Categories: ಕೋಲಾರ

ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸಿದ್ದರಾಮಯ್ಯ ಕೊಡುಗೆ ಅಪಾರ: ಮಠಾಧೀಶರು ಅವರ ಬೆಂಬಲಕ್ಕೆ ನಿಲ್ಲಬೇಕಾಗಿದೆ- ಸಂತೋಷ್ ಗುರೂಜಿ

ಕೋಲಾರ:ಹಿಂದುಳಿದ ವರ್ಗದ ಕೆಲ ಮಠಾಧೀಶ್ವರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬೆಂಬಲ ಸೂಚಿಸಿದ್ದಾರೆ. ನಾವೂ ಅವರ ಬೆಂಬಲಕ್ಕೆ ಇದ್ದೇವೆ. ಹಿಂದುಳಿದ ವರ್ಗದವರು ಮಾತ್ರವಲ್ಲ; ಎಲ್ಲಾ ಲಿಂಗಾಯತ ಮಠದ ಸ್ವಾಮೀಜಿಗಳೂ ಸಿದ್ದರಾಮಯ್ಯ ಜೊತೆ ನಿಲ್ಲಬೇಕಿದೆ’ ಎಂದು ಎಂದು ಬಾರ್ಕೂರು ಸಂಸ್ಥಾನ ಮಠದ ಸಂತೋಷ ಗುರೂಜಿ ತಿಳಿಸಿದರು.

ಸೋಮವಾರ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ಅವರ ನಿವಾಸಕ್ಕೆ ಭೇಟಿ ಪಾದಪೂಜೆ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ವಿಚಾರದಲ್ಲಿ ಜಾತಿ ನೋಡಬಾರದು. ಆ ಸ್ಥಾನಕ್ಕೆ ಜಾತಿ ಇಲ್ಲ. ಮುಖ್ಯಮಂತ್ರಿ ಜಾತಿವಾದಿ ಆಗಿರಬಾರದು. ಇಲ್ಲಿವರೆಗೆ ಬಂದ ಮುಖ್ಯಮಂತ್ರಿಗಳ ಪೈಕಿ ಸಿದ್ದರಾಮಯ್ಯ ನಿಜವಾಗಿಯೂ ಭ್ರಷ್ಟರಲ್ಲ. ಸಿದ್ದರಾಮಯ್ಯ ಸರ್ಕಾರ ಉರುಳಿಸಲು ಬಿಜೆಪಿ ಹಾಗೂ ಜೆಡಿಎಸ್‌ ಮುಡಾ ವಿಚಾರ ಮುಂದಿಟ್ಟುಕೊಂಡಿವೆ. ಪಾರ್ವತಮ್ಮನರ ಜಮೀನಿಗೆ ಬದಲಾಗಿ ಬೇರೆ ನಿವೇಶನ ಕೊಡಲಾಗಿದೆ ಅಷ್ಟೆ. ಹಿಂದಿನ ಮುಖ್ಯಮಂತ್ರಿಗಳು ಎಷ್ಟು ಹಗರಣ ಮಾಡಿದ್ದಾರೆ, ಎಷ್ಟು ದುಡ್ಡು ಮಾಡಿದ್ದಾರೆ ಎಂಬುದೆಲ್ಲಾ ನಮಗೆ ಗೊತ್ತಿದೆ. ಕೆಲ ರಾಜಕಾರಣಿಗಳಿಗೆ ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು? ಇಂಥವರು ಸಭೆ ಮಾಡುತ್ತಾರೆ ಎಂದರೆ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಲು ಕರ್ನಾಟಕದ ಜನ ದಡ್ಡರಲ್ಲ. ಹೀಗಾಗಿ, ಸಿದ್ದರಾಮಯ್ಯ ಅವರಿಗೆ ಬೆಂಬಲ ಅಗತ್ಯವಿದೆ ಅದಕ್ಕೆ ನಾವು ಬದ್ಧ ಎಂದರು.

ಮುಂದಿನ 2025ರ ಜುಲೈ, ಆಗಸ್ಟ್‌ನಲ್ಲಿ ಸಿದ್ದರಾಮಯ್ಯ ಅವರಿಗೆ ಕಂಟಕ ಎದುರಾಗಲಿದೆ. ಅಲ್ಲಿಯವರೆಗೆ ಅವರನ್ನು ಇಳಿಸಲು ಯಾರಿಗೂ ಸಾಧ್ಯವಿಲ್ಲ. ಆದರೆ, ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಆಗುವ ಭಾಗ್ಯವಿದೆ ಎಂಬುದಾಗಿ ನಾನು ಹೇಳಲ್ಲ. ಅವರಿಗೆ ನಾಲ್ಕಾರು ತೊಡಕುಗಳು ಇವೆ. ಮುಖ್ಯಮಂತ್ರಿ ಆಕಾಂಕ್ಷಿಗಳು ಹಲವು ಮಂದಿ ಇದ್ದಾರೆ. 2025ರ ಆಗಸ್ಟ್‌ನಲ್ಲಿ ಪ್ರಧಾನಿ ಮೋದಿ ಅವರಿಗೂ ಕಂಟಕವಿದೆ ಎಂದರು

ಸಮಾಜದಲ್ಲಿ ನೆಮ್ಮದಿಯಿಂದ ಬದುಕಲು ಎಲ್ಲರಲ್ಲೂ ಪ್ರೀತಿ ವಿಶ್ವಾಸ ಗಳಿಸಬೇಕು ಪಶು, ಪತಿಪತ್ನಿ, ಸಂತಾನ, ಆದಾಯದ ಮ‌ೂಲಕ ಜೀವನ ಸಾಗಿಸಬೇಕು ಸಾಧು ಸಂತರ ಜೊತೆಯಲ್ಲಿ ಇದ್ದಾಗ ಲಕ್ಷ್ಮೀ ಬರಲಿದೆ ಎಂದು ಉಪದೇಶ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಲೋಕಸಭಾ ಸದಸ್ಯ ಎಸ್ ಮುನಿಸ್ವಾಮಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ವೇಣುಗೋಪಾಲ್, ಪ್ರಧಾನ ಕಾರ್ಯದರ್ಶಿಗಳಾದ ಓಂಶಕ್ತಿ ಚಲಪತಿ, ಬಿ.ವಿ ಮಹೇಶ್, ರಾಜು ಅಪ್ಪಿ ಮಹಿಳಾ ಜಿಲ್ಲಾಧ್ಯಕ್ಷೆ ಅರುಣಮ್ಮ, ಮುಖಂಡರಾದ ಸಾ.ಮಾ ಬಾಬು, ನಾಮಲ್ ಮಂಜು, ಎಬಿವಿಪಿ‌ ಹರೀಶ್, ಅಪ್ಪಿ ನಾರಾಯಣಸ್ವಾಮಿ, ರವೀಶ್ ಗೌಡ, ಮುಂತಾದವರು ಇದ್ದರು.

Ramesh Babu

Journalist

Recent Posts

ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ- 10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…

48 minutes ago

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಆರೋಪ ಕೇಸ್: ಅತ್ಯಾಚಾರ ಆರೋಪ ಸಾಬೀತು: ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ಕೋರ್ಟ್ ತೀರ್ಪು: ಶಿಕ್ಷೆಯ ಪ್ರಮಾಣ ನಾಳೆ ಪ್ರಕಟ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿದ್ದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪ ಸಾಬೀತಾಗಿದೆ. ಪ್ರಜ್ವಲ್ ರೇವಣ್ಣ ಅಪರಾಧಿ…

4 hours ago

ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು: ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಚಿನ್ನಾಭರಣಗಳ ಕಳವು

ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು, ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಬ್ಯಾಗ್ ನಲ್ಲಿದ್ದ ಚಿನ್ನಾಭರಣಗಳನ್ನ ಕ್ಷಣ…

8 hours ago

ಸಿಂಗ್ರಹಳ್ಳಿ ಗ್ರಾಮದ ಗೋಮಾಳ ಜಮೀನು ಉಳ್ಳವರಿಂದಲೇ ಒತ್ತುವರಿ- ಮುನಿಆಂಜಿನಪ್ಪ ಆರೋಪ

ದೇವನಹಳ್ಳಿ: ತಾಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸಿಂಗರಹಳ್ಳಿ ಗ್ರಾಮದ ಸರ್ವೆ ನಂಬರ್ -6 ರಲ್ಲಿ ಸುಮಾರು 60…

10 hours ago

ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರವಾಗಿ ನಟ ಪ್ರಥಮ್ ವ್ಯಂಗ್ಯ ಆರೋಪ: ದಲಿತ ಸಂಘಟನೆ ಆಕ್ರೋಶ: ಠಾಣೆ ಮುಂದೆ ಪ್ರಥಮ್ ಗೆ ಮಸಿ ಬಳಿಯುವ ಯತ್ನ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರವಾಗಿ ವ್ಯಂಗ್ಯವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಪ್ರಥಮ್ ಗೆ ಅಂಬೇಡ್ಕರ್ ಸೇನೆ ಹೋರಾಟಗಾರರು ದೊಡ್ಡಬಳ್ಳಾಪುರ…

20 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ: ಸ್ಥಳ ಮಹಜರಿನಲ್ಲಿ ಘಟನೆ ಬಗ್ಗೆ ಪೊಲೀಸರಿಗೆ ಇಂಚಿಂಚು ಮಾಹಿತಿ ನೀಡಿದ ಪ್ರಥಮ್

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯ ಸಮೀಪವಿರುವ ರೇಣುಕಾ ಯಲ್ಲಮ್ಮ ದೇವಾಲಯದ…

24 hours ago