Categories: ಕೋಲಾರ

ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸಿದ್ದರಾಮಯ್ಯ ಕೊಡುಗೆ ಅಪಾರ: ಮಠಾಧೀಶರು ಅವರ ಬೆಂಬಲಕ್ಕೆ ನಿಲ್ಲಬೇಕಾಗಿದೆ- ಸಂತೋಷ್ ಗುರೂಜಿ

ಕೋಲಾರ:ಹಿಂದುಳಿದ ವರ್ಗದ ಕೆಲ ಮಠಾಧೀಶ್ವರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬೆಂಬಲ ಸೂಚಿಸಿದ್ದಾರೆ. ನಾವೂ ಅವರ ಬೆಂಬಲಕ್ಕೆ ಇದ್ದೇವೆ. ಹಿಂದುಳಿದ ವರ್ಗದವರು ಮಾತ್ರವಲ್ಲ; ಎಲ್ಲಾ ಲಿಂಗಾಯತ ಮಠದ ಸ್ವಾಮೀಜಿಗಳೂ ಸಿದ್ದರಾಮಯ್ಯ ಜೊತೆ ನಿಲ್ಲಬೇಕಿದೆ’ ಎಂದು ಎಂದು ಬಾರ್ಕೂರು ಸಂಸ್ಥಾನ ಮಠದ ಸಂತೋಷ ಗುರೂಜಿ ತಿಳಿಸಿದರು.

ಸೋಮವಾರ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ಅವರ ನಿವಾಸಕ್ಕೆ ಭೇಟಿ ಪಾದಪೂಜೆ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ವಿಚಾರದಲ್ಲಿ ಜಾತಿ ನೋಡಬಾರದು. ಆ ಸ್ಥಾನಕ್ಕೆ ಜಾತಿ ಇಲ್ಲ. ಮುಖ್ಯಮಂತ್ರಿ ಜಾತಿವಾದಿ ಆಗಿರಬಾರದು. ಇಲ್ಲಿವರೆಗೆ ಬಂದ ಮುಖ್ಯಮಂತ್ರಿಗಳ ಪೈಕಿ ಸಿದ್ದರಾಮಯ್ಯ ನಿಜವಾಗಿಯೂ ಭ್ರಷ್ಟರಲ್ಲ. ಸಿದ್ದರಾಮಯ್ಯ ಸರ್ಕಾರ ಉರುಳಿಸಲು ಬಿಜೆಪಿ ಹಾಗೂ ಜೆಡಿಎಸ್‌ ಮುಡಾ ವಿಚಾರ ಮುಂದಿಟ್ಟುಕೊಂಡಿವೆ. ಪಾರ್ವತಮ್ಮನರ ಜಮೀನಿಗೆ ಬದಲಾಗಿ ಬೇರೆ ನಿವೇಶನ ಕೊಡಲಾಗಿದೆ ಅಷ್ಟೆ. ಹಿಂದಿನ ಮುಖ್ಯಮಂತ್ರಿಗಳು ಎಷ್ಟು ಹಗರಣ ಮಾಡಿದ್ದಾರೆ, ಎಷ್ಟು ದುಡ್ಡು ಮಾಡಿದ್ದಾರೆ ಎಂಬುದೆಲ್ಲಾ ನಮಗೆ ಗೊತ್ತಿದೆ. ಕೆಲ ರಾಜಕಾರಣಿಗಳಿಗೆ ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು? ಇಂಥವರು ಸಭೆ ಮಾಡುತ್ತಾರೆ ಎಂದರೆ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಲು ಕರ್ನಾಟಕದ ಜನ ದಡ್ಡರಲ್ಲ. ಹೀಗಾಗಿ, ಸಿದ್ದರಾಮಯ್ಯ ಅವರಿಗೆ ಬೆಂಬಲ ಅಗತ್ಯವಿದೆ ಅದಕ್ಕೆ ನಾವು ಬದ್ಧ ಎಂದರು.

ಮುಂದಿನ 2025ರ ಜುಲೈ, ಆಗಸ್ಟ್‌ನಲ್ಲಿ ಸಿದ್ದರಾಮಯ್ಯ ಅವರಿಗೆ ಕಂಟಕ ಎದುರಾಗಲಿದೆ. ಅಲ್ಲಿಯವರೆಗೆ ಅವರನ್ನು ಇಳಿಸಲು ಯಾರಿಗೂ ಸಾಧ್ಯವಿಲ್ಲ. ಆದರೆ, ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಆಗುವ ಭಾಗ್ಯವಿದೆ ಎಂಬುದಾಗಿ ನಾನು ಹೇಳಲ್ಲ. ಅವರಿಗೆ ನಾಲ್ಕಾರು ತೊಡಕುಗಳು ಇವೆ. ಮುಖ್ಯಮಂತ್ರಿ ಆಕಾಂಕ್ಷಿಗಳು ಹಲವು ಮಂದಿ ಇದ್ದಾರೆ. 2025ರ ಆಗಸ್ಟ್‌ನಲ್ಲಿ ಪ್ರಧಾನಿ ಮೋದಿ ಅವರಿಗೂ ಕಂಟಕವಿದೆ ಎಂದರು

ಸಮಾಜದಲ್ಲಿ ನೆಮ್ಮದಿಯಿಂದ ಬದುಕಲು ಎಲ್ಲರಲ್ಲೂ ಪ್ರೀತಿ ವಿಶ್ವಾಸ ಗಳಿಸಬೇಕು ಪಶು, ಪತಿಪತ್ನಿ, ಸಂತಾನ, ಆದಾಯದ ಮ‌ೂಲಕ ಜೀವನ ಸಾಗಿಸಬೇಕು ಸಾಧು ಸಂತರ ಜೊತೆಯಲ್ಲಿ ಇದ್ದಾಗ ಲಕ್ಷ್ಮೀ ಬರಲಿದೆ ಎಂದು ಉಪದೇಶ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಲೋಕಸಭಾ ಸದಸ್ಯ ಎಸ್ ಮುನಿಸ್ವಾಮಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ವೇಣುಗೋಪಾಲ್, ಪ್ರಧಾನ ಕಾರ್ಯದರ್ಶಿಗಳಾದ ಓಂಶಕ್ತಿ ಚಲಪತಿ, ಬಿ.ವಿ ಮಹೇಶ್, ರಾಜು ಅಪ್ಪಿ ಮಹಿಳಾ ಜಿಲ್ಲಾಧ್ಯಕ್ಷೆ ಅರುಣಮ್ಮ, ಮುಖಂಡರಾದ ಸಾ.ಮಾ ಬಾಬು, ನಾಮಲ್ ಮಂಜು, ಎಬಿವಿಪಿ‌ ಹರೀಶ್, ಅಪ್ಪಿ ನಾರಾಯಣಸ್ವಾಮಿ, ರವೀಶ್ ಗೌಡ, ಮುಂತಾದವರು ಇದ್ದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

1 hour ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

1 hour ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

3 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

4 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

5 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

12 hours ago