Categories: ಕೋಲಾರ

ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸಿದ್ದರಾಮಯ್ಯ ಕೊಡುಗೆ ಅಪಾರ: ಮಠಾಧೀಶರು ಅವರ ಬೆಂಬಲಕ್ಕೆ ನಿಲ್ಲಬೇಕಾಗಿದೆ- ಸಂತೋಷ್ ಗುರೂಜಿ

ಕೋಲಾರ:ಹಿಂದುಳಿದ ವರ್ಗದ ಕೆಲ ಮಠಾಧೀಶ್ವರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬೆಂಬಲ ಸೂಚಿಸಿದ್ದಾರೆ. ನಾವೂ ಅವರ ಬೆಂಬಲಕ್ಕೆ ಇದ್ದೇವೆ. ಹಿಂದುಳಿದ ವರ್ಗದವರು ಮಾತ್ರವಲ್ಲ; ಎಲ್ಲಾ ಲಿಂಗಾಯತ ಮಠದ ಸ್ವಾಮೀಜಿಗಳೂ ಸಿದ್ದರಾಮಯ್ಯ ಜೊತೆ ನಿಲ್ಲಬೇಕಿದೆ’ ಎಂದು ಎಂದು ಬಾರ್ಕೂರು ಸಂಸ್ಥಾನ ಮಠದ ಸಂತೋಷ ಗುರೂಜಿ ತಿಳಿಸಿದರು.

ಸೋಮವಾರ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ಅವರ ನಿವಾಸಕ್ಕೆ ಭೇಟಿ ಪಾದಪೂಜೆ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ವಿಚಾರದಲ್ಲಿ ಜಾತಿ ನೋಡಬಾರದು. ಆ ಸ್ಥಾನಕ್ಕೆ ಜಾತಿ ಇಲ್ಲ. ಮುಖ್ಯಮಂತ್ರಿ ಜಾತಿವಾದಿ ಆಗಿರಬಾರದು. ಇಲ್ಲಿವರೆಗೆ ಬಂದ ಮುಖ್ಯಮಂತ್ರಿಗಳ ಪೈಕಿ ಸಿದ್ದರಾಮಯ್ಯ ನಿಜವಾಗಿಯೂ ಭ್ರಷ್ಟರಲ್ಲ. ಸಿದ್ದರಾಮಯ್ಯ ಸರ್ಕಾರ ಉರುಳಿಸಲು ಬಿಜೆಪಿ ಹಾಗೂ ಜೆಡಿಎಸ್‌ ಮುಡಾ ವಿಚಾರ ಮುಂದಿಟ್ಟುಕೊಂಡಿವೆ. ಪಾರ್ವತಮ್ಮನರ ಜಮೀನಿಗೆ ಬದಲಾಗಿ ಬೇರೆ ನಿವೇಶನ ಕೊಡಲಾಗಿದೆ ಅಷ್ಟೆ. ಹಿಂದಿನ ಮುಖ್ಯಮಂತ್ರಿಗಳು ಎಷ್ಟು ಹಗರಣ ಮಾಡಿದ್ದಾರೆ, ಎಷ್ಟು ದುಡ್ಡು ಮಾಡಿದ್ದಾರೆ ಎಂಬುದೆಲ್ಲಾ ನಮಗೆ ಗೊತ್ತಿದೆ. ಕೆಲ ರಾಜಕಾರಣಿಗಳಿಗೆ ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು? ಇಂಥವರು ಸಭೆ ಮಾಡುತ್ತಾರೆ ಎಂದರೆ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಲು ಕರ್ನಾಟಕದ ಜನ ದಡ್ಡರಲ್ಲ. ಹೀಗಾಗಿ, ಸಿದ್ದರಾಮಯ್ಯ ಅವರಿಗೆ ಬೆಂಬಲ ಅಗತ್ಯವಿದೆ ಅದಕ್ಕೆ ನಾವು ಬದ್ಧ ಎಂದರು.

ಮುಂದಿನ 2025ರ ಜುಲೈ, ಆಗಸ್ಟ್‌ನಲ್ಲಿ ಸಿದ್ದರಾಮಯ್ಯ ಅವರಿಗೆ ಕಂಟಕ ಎದುರಾಗಲಿದೆ. ಅಲ್ಲಿಯವರೆಗೆ ಅವರನ್ನು ಇಳಿಸಲು ಯಾರಿಗೂ ಸಾಧ್ಯವಿಲ್ಲ. ಆದರೆ, ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಆಗುವ ಭಾಗ್ಯವಿದೆ ಎಂಬುದಾಗಿ ನಾನು ಹೇಳಲ್ಲ. ಅವರಿಗೆ ನಾಲ್ಕಾರು ತೊಡಕುಗಳು ಇವೆ. ಮುಖ್ಯಮಂತ್ರಿ ಆಕಾಂಕ್ಷಿಗಳು ಹಲವು ಮಂದಿ ಇದ್ದಾರೆ. 2025ರ ಆಗಸ್ಟ್‌ನಲ್ಲಿ ಪ್ರಧಾನಿ ಮೋದಿ ಅವರಿಗೂ ಕಂಟಕವಿದೆ ಎಂದರು

ಸಮಾಜದಲ್ಲಿ ನೆಮ್ಮದಿಯಿಂದ ಬದುಕಲು ಎಲ್ಲರಲ್ಲೂ ಪ್ರೀತಿ ವಿಶ್ವಾಸ ಗಳಿಸಬೇಕು ಪಶು, ಪತಿಪತ್ನಿ, ಸಂತಾನ, ಆದಾಯದ ಮ‌ೂಲಕ ಜೀವನ ಸಾಗಿಸಬೇಕು ಸಾಧು ಸಂತರ ಜೊತೆಯಲ್ಲಿ ಇದ್ದಾಗ ಲಕ್ಷ್ಮೀ ಬರಲಿದೆ ಎಂದು ಉಪದೇಶ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಲೋಕಸಭಾ ಸದಸ್ಯ ಎಸ್ ಮುನಿಸ್ವಾಮಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ವೇಣುಗೋಪಾಲ್, ಪ್ರಧಾನ ಕಾರ್ಯದರ್ಶಿಗಳಾದ ಓಂಶಕ್ತಿ ಚಲಪತಿ, ಬಿ.ವಿ ಮಹೇಶ್, ರಾಜು ಅಪ್ಪಿ ಮಹಿಳಾ ಜಿಲ್ಲಾಧ್ಯಕ್ಷೆ ಅರುಣಮ್ಮ, ಮುಖಂಡರಾದ ಸಾ.ಮಾ ಬಾಬು, ನಾಮಲ್ ಮಂಜು, ಎಬಿವಿಪಿ‌ ಹರೀಶ್, ಅಪ್ಪಿ ನಾರಾಯಣಸ್ವಾಮಿ, ರವೀಶ್ ಗೌಡ, ಮುಂತಾದವರು ಇದ್ದರು.

Ramesh Babu

Journalist

Recent Posts

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

41 minutes ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

5 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

11 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago