ಹಿಂದುಳಿದವರ, ದಲಿತರ ಹಾಗೂ ಮಹಿಳೆಯರ ಮೀಸಲಾತಿಯನ್ನು ವಿರೋಧಿಸಿದ್ದು ಬಿಜೆಪಿ, ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಪಕ್ಷ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರ, ದಲಿತರ ಹಾಗೂ ಮಹಿಳೆಯರ ಮೀಸಲಾತಿಯನ್ನು ವಿರೋಧಿಸಿದ್ದು ಬಿಜೆಪಿ, ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಪಕ್ಷ. ಈಗಿರುವ ಶೇ.50 ರಷ್ಟು ಮಹಿಳಾ ಮೀಸಲಾತಿ ರಾಜೀವ್ ಗಾಂಧಿ ಮತ್ತು ಕಾಂಗ್ರೆಸ್ಸಿನ ಕೊಡುಗೆ. ಇದನ್ನು ವಿರೋಧ ಮಾಡಿದ್ದು ಬಿಜೆಪಿಯ ಉಪಾಧ್ಯಕ್ಷರಾಗಿದ್ದ ರಾಜ್ಯ ಸಭಾ ಸದಸ್ಯ ರಾಮಾಜೋಯಿಸ್. ಇದನ್ನು ಅರ್ಥ ಮಾಡಿಕೊಳ್ಳಬೇಕು. ಸುಮ್ಮನೆ ಬಿಜೆಪಿಗೆ ಚಪ್ಪಾಳೆ ತಟ್ಟಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಇ-ಸ್ವತ್ತು 2.0 ತಂತ್ರಾಂಶದ ಚಾಲನೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಗ್ರಾಮದಿಂದ ರಾಜಧಾನಿಗೆ ಹೀಗೆ ಅಧಿಕಾರ ವಿಕೇಂದ್ರೀಕರಣ ಆಗಬೇಕು ಎನ್ನುವುದು ಗಾಂಧಿ, ನೆಹರೂ, ಲೋಹಿಯಾ ಅವರ ಕನಸಾಗಿತ್ತು. ನಮ್ಮದು ಹಳ್ಳಿಗಳ ದೇಶ. ಗ್ರಾಮ ಭಾರತ ಅಭಿವೃದ್ಧಿ ಆಗದೆ ದೇಶ ಅಭಿವೃದ್ಧಿ ಸಾಧ್ಯವಿಲ್ಲ ಎಂದರು.

ಹಳ್ಳಿಗಳ ಅಭಿವೃದ್ಧಿಯಲ್ಲಿ ಗ್ರಾಮಸ್ಥರ ಪಾಲ್ಗೊಳ್ಳುವಿಕೆ ಬಹಳ ಮುಖ್ಯ. ರಾಜೀವ್ ಗಾಂಧಿಯವರು ಪ್ರಧಾನಿ ಆದಾಗ ಸಂವಿಧಾನ ಪರಿಚ್ಛೇದ 73, 74 ಕ್ಕೆ ತಿದ್ದುಪಡಿ ತಂದು ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ತಂದರು. ಈ ತಿದ್ದುಪಡಿ ಬರುವವರೆಗೂ ಮಹಿಳೆಯರಿಗೆ, ಹಿಂದುಳಿದವರಿಗೆ ಮೀಸಲಾತಿಯೇ ಇರಲಿಲ್ಲ ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ಬಿಜೆಪಿಯ ರಾಮಾಜೋಯಿಸ್ ಮೀಸಲಾತಿ ವಿರೋಧಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಹಾಕಿದ್ದರು. ಆದರೆ, ಸುಪ್ರೀಂಕೋರ್ಟ್ ಮೀಸಲಾತಿ ಪರವಾಗಿ ನಿಂತು ಬಿಜೆಪಿಯ ರಾಮಾ ಜೋಯಿಸ್ ಅರ್ಜಿಯನ್ನು ತಿರಸ್ಕರಿಸಿತು ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆ ನಾಮಕಾವಾಸ್ಥೆಗೆ ಪ್ರಧಾನಿ ಅವರ ಹೆಸರಿನಲ್ಲಿದೆ. ಇದರಲ್ಲಿ ರಾಜ್ಯದ ಪಾಲೇ ಹೆಚ್ಚು. ಕೇಂದ್ರದಿಂದ ಇನ್ನೂ 13 ಸಾವಿರ ಕೋಟಿ ಹಣ ರಾಜ್ಯಕ್ಕೆ ವಾಪಾಸ್ ಬರಬೇಕಿದೆ. ಕೇಂದ್ರ ಮಾಡುವ ಅನ್ಯಾಯವನ್ನು ರೈತರು ಮತ್ತು ರಾಜ್ಯದ ಜನತೆ ವಿರೋಧಿಸಬೇಕು. ಕಬ್ಬಿನ ದರ ನಿಗಧಿಯಲ್ಲೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರಿಂದ ರೈತರಿಗೆ ಅನ್ಯಾಯವಾಯಿತು. ಆದರೂ ರಾಜ್ಯ ಸರ್ಕಾರ ಸರಿದೂಗಿಸಿ ಕಬ್ಬು ಬೆಳೆಗಾರರ ಪ್ರತಿಭಟನೆಗೆ ಸ್ಪಂದಿಸಿ ಪರಿಹಾರ ನೀಡಿತು ಎಂದರು.

ಇ-ಸ್ವತ್ತು ತಂತ್ರಾಂಶದಿಂದ ಸದ್ಯ 1,778 ಕೋಟಿ ತೆರಿಗೆ ಆದಾಯ ಹೆಚ್ಚಾಗುವ ಅಂದಾಜಿದೆ. ತಂತ್ರಾಂಶ ಪರಿಣಾಮಕಾರಿ ಜಾರಿ ಆದರೆ, ಆದಾಯದ ಪ್ರಮಾಣ 2,000 ಕೋಟಿ ಮೀರುವ ನಿರೀಕ್ಷೆ ಇದೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ‌ ಭಾಗದಲ್ಲಿ 8860ಕಿಮೀ ಕಲ್ಯಾಣ ಪಥಕ್ಕೆ ಚಾಲನೆ ನೀಡಿದ್ದು ನಮ್ಮ ಸರ್ಕಾರ. ಈ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದನ್ನು ಬಿಟ್ಟು, ಬಿಜೆಪಿಯವರು ಜನಪರ ಕೆಲಸ ಮಾಡುತ್ತಿರುವ ನಮ್ಮ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ತರಲು ಹೊರಟಿದ್ದಾರೆ ಎಂದರು.

ನಮ್ಮ ಭಾಗ್ಯಗಳು, ನಮ್ಮ ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿನ ಭದ್ರತೆಗಾಗಿ ಜಾರಿ ಮಾಡಿದ್ದು. ಬಿಜೆಪಿಯ ಬುರುಡೆ ಗ್ಯಾಂಗ್ ಇಂತಹ ಯಾವುದೇ ಕಾರ್ಯಕ್ರಮ ನೀಡದೆ ಜನರ ಎದುರು ಬುರುಡೆ ಬಿಡುತ್ತಾ ತಿರುಗುತ್ತಿದ್ದಾರೆ‌ ಎಂದು ಹೇಳಿದರು.

ನಾನೂ ತಾಲ್ಲೂಕ ಬೋರ್ಡ್ ಸದಸ್ಯನಾಗಿ ಈಗ ಮುಖ್ಯಮಂತ್ರಿವರೆಗೂ ಬೆಳೆದಿದ್ದೇನೆ. ಹೀಗಾಗಿ ಗ್ರಾಮ ಪಂಚಾಯ್ತಿಗಳು ಹಾಗೂ ಸ್ಥಳೀಯ ಸಂಸ್ಥೆಗಳು ಹೆಚ್ಚೆಚ್ಚು ಶಕ್ತಿಯುತವಾಗಬೇಕು ಎನ್ನುವುದು ನನ್ನ ಗುರಿಯೂ ಆಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರ ನೇತೃತ್ವದಲ್ಲಿ ಗ್ರಾಮ ಕರ್ನಾಟಕ ಅಭಿವೃದ್ಧಿ ಕಾಣುತ್ತದೆ ಎನ್ನುವ ಭರವಸೆ ನನಗಿದೆ ಎಂದರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 hour ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

2 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

11 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago