ಕೆಎಸ್ ಆರ್ ಟಿಸಿ ಬಸ್ ಗೆ ಬೈಕ್ ಹ್ಯಾಂಡಲ್ ತಗುಲಿ ಬೈಕ್ ಸಮೇತ ಇಬ್ಬರು ಕೆಳಗೆ ಬಿದ್ದಿದ್ದಾರೆ. ಹಿಂದಿನಿಂದ ಬಂದ ಕ್ಯಾಂಟರ್ ಬೈಕ್ ಮೇಲೆ ಹರಿದಿದೆ. ಈ ವೇಳೆ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದಾನೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಿಹಳ್ಳಿ ಹಾಗೂ ಕಂಟನಕುಂಟೆ ಮಾರ್ಗ ಮಧ್ಯದ ಹಸನಘಟ್ಟ ಗೇಟ್ ಬಳಿ ಇಂದು ರಾತ್ರಿ 8 ಗಂಟೆ ಸಮಯದಲ್ಲಿ ಘಟನೆ ನಡೆದಿದೆ.
ಹಿಟ್ ಆಂಡ್ ರನ್ ಪ್ರಕರಣದಲ್ಲಿ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಪುರಾ ಗ್ರಾಮದ ಉಪೇಂದ್ರ(27) ಎಂಬ ವ್ಯಕ್ತಿ ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. ಚಂದ್ರಶೇಖರ್ ಗಾಯಗೊಂಡಿರುವ ವ್ಯಕ್ತಿ. ಈತ ಮಲತ್ತಹಳ್ಳಿಯ ನಿವಾಸಿಯಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೃತ ಉಪೇಂದ್ರ ಮಲತ್ತಹಳ್ಳಿಯ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆ ಬಂದಿದ್ದು, ಊರಿಗೆ ವಾಪಸ್ ಹೋಗುವ ವೇಳೆ ಘಟನೆ ನಡೆದಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಹಾಗೂ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಓವರ್ ಟೇಕ್ ಮಾಡುವಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…