Categories: ಕೋಲಾರ

ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸಿದ್ದರಾಮಯ್ಯ ಕೊಡುಗೆ ಅಪಾರ: ಮಠಾಧೀಶರು ಅವರ ಬೆಂಬಲಕ್ಕೆ ನಿಲ್ಲಬೇಕಾಗಿದೆ- ಸಂತೋಷ್ ಗುರೂಜಿ

ಕೋಲಾರ:ಹಿಂದುಳಿದ ವರ್ಗದ ಕೆಲ ಮಠಾಧೀಶ್ವರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬೆಂಬಲ ಸೂಚಿಸಿದ್ದಾರೆ. ನಾವೂ ಅವರ ಬೆಂಬಲಕ್ಕೆ ಇದ್ದೇವೆ. ಹಿಂದುಳಿದ ವರ್ಗದವರು ಮಾತ್ರವಲ್ಲ; ಎಲ್ಲಾ ಲಿಂಗಾಯತ ಮಠದ ಸ್ವಾಮೀಜಿಗಳೂ ಸಿದ್ದರಾಮಯ್ಯ ಜೊತೆ ನಿಲ್ಲಬೇಕಿದೆ’ ಎಂದು ಎಂದು ಬಾರ್ಕೂರು ಸಂಸ್ಥಾನ ಮಠದ ಸಂತೋಷ ಗುರೂಜಿ ತಿಳಿಸಿದರು.

ಸೋಮವಾರ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ಅವರ ನಿವಾಸಕ್ಕೆ ಭೇಟಿ ಪಾದಪೂಜೆ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ವಿಚಾರದಲ್ಲಿ ಜಾತಿ ನೋಡಬಾರದು. ಆ ಸ್ಥಾನಕ್ಕೆ ಜಾತಿ ಇಲ್ಲ. ಮುಖ್ಯಮಂತ್ರಿ ಜಾತಿವಾದಿ ಆಗಿರಬಾರದು. ಇಲ್ಲಿವರೆಗೆ ಬಂದ ಮುಖ್ಯಮಂತ್ರಿಗಳ ಪೈಕಿ ಸಿದ್ದರಾಮಯ್ಯ ನಿಜವಾಗಿಯೂ ಭ್ರಷ್ಟರಲ್ಲ. ಸಿದ್ದರಾಮಯ್ಯ ಸರ್ಕಾರ ಉರುಳಿಸಲು ಬಿಜೆಪಿ ಹಾಗೂ ಜೆಡಿಎಸ್‌ ಮುಡಾ ವಿಚಾರ ಮುಂದಿಟ್ಟುಕೊಂಡಿವೆ. ಪಾರ್ವತಮ್ಮನರ ಜಮೀನಿಗೆ ಬದಲಾಗಿ ಬೇರೆ ನಿವೇಶನ ಕೊಡಲಾಗಿದೆ ಅಷ್ಟೆ. ಹಿಂದಿನ ಮುಖ್ಯಮಂತ್ರಿಗಳು ಎಷ್ಟು ಹಗರಣ ಮಾಡಿದ್ದಾರೆ, ಎಷ್ಟು ದುಡ್ಡು ಮಾಡಿದ್ದಾರೆ ಎಂಬುದೆಲ್ಲಾ ನಮಗೆ ಗೊತ್ತಿದೆ. ಕೆಲ ರಾಜಕಾರಣಿಗಳಿಗೆ ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು? ಇಂಥವರು ಸಭೆ ಮಾಡುತ್ತಾರೆ ಎಂದರೆ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಲು ಕರ್ನಾಟಕದ ಜನ ದಡ್ಡರಲ್ಲ. ಹೀಗಾಗಿ, ಸಿದ್ದರಾಮಯ್ಯ ಅವರಿಗೆ ಬೆಂಬಲ ಅಗತ್ಯವಿದೆ ಅದಕ್ಕೆ ನಾವು ಬದ್ಧ ಎಂದರು.

ಮುಂದಿನ 2025ರ ಜುಲೈ, ಆಗಸ್ಟ್‌ನಲ್ಲಿ ಸಿದ್ದರಾಮಯ್ಯ ಅವರಿಗೆ ಕಂಟಕ ಎದುರಾಗಲಿದೆ. ಅಲ್ಲಿಯವರೆಗೆ ಅವರನ್ನು ಇಳಿಸಲು ಯಾರಿಗೂ ಸಾಧ್ಯವಿಲ್ಲ. ಆದರೆ, ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಆಗುವ ಭಾಗ್ಯವಿದೆ ಎಂಬುದಾಗಿ ನಾನು ಹೇಳಲ್ಲ. ಅವರಿಗೆ ನಾಲ್ಕಾರು ತೊಡಕುಗಳು ಇವೆ. ಮುಖ್ಯಮಂತ್ರಿ ಆಕಾಂಕ್ಷಿಗಳು ಹಲವು ಮಂದಿ ಇದ್ದಾರೆ. 2025ರ ಆಗಸ್ಟ್‌ನಲ್ಲಿ ಪ್ರಧಾನಿ ಮೋದಿ ಅವರಿಗೂ ಕಂಟಕವಿದೆ ಎಂದರು

ಸಮಾಜದಲ್ಲಿ ನೆಮ್ಮದಿಯಿಂದ ಬದುಕಲು ಎಲ್ಲರಲ್ಲೂ ಪ್ರೀತಿ ವಿಶ್ವಾಸ ಗಳಿಸಬೇಕು ಪಶು, ಪತಿಪತ್ನಿ, ಸಂತಾನ, ಆದಾಯದ ಮ‌ೂಲಕ ಜೀವನ ಸಾಗಿಸಬೇಕು ಸಾಧು ಸಂತರ ಜೊತೆಯಲ್ಲಿ ಇದ್ದಾಗ ಲಕ್ಷ್ಮೀ ಬರಲಿದೆ ಎಂದು ಉಪದೇಶ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಲೋಕಸಭಾ ಸದಸ್ಯ ಎಸ್ ಮುನಿಸ್ವಾಮಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ವೇಣುಗೋಪಾಲ್, ಪ್ರಧಾನ ಕಾರ್ಯದರ್ಶಿಗಳಾದ ಓಂಶಕ್ತಿ ಚಲಪತಿ, ಬಿ.ವಿ ಮಹೇಶ್, ರಾಜು ಅಪ್ಪಿ ಮಹಿಳಾ ಜಿಲ್ಲಾಧ್ಯಕ್ಷೆ ಅರುಣಮ್ಮ, ಮುಖಂಡರಾದ ಸಾ.ಮಾ ಬಾಬು, ನಾಮಲ್ ಮಂಜು, ಎಬಿವಿಪಿ‌ ಹರೀಶ್, ಅಪ್ಪಿ ನಾರಾಯಣಸ್ವಾಮಿ, ರವೀಶ್ ಗೌಡ, ಮುಂತಾದವರು ಇದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

15 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago