Categories: ಕೋಲಾರ

ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸಿದ್ದರಾಮಯ್ಯ ಕೊಡುಗೆ ಅಪಾರ: ಮಠಾಧೀಶರು ಅವರ ಬೆಂಬಲಕ್ಕೆ ನಿಲ್ಲಬೇಕಾಗಿದೆ- ಸಂತೋಷ್ ಗುರೂಜಿ

ಕೋಲಾರ:ಹಿಂದುಳಿದ ವರ್ಗದ ಕೆಲ ಮಠಾಧೀಶ್ವರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬೆಂಬಲ ಸೂಚಿಸಿದ್ದಾರೆ. ನಾವೂ ಅವರ ಬೆಂಬಲಕ್ಕೆ ಇದ್ದೇವೆ. ಹಿಂದುಳಿದ ವರ್ಗದವರು ಮಾತ್ರವಲ್ಲ; ಎಲ್ಲಾ ಲಿಂಗಾಯತ ಮಠದ ಸ್ವಾಮೀಜಿಗಳೂ ಸಿದ್ದರಾಮಯ್ಯ ಜೊತೆ ನಿಲ್ಲಬೇಕಿದೆ’ ಎಂದು ಎಂದು ಬಾರ್ಕೂರು ಸಂಸ್ಥಾನ ಮಠದ ಸಂತೋಷ ಗುರೂಜಿ ತಿಳಿಸಿದರು.

ಸೋಮವಾರ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ಅವರ ನಿವಾಸಕ್ಕೆ ಭೇಟಿ ಪಾದಪೂಜೆ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ವಿಚಾರದಲ್ಲಿ ಜಾತಿ ನೋಡಬಾರದು. ಆ ಸ್ಥಾನಕ್ಕೆ ಜಾತಿ ಇಲ್ಲ. ಮುಖ್ಯಮಂತ್ರಿ ಜಾತಿವಾದಿ ಆಗಿರಬಾರದು. ಇಲ್ಲಿವರೆಗೆ ಬಂದ ಮುಖ್ಯಮಂತ್ರಿಗಳ ಪೈಕಿ ಸಿದ್ದರಾಮಯ್ಯ ನಿಜವಾಗಿಯೂ ಭ್ರಷ್ಟರಲ್ಲ. ಸಿದ್ದರಾಮಯ್ಯ ಸರ್ಕಾರ ಉರುಳಿಸಲು ಬಿಜೆಪಿ ಹಾಗೂ ಜೆಡಿಎಸ್‌ ಮುಡಾ ವಿಚಾರ ಮುಂದಿಟ್ಟುಕೊಂಡಿವೆ. ಪಾರ್ವತಮ್ಮನರ ಜಮೀನಿಗೆ ಬದಲಾಗಿ ಬೇರೆ ನಿವೇಶನ ಕೊಡಲಾಗಿದೆ ಅಷ್ಟೆ. ಹಿಂದಿನ ಮುಖ್ಯಮಂತ್ರಿಗಳು ಎಷ್ಟು ಹಗರಣ ಮಾಡಿದ್ದಾರೆ, ಎಷ್ಟು ದುಡ್ಡು ಮಾಡಿದ್ದಾರೆ ಎಂಬುದೆಲ್ಲಾ ನಮಗೆ ಗೊತ್ತಿದೆ. ಕೆಲ ರಾಜಕಾರಣಿಗಳಿಗೆ ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು? ಇಂಥವರು ಸಭೆ ಮಾಡುತ್ತಾರೆ ಎಂದರೆ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಲು ಕರ್ನಾಟಕದ ಜನ ದಡ್ಡರಲ್ಲ. ಹೀಗಾಗಿ, ಸಿದ್ದರಾಮಯ್ಯ ಅವರಿಗೆ ಬೆಂಬಲ ಅಗತ್ಯವಿದೆ ಅದಕ್ಕೆ ನಾವು ಬದ್ಧ ಎಂದರು.

ಮುಂದಿನ 2025ರ ಜುಲೈ, ಆಗಸ್ಟ್‌ನಲ್ಲಿ ಸಿದ್ದರಾಮಯ್ಯ ಅವರಿಗೆ ಕಂಟಕ ಎದುರಾಗಲಿದೆ. ಅಲ್ಲಿಯವರೆಗೆ ಅವರನ್ನು ಇಳಿಸಲು ಯಾರಿಗೂ ಸಾಧ್ಯವಿಲ್ಲ. ಆದರೆ, ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಆಗುವ ಭಾಗ್ಯವಿದೆ ಎಂಬುದಾಗಿ ನಾನು ಹೇಳಲ್ಲ. ಅವರಿಗೆ ನಾಲ್ಕಾರು ತೊಡಕುಗಳು ಇವೆ. ಮುಖ್ಯಮಂತ್ರಿ ಆಕಾಂಕ್ಷಿಗಳು ಹಲವು ಮಂದಿ ಇದ್ದಾರೆ. 2025ರ ಆಗಸ್ಟ್‌ನಲ್ಲಿ ಪ್ರಧಾನಿ ಮೋದಿ ಅವರಿಗೂ ಕಂಟಕವಿದೆ ಎಂದರು

ಸಮಾಜದಲ್ಲಿ ನೆಮ್ಮದಿಯಿಂದ ಬದುಕಲು ಎಲ್ಲರಲ್ಲೂ ಪ್ರೀತಿ ವಿಶ್ವಾಸ ಗಳಿಸಬೇಕು ಪಶು, ಪತಿಪತ್ನಿ, ಸಂತಾನ, ಆದಾಯದ ಮ‌ೂಲಕ ಜೀವನ ಸಾಗಿಸಬೇಕು ಸಾಧು ಸಂತರ ಜೊತೆಯಲ್ಲಿ ಇದ್ದಾಗ ಲಕ್ಷ್ಮೀ ಬರಲಿದೆ ಎಂದು ಉಪದೇಶ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಲೋಕಸಭಾ ಸದಸ್ಯ ಎಸ್ ಮುನಿಸ್ವಾಮಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ವೇಣುಗೋಪಾಲ್, ಪ್ರಧಾನ ಕಾರ್ಯದರ್ಶಿಗಳಾದ ಓಂಶಕ್ತಿ ಚಲಪತಿ, ಬಿ.ವಿ ಮಹೇಶ್, ರಾಜು ಅಪ್ಪಿ ಮಹಿಳಾ ಜಿಲ್ಲಾಧ್ಯಕ್ಷೆ ಅರುಣಮ್ಮ, ಮುಖಂಡರಾದ ಸಾ.ಮಾ ಬಾಬು, ನಾಮಲ್ ಮಂಜು, ಎಬಿವಿಪಿ‌ ಹರೀಶ್, ಅಪ್ಪಿ ನಾರಾಯಣಸ್ವಾಮಿ, ರವೀಶ್ ಗೌಡ, ಮುಂತಾದವರು ಇದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

5 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

5 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

8 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

9 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

13 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

17 hours ago