ಅಂದಾಜಿದೆ. ತಂತ್ರಾಂಶ ಪರಿಣಾಮಕಾರಿ ಜಾರಿ ಆದರೆ, ಆದಾಯದ ಪ್ರಮಾಣ 2,000 ಕೋಟಿ ಮೀರುವ ನಿರೀಕ್ಷೆ ಇದೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ‌ ಭಾಗದಲ್ಲಿ 8860ಕಿಮೀ ಕಲ್ಯಾಣ ಪಥಕ್ಕೆ ಚಾಲನೆ ನೀಡಿದ್ದು ನಮ್ಮ ಸರ್ಕಾರ. ಈ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದನ್ನು ಬಿಟ್ಟು, ಬಿಜೆಪಿಯವರು ಜನಪರ ಕೆಲಸ ಮಾಡುತ್ತಿರುವ ನಮ್ಮ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ತರಲು ಹೊರಟಿದ್ದಾರೆ ಎಂದರು.

ನಮ್ಮ ಭಾಗ್ಯಗಳು, ನಮ್ಮ ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿನ ಭದ್ರತೆಗಾಗಿ ಜಾರಿ ಮಾಡಿದ್ದು. ಬಿಜೆಪಿಯ ಬುರುಡೆ ಗ್ಯಾಂಗ್ ಇಂತಹ ಯಾವುದೇ ಕಾರ್ಯಕ್ರಮ ನೀಡದೆ ಜನರ ಎದುರು ಬುರುಡೆ ಬಿಡುತ್ತಾ ತಿರುಗುತ್ತಿದ್ದಾರೆ‌ ಎಂದು ಹೇಳಿದರು.

ನಾನೂ ತಾಲ್ಲೂಕ ಬೋರ್ಡ್ ಸದಸ್ಯನಾಗಿ ಈಗ ಮುಖ್ಯಮಂತ್ರಿವರೆಗೂ ಬೆಳೆದಿದ್ದೇನೆ. ಹೀಗಾಗಿ ಗ್ರಾಮ ಪಂಚಾಯ್ತಿಗಳು ಹಾಗೂ ಸ್ಥಳೀಯ ಸಂಸ್ಥೆಗಳು ಹೆಚ್ಚೆಚ್ಚು ಶಕ್ತಿಯುತವಾಗಬೇಕು ಎನ್ನುವುದು ನನ್ನ ಗುರಿಯೂ ಆಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರ ನೇತೃತ್ವದಲ್ಲಿ ಗ್ರಾಮ ಕರ್ನಾಟಕ ಅಭಿವೃದ್ಧಿ ಕಾಣುತ್ತದೆ ಎನ್ನುವ ಭರವಸೆ ನನಗಿದೆ ಎಂದರು.

Ramesh Babu

Journalist

Recent Posts

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

11 hours ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

11 hours ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

12 hours ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

15 hours ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

21 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

22 hours ago