ಕೋಲಾರ:ಹಿಂದುಳಿದ ವರ್ಗದ ಕೆಲ ಮಠಾಧೀಶ್ವರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬೆಂಬಲ ಸೂಚಿಸಿದ್ದಾರೆ. ನಾವೂ ಅವರ ಬೆಂಬಲಕ್ಕೆ ಇದ್ದೇವೆ. ಹಿಂದುಳಿದ ವರ್ಗದವರು ಮಾತ್ರವಲ್ಲ; ಎಲ್ಲಾ ಲಿಂಗಾಯತ ಮಠದ ಸ್ವಾಮೀಜಿಗಳೂ ಸಿದ್ದರಾಮಯ್ಯ ಜೊತೆ ನಿಲ್ಲಬೇಕಿದೆ’ ಎಂದು ಎಂದು ಬಾರ್ಕೂರು ಸಂಸ್ಥಾನ ಮಠದ ಸಂತೋಷ ಗುರೂಜಿ ತಿಳಿಸಿದರು.
ಸೋಮವಾರ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ಅವರ ನಿವಾಸಕ್ಕೆ ಭೇಟಿ ಪಾದಪೂಜೆ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ವಿಚಾರದಲ್ಲಿ ಜಾತಿ ನೋಡಬಾರದು. ಆ ಸ್ಥಾನಕ್ಕೆ ಜಾತಿ ಇಲ್ಲ. ಮುಖ್ಯಮಂತ್ರಿ ಜಾತಿವಾದಿ ಆಗಿರಬಾರದು. ಇಲ್ಲಿವರೆಗೆ ಬಂದ ಮುಖ್ಯಮಂತ್ರಿಗಳ ಪೈಕಿ ಸಿದ್ದರಾಮಯ್ಯ ನಿಜವಾಗಿಯೂ ಭ್ರಷ್ಟರಲ್ಲ. ಸಿದ್ದರಾಮಯ್ಯ ಸರ್ಕಾರ ಉರುಳಿಸಲು ಬಿಜೆಪಿ ಹಾಗೂ ಜೆಡಿಎಸ್ ಮುಡಾ ವಿಚಾರ ಮುಂದಿಟ್ಟುಕೊಂಡಿವೆ. ಪಾರ್ವತಮ್ಮನರ ಜಮೀನಿಗೆ ಬದಲಾಗಿ ಬೇರೆ ನಿವೇಶನ ಕೊಡಲಾಗಿದೆ ಅಷ್ಟೆ. ಹಿಂದಿನ ಮುಖ್ಯಮಂತ್ರಿಗಳು ಎಷ್ಟು ಹಗರಣ ಮಾಡಿದ್ದಾರೆ, ಎಷ್ಟು ದುಡ್ಡು ಮಾಡಿದ್ದಾರೆ ಎಂಬುದೆಲ್ಲಾ ನಮಗೆ ಗೊತ್ತಿದೆ. ಕೆಲ ರಾಜಕಾರಣಿಗಳಿಗೆ ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು? ಇಂಥವರು ಸಭೆ ಮಾಡುತ್ತಾರೆ ಎಂದರೆ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಲು ಕರ್ನಾಟಕದ ಜನ ದಡ್ಡರಲ್ಲ. ಹೀಗಾಗಿ, ಸಿದ್ದರಾಮಯ್ಯ ಅವರಿಗೆ ಬೆಂಬಲ ಅಗತ್ಯವಿದೆ ಅದಕ್ಕೆ ನಾವು ಬದ್ಧ ಎಂದರು.
ಮುಂದಿನ 2025ರ ಜುಲೈ, ಆಗಸ್ಟ್ನಲ್ಲಿ ಸಿದ್ದರಾಮಯ್ಯ ಅವರಿಗೆ ಕಂಟಕ ಎದುರಾಗಲಿದೆ. ಅಲ್ಲಿಯವರೆಗೆ ಅವರನ್ನು ಇಳಿಸಲು ಯಾರಿಗೂ ಸಾಧ್ಯವಿಲ್ಲ. ಆದರೆ, ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವ ಭಾಗ್ಯವಿದೆ ಎಂಬುದಾಗಿ ನಾನು ಹೇಳಲ್ಲ. ಅವರಿಗೆ ನಾಲ್ಕಾರು ತೊಡಕುಗಳು ಇವೆ. ಮುಖ್ಯಮಂತ್ರಿ ಆಕಾಂಕ್ಷಿಗಳು ಹಲವು ಮಂದಿ ಇದ್ದಾರೆ. 2025ರ ಆಗಸ್ಟ್ನಲ್ಲಿ ಪ್ರಧಾನಿ ಮೋದಿ ಅವರಿಗೂ ಕಂಟಕವಿದೆ ಎಂದರು
ಸಮಾಜದಲ್ಲಿ ನೆಮ್ಮದಿಯಿಂದ ಬದುಕಲು ಎಲ್ಲರಲ್ಲೂ ಪ್ರೀತಿ ವಿಶ್ವಾಸ ಗಳಿಸಬೇಕು ಪಶು, ಪತಿಪತ್ನಿ, ಸಂತಾನ, ಆದಾಯದ ಮೂಲಕ ಜೀವನ ಸಾಗಿಸಬೇಕು ಸಾಧು ಸಂತರ ಜೊತೆಯಲ್ಲಿ ಇದ್ದಾಗ ಲಕ್ಷ್ಮೀ ಬರಲಿದೆ ಎಂದು ಉಪದೇಶ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಲೋಕಸಭಾ ಸದಸ್ಯ ಎಸ್ ಮುನಿಸ್ವಾಮಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ವೇಣುಗೋಪಾಲ್, ಪ್ರಧಾನ ಕಾರ್ಯದರ್ಶಿಗಳಾದ ಓಂಶಕ್ತಿ ಚಲಪತಿ, ಬಿ.ವಿ ಮಹೇಶ್, ರಾಜು ಅಪ್ಪಿ ಮಹಿಳಾ ಜಿಲ್ಲಾಧ್ಯಕ್ಷೆ ಅರುಣಮ್ಮ, ಮುಖಂಡರಾದ ಸಾ.ಮಾ ಬಾಬು, ನಾಮಲ್ ಮಂಜು, ಎಬಿವಿಪಿ ಹರೀಶ್, ಅಪ್ಪಿ ನಾರಾಯಣಸ್ವಾಮಿ, ರವೀಶ್ ಗೌಡ, ಮುಂತಾದವರು ಇದ್ದರು.
ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…
ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…