ಹಿಂದುಳಿದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಹೆಚ್ಚು ಗಮನ ಹರಿಸಬೇಕು-ದಯಾನಂದಪುರಿ ಸ್ವಾಮೀಜಿ

ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಸಾಧನೆ ಮಾಡುವ ಉನ್ನತ ಹಂತದ ಹುದ್ದೆಗಳನ್ನು ಹೊಂದುವ ಮಹತ್ವಾಕಾಂಕ್ಷೆಯನ್ನು ಹೊಂದಬೇಕು ಎಂದು ಹಂಪಿ ಹೇಮಕೂಟ ಗಾಯತ್ರಿ ಪೀಠಾಧ್ಯಕ್ಷ ದಯಾನಂದಪುರಿ ಸ್ವಾಮೀಜಿ ಹೇಳಿದರು.

ಇಲ್ಲಿನ ಪಿಸಿವಿ ಚಾರಿಟಬಲ್ ಟ್ರಸ್ಟ್‌ನ ನೇತೃತ್ವದಲ್ಲಿ ನಡೆದ 2024ನೇ ಸಾಲಿನ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಸಮಕಾಲೀನ ಕಾಲಘಟ್ಟದಲ್ಲಿ ತಾಂತ್ರಿಕ ಜ್ಞಾನ ಮತ್ತು ಕೌಶಲವನ್ನು ಉತ್ತೇಜಿಸುವ ಕೆಲಸ ಆಗಬೇಕು. ಸಾಧನೆ ನಿಂತ ನೀರಾಗಬಾರದು. ಅದು ಹರಿಯುವ ನದಿಯಂತೆ ನಿರಂತರತೆಯನ್ನು ಕಾಯ್ದುಕೊಳ್ಳಬೇಕು. ದೇವಾಂಗ ಸಮುದಾಯದ ಶೈಕ್ಷಣಿಕ ಸಬಲೀಕರಣಕ್ಕೆ ಪೂರಕವಾಗಿ ಉನ್ನತ ಸ್ತರಗಳಲ್ಲಿ ತಮ್ಮ ಅಸ್ತಿತ್ವವನ್ನು ಪ್ರತಿಪಾದಿಸುವುದು ಅಗತ್ಯ ಎಂದರು.

ಪುಷ್ಪಾಂಡಜಮುನಿ ಆಶ್ರಮದ ದಿವ್ಯಜ್ಞಾನಾನಂದ ಸ್ವಾಮೀಜಿ ಮಾತನಾಡಿ, ಸಾಧನೆ ಎಂದಿಗೂ ಸಾಧಕನ ಸ್ವತ್ತೇ ವಿನಃ ಸೋಮಾರಿಯ ಸ್ವತ್ತಾಗುವುದಿಲ್ಲ. ಪರಿಶ್ರಮ, ಆಸಕ್ತಿ ಮತ್ತು ಅದಕ್ಕೆ ಪೂರಕವಾದ ಉತ್ತೇಜನ ದೊರೆತಾಗ ಸಾಧನೆ ಪರಿಪೂರ್ಣತೆಯನ್ನು ಪಡೆಯುತ್ತದೆ. ಈ ನಿಟ್ಟಿನಲ್ಲಿ ಉತ್ತಮ ಸಾಧನೆಯನ್ನು ಗುರ್ತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಸತತ 11 ವರ್ಷಗಳಿಂದ ಪಿಸಿವಿ ಚಾರಿಟಬಲ್ ಟ್ರಸ್ಟ್‌ ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು.

ಮುಖ್ಯಅತಿಥಿಯಾಗಿ ಪಾಲ್ಗೊಂಡ ಬೆಂ.ಗ್ರಾ ಜಿಲ್ಲಾ ಕಸಾಪ ಕಾರ್ಯದರ್ಶಿ ಪ್ರೊ.ರವಿಕಿರಣ್ ಕೆ.ಆರ್ ಮಾತನಾಡಿ, ದೊಡ್ಡಬಳ್ಳಾಪುರದಂತಹ ಸಂಕೀರ್ಣ ಪ್ರದೇಶದಲ್ಲಿ ಇಂದು ಶೈಕ್ಷಣಿಕವಾದ ನಿಶ್ಯಬ್ದ ಕ್ರಾಂತಿ ನಡೆಯುತ್ತಿದೆ. ಇಲ್ಲಿನ ಬಹುತೇಕ ಮನೆಗಳಲ್ಲಿ ಪದವೀಧರರಿದ್ದಾರೆ. ಅದರಲ್ಲೂ ಹೆಣ್ಣು ಮಕ್ಕಳು ಉತ್ತಮ ಶೈಕ್ಷಣಿಕ ಸಾಧನೆಗೆ ಸಾಕ್ಷಿಯಾಗಿರುವುದು ವಿಶೇಷ. ಜ್ಞಾನಾಧಾರಿತ ಅಧ್ಯಯನ ಮತ್ತು ಸಾಧನೆಯ ಜೊತೆಗೆ ಕೌಶಲ್ಯಾಧಾರಿತ ಅಧ್ಯಯನ ಮತ್ತು ಸಾಧನೆಯನ್ನು ಉತ್ತೇಜಿಸುವ ಅಗತ್ಯವಿದೆ. ಸಿಇಟಿ, ನೀಟ್‌ ಇತ್ಯಾದಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಮ್ಮ ವಿದ್ಯಾರ್ಥಿಗಳನ್ನು ಗುಣಾತ್ಮಕವಾಗಿ ಸಜ್ಜುಗೊಳಿಸುವುದು ಅಗತ್ಯವಾಗಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಪಿಸಿವಿ ಚಾರಿಟಬಲ್‌ ಟ್ರಸ್ಟ್‌ನ ಅಧ್ಯಕ್ಷ ಪಿ.ಸಿ.ವೆಂಕಟೇಶ್, ಕಳೆದ 11 ವರ್ಷಗಳಿಂದ ತಮ್ಮ ಟ್ರಸ್ಟ್‌ನ ಮೂಲಕ ಶೈಕ್ಷಣಿಕ ಸಾಧಕರನ್ನು ಗುರ್ತಿಸಿ ಉತ್ತೇಜನ ನೀಡಲಾಗುತ್ತಿದೆ. ಶಿಕ್ಷಣದ ಅರಿವಿನ ಜೊತೆಗೆ ಸಾಮಾಜಿಕ ಕಾಳಜಿಯನ್ನೂ ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಪರಿಸರ ಸಂರಕ್ಷಣೆಯ ಅರಿವು, ಪರಂಪರೆಯ ಸಂರಕ್ಷಣೆ ಸಂಕಲ್ಪವನ್ನು ಮಾಡಬೇಕು ಎಂದರು.

ಇದೇ ವೇಳೆ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾದ 180ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನದೊಂದಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಕ್ರೀಡಾ ಪ್ರತಿಭೆಗಳು, ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಕೇಂದ್ರ ರೇಷ್ಮೆ ಮಂಡಲಿ ಮಾಜಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಎಂಎಬಿಎಲ್‌ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಎಂ.ಬಿ.ಗುರುದೇವ್, ಪಿಸಿವಿ ಚಾರಿಟಬಲ್ ಟ್ರಸ್ಟಿನ ಕಾರ್ಯದರ್ಶಿ ಪಿ.ವಿ.ಪ್ರಶಾಂತ್, ಖಜಾಂಚಿ ಪುಷ್ಪಲತಾ, ಟ್ರಸ್ಟಿ ಅನುಶ್ರೀ, ಡಾ.ಚಂದನ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

7 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

8 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

17 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago