Categories: ಕೋಲಾರ

ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸಿದ್ದರಾಮಯ್ಯ ಕೊಡುಗೆ ಅಪಾರ: ಮಠಾಧೀಶರು ಅವರ ಬೆಂಬಲಕ್ಕೆ ನಿಲ್ಲಬೇಕಾಗಿದೆ- ಸಂತೋಷ್ ಗುರೂಜಿ

ಕೋಲಾರ:ಹಿಂದುಳಿದ ವರ್ಗದ ಕೆಲ ಮಠಾಧೀಶ್ವರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬೆಂಬಲ ಸೂಚಿಸಿದ್ದಾರೆ. ನಾವೂ ಅವರ ಬೆಂಬಲಕ್ಕೆ ಇದ್ದೇವೆ. ಹಿಂದುಳಿದ ವರ್ಗದವರು ಮಾತ್ರವಲ್ಲ; ಎಲ್ಲಾ ಲಿಂಗಾಯತ ಮಠದ ಸ್ವಾಮೀಜಿಗಳೂ ಸಿದ್ದರಾಮಯ್ಯ ಜೊತೆ ನಿಲ್ಲಬೇಕಿದೆ’ ಎಂದು ಎಂದು ಬಾರ್ಕೂರು ಸಂಸ್ಥಾನ ಮಠದ ಸಂತೋಷ ಗುರೂಜಿ ತಿಳಿಸಿದರು.

ಸೋಮವಾರ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ಅವರ ನಿವಾಸಕ್ಕೆ ಭೇಟಿ ಪಾದಪೂಜೆ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ವಿಚಾರದಲ್ಲಿ ಜಾತಿ ನೋಡಬಾರದು. ಆ ಸ್ಥಾನಕ್ಕೆ ಜಾತಿ ಇಲ್ಲ. ಮುಖ್ಯಮಂತ್ರಿ ಜಾತಿವಾದಿ ಆಗಿರಬಾರದು. ಇಲ್ಲಿವರೆಗೆ ಬಂದ ಮುಖ್ಯಮಂತ್ರಿಗಳ ಪೈಕಿ ಸಿದ್ದರಾಮಯ್ಯ ನಿಜವಾಗಿಯೂ ಭ್ರಷ್ಟರಲ್ಲ. ಸಿದ್ದರಾಮಯ್ಯ ಸರ್ಕಾರ ಉರುಳಿಸಲು ಬಿಜೆಪಿ ಹಾಗೂ ಜೆಡಿಎಸ್‌ ಮುಡಾ ವಿಚಾರ ಮುಂದಿಟ್ಟುಕೊಂಡಿವೆ. ಪಾರ್ವತಮ್ಮನರ ಜಮೀನಿಗೆ ಬದಲಾಗಿ ಬೇರೆ ನಿವೇಶನ ಕೊಡಲಾಗಿದೆ ಅಷ್ಟೆ. ಹಿಂದಿನ ಮುಖ್ಯಮಂತ್ರಿಗಳು ಎಷ್ಟು ಹಗರಣ ಮಾಡಿದ್ದಾರೆ, ಎಷ್ಟು ದುಡ್ಡು ಮಾಡಿದ್ದಾರೆ ಎಂಬುದೆಲ್ಲಾ ನಮಗೆ ಗೊತ್ತಿದೆ. ಕೆಲ ರಾಜಕಾರಣಿಗಳಿಗೆ ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು? ಇಂಥವರು ಸಭೆ ಮಾಡುತ್ತಾರೆ ಎಂದರೆ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಲು ಕರ್ನಾಟಕದ ಜನ ದಡ್ಡರಲ್ಲ. ಹೀಗಾಗಿ, ಸಿದ್ದರಾಮಯ್ಯ ಅವರಿಗೆ ಬೆಂಬಲ ಅಗತ್ಯವಿದೆ ಅದಕ್ಕೆ ನಾವು ಬದ್ಧ ಎಂದರು.

ಮುಂದಿನ 2025ರ ಜುಲೈ, ಆಗಸ್ಟ್‌ನಲ್ಲಿ ಸಿದ್ದರಾಮಯ್ಯ ಅವರಿಗೆ ಕಂಟಕ ಎದುರಾಗಲಿದೆ. ಅಲ್ಲಿಯವರೆಗೆ ಅವರನ್ನು ಇಳಿಸಲು ಯಾರಿಗೂ ಸಾಧ್ಯವಿಲ್ಲ. ಆದರೆ, ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಆಗುವ ಭಾಗ್ಯವಿದೆ ಎಂಬುದಾಗಿ ನಾನು ಹೇಳಲ್ಲ. ಅವರಿಗೆ ನಾಲ್ಕಾರು ತೊಡಕುಗಳು ಇವೆ. ಮುಖ್ಯಮಂತ್ರಿ ಆಕಾಂಕ್ಷಿಗಳು ಹಲವು ಮಂದಿ ಇದ್ದಾರೆ. 2025ರ ಆಗಸ್ಟ್‌ನಲ್ಲಿ ಪ್ರಧಾನಿ ಮೋದಿ ಅವರಿಗೂ ಕಂಟಕವಿದೆ ಎಂದರು

ಸಮಾಜದಲ್ಲಿ ನೆಮ್ಮದಿಯಿಂದ ಬದುಕಲು ಎಲ್ಲರಲ್ಲೂ ಪ್ರೀತಿ ವಿಶ್ವಾಸ ಗಳಿಸಬೇಕು ಪಶು, ಪತಿಪತ್ನಿ, ಸಂತಾನ, ಆದಾಯದ ಮ‌ೂಲಕ ಜೀವನ ಸಾಗಿಸಬೇಕು ಸಾಧು ಸಂತರ ಜೊತೆಯಲ್ಲಿ ಇದ್ದಾಗ ಲಕ್ಷ್ಮೀ ಬರಲಿದೆ ಎಂದು ಉಪದೇಶ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಲೋಕಸಭಾ ಸದಸ್ಯ ಎಸ್ ಮುನಿಸ್ವಾಮಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ವೇಣುಗೋಪಾಲ್, ಪ್ರಧಾನ ಕಾರ್ಯದರ್ಶಿಗಳಾದ ಓಂಶಕ್ತಿ ಚಲಪತಿ, ಬಿ.ವಿ ಮಹೇಶ್, ರಾಜು ಅಪ್ಪಿ ಮಹಿಳಾ ಜಿಲ್ಲಾಧ್ಯಕ್ಷೆ ಅರುಣಮ್ಮ, ಮುಖಂಡರಾದ ಸಾ.ಮಾ ಬಾಬು, ನಾಮಲ್ ಮಂಜು, ಎಬಿವಿಪಿ‌ ಹರೀಶ್, ಅಪ್ಪಿ ನಾರಾಯಣಸ್ವಾಮಿ, ರವೀಶ್ ಗೌಡ, ಮುಂತಾದವರು ಇದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

10 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

10 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

12 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

12 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

19 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago