Categories: ಕೋಲಾರ

ಹಿಂದುಳಿದ ಸಮುದಾಯಗಳ ಪರವಾಗಿ ಇದ್ದೇವೆ-‌ ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ತೀರಾ ಹಿಂದುಳಿದ ಸಮುದಾಯ ಗಳಲ್ಲೊಂದಾದ ಸವಿತಾ ಸಮಾಜದ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಬದ್ದವಾಗಿದೆ ಸಮುದಾಯದ ಕಾರ್ಯಚಟುವಟಿಕೆಗಳಿಗೆ ಮುಂದಿನ ದಿನಗಳಲ್ಲಿ ಜಮೀನು ಸೇರಿದಂತೆ ರಾಜಕೀಯ ಸ್ಥಾನಮಾನವನ್ನು ನೀಡಲಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಮಂಗಳವಾರ ರಾಜ್ಯ ಸವಿತಾ ಸಮಾಜದ ಜಿಲ್ಲಾ ಘಟಕದಿಂದ ಅಮೋಘ ನಾದಸ್ವರ ಕಛೇರಿ ಹಾಗೂ ಗಣ್ಯರಿಗೆ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ಷೌರಿಕ ವೃತ್ತಿಯನ್ನು ನಂಬಿ ಬದುಕು ಕಟ್ಟಿಕೊಳ್ಳುತ್ತಿರುವ ಸವಿತಾ ಸಮಾಜವು ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಹಿಂದುಳಿದ ಸಮುದಾಯಗಳ ಪರವಾಗಿ ಕಾಂಗ್ರೆಸ್ ಸರ್ಕಾರವು ಇದ್ದು ಮುಂದಿನ ದಿನಗಳಲ್ಲಿ ನಡೆಯುವ ಗ್ರಾಪಂ, ತಾಪಂ, ಜಿಪಂ ಸೇರಿದಂತೆ ನಾಮನಿರ್ದೇಶನದಲ್ಲಿ ಸಹ ಸಣ್ಣ ಸಣ್ಣ ಸಮುದಾಯಗಳನ್ನು ಗುರುತಿಸುವ ಕೆಲಸವಾಗಲಿದೆ ಎಂದರು.

ಅಂಬೇಡ್ಕರ್ ಕೊಟ್ಟ ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬರಿಗೂ ಬದುಕುವ ಅವಕಾಶ ನೀಡಲಾಗಿದೆ ಅದನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ಮೇಲೆ ಇದೆ ಸಮುದಾಯದ ಹಿರಿಯರ ಹಾದಿಯಲ್ಲಿ ನಾವು ಎಲ್ಲರೂ ನಡೆಯಬೇಕು ಸಣ್ಣ ಸಮಾಜ ಎಂಬ ಕೀಳುಹಿರಿಮೆ ಬಿಟ್ಟು ತಾವುಗಳು ಅವಕಾಶಗಳನ್ನು ಸೃಷ್ಟಿ ಮಾಡಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಸಣ್ಣ ಸಮುದಾಯಗಳನ್ನು ಎಲ್ಲಾ ರಾಜಕೀಯ ಪಕ್ಷಗಳು ಗುರುತಿಸಿ ಪೋತ್ಸಾಹಿಸಬೇಕು ರಾಜಕೀಯ ಪಕ್ಷಗಳು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡರೆ ಮಾತ್ರವೇ ಉತ್ತಮ ಭವಿಷ್ಯ ಕಾಣಲು ಸಾಧ್ಯವಿದೆ ನಿಮ್ಮ ಸಮಸ್ಯೆಗಳಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ಕೊಡಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ತಿರುಪತಿ ತಿರುಮಲ ದೇವಾಲಯ ಸಮಿತಿ ಸದಸ್ಯ ನರೇಶ್ ಕುಮಾರ್ ಮಾತನಾಡಿ, ಸಣ್ಣ ಸಮುದಾಯಗಳು ಒಗ್ಗಟ್ಟಿನಿಂದ ತಮ್ಮ ಶಕ್ತಿ ತೋರಿಸದೆ ಹೋದರೆ ಪ್ರತಿ ಹಂತದಲ್ಲೂ ನಮ್ಮನ್ನು ಗುರುತಿಸುವುದಿಲ್ಲ ರಾಜಕೀಯವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮುದಾಯವು ಬೆಳಯಬೇಕು ಸರ್ಕಾರಗಳು ಸಹ ಪೋತ್ಸಾಹಿಸಿ ಗೌರವಿಸುವ ಕೆಲಸವಾಗಬೇಕು ಸಮುದಾಯವು ಮೂರು ವೃತ್ತಿಯಲ್ಲಿ ಇದ್ದರು ಸರಿಯಾದ ಸ್ಥಾನಮಾನಗಳು ದೊರೆಯುತ್ತಿಲ್ಲ ಎಂದರು.

ಈ ಸಂದರ್ಭದಲ್ಲಿ ಪಿಟೀಲು ಚೌಡಯ್ಯ ಪ್ರಶಸ್ತಿ ಪುರಸ್ಕೃತ ಆರ್ ಶ್ರೀರಾಮಲು ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಸವಿತಾ ಸಮಾಜದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಕಿರಣ್ ಕುಮಾರ್, ಜಿಲ್ಲಾ ಅಧ್ಯಕ್ಷ ಎಸ್ ಮಂಜುನಾಥ್, ವಿಜಯನಗರ ಮಂಜುನಾಥ್, ಮುಖಂಡರಾದ ಪುಟ್ಟುರಾಜು, ಮುನಿರಾಜು, ಚಲಪತಿ, ಗಂಗಣ್ಣ, ಸದಾನಂದ, ಮುಂತಾದವರು ಇದ್ದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

17 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

1 day ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago