Categories: ಕೋಲಾರ

ಹಿಂದುಳಿದ ಸಮುದಾಯಗಳ ಪರವಾಗಿ ಇದ್ದೇವೆ-‌ ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ತೀರಾ ಹಿಂದುಳಿದ ಸಮುದಾಯ ಗಳಲ್ಲೊಂದಾದ ಸವಿತಾ ಸಮಾಜದ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಬದ್ದವಾಗಿದೆ ಸಮುದಾಯದ ಕಾರ್ಯಚಟುವಟಿಕೆಗಳಿಗೆ ಮುಂದಿನ ದಿನಗಳಲ್ಲಿ ಜಮೀನು ಸೇರಿದಂತೆ ರಾಜಕೀಯ ಸ್ಥಾನಮಾನವನ್ನು ನೀಡಲಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಮಂಗಳವಾರ ರಾಜ್ಯ ಸವಿತಾ ಸಮಾಜದ ಜಿಲ್ಲಾ ಘಟಕದಿಂದ ಅಮೋಘ ನಾದಸ್ವರ ಕಛೇರಿ ಹಾಗೂ ಗಣ್ಯರಿಗೆ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ಷೌರಿಕ ವೃತ್ತಿಯನ್ನು ನಂಬಿ ಬದುಕು ಕಟ್ಟಿಕೊಳ್ಳುತ್ತಿರುವ ಸವಿತಾ ಸಮಾಜವು ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಹಿಂದುಳಿದ ಸಮುದಾಯಗಳ ಪರವಾಗಿ ಕಾಂಗ್ರೆಸ್ ಸರ್ಕಾರವು ಇದ್ದು ಮುಂದಿನ ದಿನಗಳಲ್ಲಿ ನಡೆಯುವ ಗ್ರಾಪಂ, ತಾಪಂ, ಜಿಪಂ ಸೇರಿದಂತೆ ನಾಮನಿರ್ದೇಶನದಲ್ಲಿ ಸಹ ಸಣ್ಣ ಸಣ್ಣ ಸಮುದಾಯಗಳನ್ನು ಗುರುತಿಸುವ ಕೆಲಸವಾಗಲಿದೆ ಎಂದರು.

ಅಂಬೇಡ್ಕರ್ ಕೊಟ್ಟ ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬರಿಗೂ ಬದುಕುವ ಅವಕಾಶ ನೀಡಲಾಗಿದೆ ಅದನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ಮೇಲೆ ಇದೆ ಸಮುದಾಯದ ಹಿರಿಯರ ಹಾದಿಯಲ್ಲಿ ನಾವು ಎಲ್ಲರೂ ನಡೆಯಬೇಕು ಸಣ್ಣ ಸಮಾಜ ಎಂಬ ಕೀಳುಹಿರಿಮೆ ಬಿಟ್ಟು ತಾವುಗಳು ಅವಕಾಶಗಳನ್ನು ಸೃಷ್ಟಿ ಮಾಡಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಸಣ್ಣ ಸಮುದಾಯಗಳನ್ನು ಎಲ್ಲಾ ರಾಜಕೀಯ ಪಕ್ಷಗಳು ಗುರುತಿಸಿ ಪೋತ್ಸಾಹಿಸಬೇಕು ರಾಜಕೀಯ ಪಕ್ಷಗಳು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡರೆ ಮಾತ್ರವೇ ಉತ್ತಮ ಭವಿಷ್ಯ ಕಾಣಲು ಸಾಧ್ಯವಿದೆ ನಿಮ್ಮ ಸಮಸ್ಯೆಗಳಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ಕೊಡಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ತಿರುಪತಿ ತಿರುಮಲ ದೇವಾಲಯ ಸಮಿತಿ ಸದಸ್ಯ ನರೇಶ್ ಕುಮಾರ್ ಮಾತನಾಡಿ, ಸಣ್ಣ ಸಮುದಾಯಗಳು ಒಗ್ಗಟ್ಟಿನಿಂದ ತಮ್ಮ ಶಕ್ತಿ ತೋರಿಸದೆ ಹೋದರೆ ಪ್ರತಿ ಹಂತದಲ್ಲೂ ನಮ್ಮನ್ನು ಗುರುತಿಸುವುದಿಲ್ಲ ರಾಜಕೀಯವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮುದಾಯವು ಬೆಳಯಬೇಕು ಸರ್ಕಾರಗಳು ಸಹ ಪೋತ್ಸಾಹಿಸಿ ಗೌರವಿಸುವ ಕೆಲಸವಾಗಬೇಕು ಸಮುದಾಯವು ಮೂರು ವೃತ್ತಿಯಲ್ಲಿ ಇದ್ದರು ಸರಿಯಾದ ಸ್ಥಾನಮಾನಗಳು ದೊರೆಯುತ್ತಿಲ್ಲ ಎಂದರು.

ಈ ಸಂದರ್ಭದಲ್ಲಿ ಪಿಟೀಲು ಚೌಡಯ್ಯ ಪ್ರಶಸ್ತಿ ಪುರಸ್ಕೃತ ಆರ್ ಶ್ರೀರಾಮಲು ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಸವಿತಾ ಸಮಾಜದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಕಿರಣ್ ಕುಮಾರ್, ಜಿಲ್ಲಾ ಅಧ್ಯಕ್ಷ ಎಸ್ ಮಂಜುನಾಥ್, ವಿಜಯನಗರ ಮಂಜುನಾಥ್, ಮುಖಂಡರಾದ ಪುಟ್ಟುರಾಜು, ಮುನಿರಾಜು, ಚಲಪತಿ, ಗಂಗಣ್ಣ, ಸದಾನಂದ, ಮುಂತಾದವರು ಇದ್ದರು.

Ramesh Babu

Journalist

Recent Posts

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

5 hours ago

ಲಾರಿ-ಕ್ರೂಸರ್ ನಡುವೆ ಭೀಕರ ಅಪಘಾತ; ಗೋಕರ್ಣಕ್ಕೆ ತೆರಳುತ್ತಿದ್ದ 6 ಮಂದಿ ಸಾವು: ಹಲವರಿಗೆ ಗಾಯ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…

8 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…

20 hours ago

ಬೆಂ. ಗ್ರಾ ಜಿಲ್ಲೆಯಲ್ಲಿ ಶೇ.87.44ರಷ್ಟು ಎನ್ಯುಮರೇಷನ್ ಫಾರ್ಮ್ ವಿತರಣೆ- ಡಿಸಿ ಡಾ.ಕೆ ಎನ್ ಅನುರಾಧ

ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…

23 hours ago

ವಸತಿ ಶಾಲೆಯಲ್ಲಿ ಅನುಮಾನಾಸ್ಪದ ವಿದ್ಯಾರ್ಥಿ ಸಾವು: ಶಿಕ್ಷಕರ ವಿರುದ್ಧ ಪೋಷಕರ ಆರೋಪ

ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…

24 hours ago

ಭ್ರಷ್ಟಾಚಾರ ಆರೋಪ: ಮೂವರು ಅಧಿಕಾರಿಗಳ 14 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…

1 day ago